ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ವಿಪಕ್ಷೀಯರ ಮೇಲೆ ಅಶ್ಲೀಲ ಪದ ಬಳಕೆ ನಿಲ್ಲಿಸಲಿ; ರಾಜ್ ಠಾಕ್ರೆ

1

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಸದಸ್ಯರಿಗೆ ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ ಸೂಚನೆ ನೀಡಬೇಕೆಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ ಶನಿವಾರ ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಕ್ರಮಕ್ಕೆ ಆದೇಶಿಸಿದವರು ಯಾವಾಗ ಕ್ಷಮೆಯಾಚಿಸುತ್ತಾರೆ ಎಂದು ರಾಜ್ ಠಾಕ್ರೆ ಇದೇ ವೇಳೆ ಪ್ರಶ್ನಿಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮ ನಡೆದಿದ್ದಕ್ಕೆ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಕಾಕ್ರೋಚ್ ಜನತಾ ಪಕ್ಷದ ಸದಸ್ಯರು ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಯುವಕರು ಪ್ರಧಾನಿ ಮೋದಿ ವಿರುದ್ಧ ಅಸಭ್ಯ ಶಬ್ದ ಪ್ರಯೋಗ ಮಾಡಿ ನಿಂದಿಸಿದ್ದರು. ಅಷ್ಟೇ ಅಲ್ಲದೇ ಮೋದಿ ಅವರ ತಾಯಿಯನ್ನೂ ನಿಂದಿಸಿದ್ದರು.
ಯುವ ಸಮೂಹದ ಈ ನಡೆಗೆ ದೇಶಾದ್ಯಂತ ತೀವ್ರ ಟೀಕೆ ವ್ಯಕ್ತವಾಗಿ, ಕಾನೂನು ಕ್ರಮಕ್ಕೆ ಆಗ್ರಹಿಸಲಾಗಿತ್ತು. ಹಿನ್ನೆಲೆಯಲ್ಲಿ ಇನ್ಸ್ಟಾಗ್ರಾಮ್ ವಿಡಿಯೋ ಮೂಲಕ ಮಾತನಾಡಿದ್ದ ಪ್ರಧಾನಿ ಮೋದಿ ಕಾನೂನು ಕ್ರಮವೇ ಸಮಸ್ಯೆಗೆ ಪರಿಹಾರವಲ್ಲ ಎಂದು ಹೇಳಿದ ಅವರು, ದಾರಿತಪ್ಪಿದ ಮಕ್ಕಳಿಗೆ ಸರಿಯಾದ ದಾರಿ ತೋರಿಸಬೇಕು. ನಾನು ಅವರನ್ನು ಕ್ಷಮಿಸಲು ಬಯಸುತ್ತೇನೆ. ತಪ್ಪುಗಳು ಆಗುತ್ತವೆ. ಆದರೆ ನಮ್ಮ ಹೆಣ್ಣುಮಕ್ಕಳು ಇಂತಹ ನಿಂದನಾತ್ಮಕ ಭಾಷೆ ಬಳಸುತ್ತಿರುವುದು ಸಾಂಸ್ಕೃತಿಕ ಆಘಾತವಾಗಿದೆ ಎಂದು ಹೇಳಿದ್ದರು
ಪ್ರಧಾನಿ ಅವರ ಈ ಹೇಳಿಕೆ ಬೆನ್ನಲ್ಲೇ ಮಾತನಾಡಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ ಶನಿವಾರ ಬಿಜೆಪಿ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ ಬಿಜೆಪಿ ನಾಯಕರಿಗೂ ಪ್ರಧಾನಿ ಮೋದಿ ಸೂಚನೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಎಂಎನ್‌ಎಸ್‌ನ ವಿದ್ಯಾರ್ಥಿ ವಿಭಾಗವಾದ ಮಹಾರಾಷ್ಟ್ರ ನವನಿರ್ಮಾಣ ವಿದ್ಯಾರ್ಥಿ ಸೇನಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೀಟ್ ಪತ್ರಿಕೆ ಸೋರಿಕೆ ವಿಷಯ ಯುವಜನರ ನೇತೃತ್ವದ ಪ್ರತಿಭಟನೆಗೆ ಕೇವಲ ಒಂದು ಪ್ರಚೋದಕವಾಗಿದ್ದರೂ, ಅದಕ್ಕೆ ದೊರೆತ ಅಗಾಧ ಪ್ರತಿಕ್ರಿಯೆಯು ಈ ಹಿಂದಿನ ವರ್ಷಗಳಲ್ಲಿ ಸಂಗ್ರಹವಾದ ಎಲ್ಲಾ ಕುಂದುಕೊರತೆಗಳ ಮೊತ್ತವಾಗಿದೆ ಎಂದು ಹೇಳಿದರು.

ಎಲ್ಲಾ ಚಳವಳಿಗಾರರು ವಿದ್ಯಾರ್ಥಿಗಳಲ್ಲ, ಆದರೂ ಅವರು ಏಕೆ ಪ್ರತಿಭಟಿಸಿದರು?” ಎಂದು ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ. ಯುವಕರ ಆಕ್ರೋಶ ಮತ್ತು ಅವರ ಭವಿಷ್ಯಕ್ಕೆ ಸಂಬಂಧಿಸಿದಂತೆ ಈ ಪ್ರತಿಭಟನೆಗಳು ಮುಂದುವರಿಯುತ್ತದೆ ಎಂದು ಅವರು ಹೇಳಿದರು. “ನಾನು ಪ್ರಧಾನಿ ಹೇಳಿಕೆಯನ್ನು ಒಪ್ಪುತ್ತೇನೆ. ಯಾರೂ ಅಂತಹ ಕೀಳು ಮಟ್ಟದ ಭಾಷೆಯನ್ನು ಬಳಸಬಾರದು. ಆದರೆ ಅವರು ತಮ್ಮದೇ ಪಕ್ಷದ ಜನರಿಗೂ ನಿಂದನೆಯ ಭಾಷೆ ಬಳಸದಂತೆ ಹೇಳಬೇಕು” ಎಂದು ಆಗ್ರಹಿಸಿದ್ದಾರೆ.
ಬಿಜೆಪಿ ಟ್ರೋಲ್‌ಗಳು ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಇಂದಿರಾ ಗಾಂಧಿಯಿಂದ ಠಾಕ್ರೆಗಳವರೆಗೆ ಐಕಾನ್‌ಗಳನ್ನು ಸಹ ಗುರಿಯಾಗಿಸಿಕೊಂಡಿದ್ದಾರೆ ಎಂದು ಎಂಎನ್‌ಎಸ್ ಮುಖ್ಯಸ್ಥರು ಹೇಳಿದರು. “ಅವರೂ (ಬಿಜೆಪಿ ಬೆಂಬಲಿಗರು) ಸಹ (ಅವಮಾನಕರ ಭಾಷೆಯನ್ನು ಬಳಸುವುದನ್ನು) ನಿಲ್ಲಿಸಬೇಕು. ಬಿಜೆಪಿ ಟ್ರೋಲ್ ತಂಡಗಳು ಇದನ್ನು ಪ್ರಾರಂಭಿಸಿದವು. ನೀವು ಬಿತ್ತಿದ್ದನ್ನೇ, ಮರಳಿ ಪಡೆಯುತ್ತೀರಿ” ಎಂದು ರಾಜ್ ಠಾಕ್ರೆ ಹೇಳಿದ್ದಾರೆ. ಇತರ ಜನರಿಗೆ ಸಹ ತಾಯಂದಿರಿದ್ದಾರೆ ಮತ್ತು ಅವರನ್ನೂ ನಿಂದಿಸಬಾರದು ಎಂದು ರಾಜ್ ಠಾಕ್ರೆ ಹೇಳಿದ್ದಾರೆ.

“ದೇಶದಲ್ಲಿ ಅಧಿಕಾರದಲ್ಲಿರುವ 12 ವರ್ಷಗಳಲ್ಲಿ ಬಿಜೆಪಿ ಮಾಡಿದ್ದಕ್ಕೆ ಯಾರು ಕ್ಷಮೆಯಾಚಿಸುತ್ತಾರೆ” ಎಂದು ಠಾಕ್ರೆ ಪ್ರಶ್ನಿಸಿದ್ದಾರೆ. “ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಕ್ರಮಕ್ಕೆ ಆದೇಶಿಸಿದವರು ಯಾವಾಗ ಕ್ಷಮೆಯಾಚಿಸುತ್ತಾರೆ?” ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಕೇಂದ್ರ ಜಲಶಕ್ತಿ ಸಚಿವಾಲಯ

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ...

ಕಾಕ್ರೋಚ್ ಜನತಾ ಪಕ್ಷಕ್ಕೆ 1 ಕೋಟಿ ದೇಣಿಗೆ ನೀಡಿ ಕಾನೂನು ನೆರವು ಉಚಿತ ಎಂದ ಕಪಿಲ್ ಸಿಬಲ್

“ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು...

ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಮಂಡನೆಗೆ ದೆಹಲಿಯಲ್ಲಿ ರಾಜ್ಯದ ಸಂಸದರ ಸಭೆ ನಡೆಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ಜಲಸಂಪನ್ಮೂಲ ಇಲಾಖೆಯನ್ನು ಹೊರತುಪಡಿಸಿ ಕೇಂದ್ರ ಸರ್ಕಾರದಿಂದ ಬಾಕಿ ಇರುವ ಪ್ರಮುಖ ಯೋಜನೆಗಳಿಗೆ ಅನುಮೋದನೆ, ಅನುದಾನಗಳು...

ನೀಟ್ ಪರೀಕ್ಷೆ ನಡೆಸುವ ಎನ್ ಟಿಎನಲ್ಲಿ ಮಹತ್ವದ ಬದಲಾವಣೆ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರಕಾರ

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿ ಪ್ರತಿಭಟನೆ ದೇಶಾದ್ಯಂತ ಹಬ್ಬುತ್ತಿದ್ದಂತೆ ಎಚ್ಚೇತ ಕೇಂದ್ರ...