ರಾಜ್ಯ ಸಚಿವ ಸಂಪುಟ ಕೋಟಿ ಕೋಟಿ ಮಾತುಕತೆಯ ಆಡಿಯೋಬಿಡುಗಡೆ ಮಾಡಿದ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ

1

“ಬೆಂಗಳೂರು: ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಕಳೆದ ಸೋಮವಾರ ವಿಸ್ತರಣೆಯಾಗಿದ್ದು, 19 ಕಾಂಗ್ರೆಸ್ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ, ಸಂಪುಟ ವಿಸ್ತರಣೆ ಹಾಗೂ ‘ಪೇಮೆಂಟ್ ಸೀಟ್’ ಹಂಚಿಕೆ ಕುರಿತು ಶಾಸಕ ಆರ್. ಬಿ. ತಿಮ್ಮಾಪುರ ಮತ್ತು ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ಆಡಿಯೋ ಸಂಭಾಷಣೆ ಇದೀಗ ವೈರಲ್ ಆಗಿದೆ
. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಡಿಯೋ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಆಡಿಯೋ ಸಂಭಾಷಣೆ ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತವನ್ನು ಮತ್ತೆ ಬೀದಿಗೆ ತಂದಿದ್ದು, ಪ್ರತಿಪಕ್ಷಗಳಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ.
ಕಳಂಕಿತರಿಗೆ ಹೆಚ್ಚು ಹಣ ನೀಡಿದವರಿಗೆ ಸಚಿವ ಸ್ಥಾನ ನೀಡಲಾಗಿದೆ. ವಾಲ್ಮೀಕಿ ನಿಗಮ ಹಗರಣದ ಕಳಂಕಿತರಾಗಿದ್ದ ನಾಗೇಂದ್ರಗೆ ಸಚಿವ ಸ್ಥಾನ ನೀಡಲಾಗಿದೆ. ಹಗರಣದ ಬಗ್ಗೆ ನಾಗೇಂದ್ರ ಎಲ್ಲರ ಹೆಸರು ಹೇಳುತ್ತೇನೆ ಅಂತ ಹೇಳಿದ್ರಂತೆ. ಹೀಗಾಗಿ ನಾಗೇಂದ್ರರನ್ನು ಸಚಿವರನ್ನಾಗಿ ಮಾಡಲಾಗಿದೆ ಎಂದು ವಾಗ್ದಾಳಿ ನಡೆಸಿದರು. ಇನ್ನೊಬ್ಬರು ನನ್ನ ಮರ್ಯಾದೆ ಪ್ರಶ್ನೆ ಅಂತ ಹೆಚ್ಚು ಹಣ ಕೊಟ್ಟಿದ್ದಾರಂತೆ. ಹೆಚ್ಚು ಹಣ ನೀಡಿದವರಿಗೆ ಸಚಿವ ಸ್ಥಾನ ನೀಡಲಾಗಿದೆ. ಈ ವಿಚಾರದಲ್ಲಿ ಹಿಂದೆ ನಾವು ಮಾಡಿದ್ದ ಆರೋಪ ಈಗ ಸಾಬೀತಾಗಿದೆ ಆಡಿಯೋದಲ್ಲಿ ಮಾತಾಡಿರುವುದು ತಿಮ್ಮಾಪುರ ಮತ್ತು ನಂಜಯ್ಯನಮಠ ಇಬ್ಬರೂ ಕಾರಿನಲ್ಲಿ ಮಾತಾಡಿರೋ ಆಡಿಯೋ ರೆಕಾರ್ಡ್ ಮಾಡಲಾಗಿದೆ ಎಂದರು. ಈಗ ನಾಗೇಂದ್ರ ದೆಹಲಿಗೆ ಹೋಗದಂತೆ ಕೊರ್ಟ್ ಆದೇಶಿಸಿದೆ. ಇಂತಹ ಕಳಂಕಿತರು ಸಂಪುಟದಲ್ಲಿ ಇರಲು ಸಾಧ್ಯವೇ ಇಲ್ಲ .ನಾಗೇಂದ್ರ ರಾಜೀನಾಮೆ ಪಡೆಯುವವರೆಗೆ ಮತ್ತೆ ಹೋರಾಟ ಮಾಡುತ್ತೇವೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

Leave a comment

Leave a Reply

Your email address will not be published. Required fields are marked *

Related Articles

ಕೊನೆ ಕ್ಷಣಗಳಲ್ಲಿ ಬದಲಾದ ಸಚಿವ ಸಂಪುಟ 20 ನೂತನ ಸಚಿವರ ಬದಲು 19 ನೂತನ ಸಚಿವರ ಪ್ರಮಾಣವಚನ ಸ್ವೀಕಾರ

“ಬೆಂಗಳೂರು: ಕೊನೆಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ಸಂಜೆ ವಿಸ್ತರಣೆಯಾಗಿದೆ. ಕಾಂಗ್ರೆಸ್...

ಕಾವೇರಿ ನೀರು ಹಂಚಿಕೆ ಸರ್ವಪಕ್ಷ ಸಭೆ ರಾಜಕೀಯಕ್ಕಿಂತ ರಾಜ್ಯದ ಹಿತಾಸಕ್ತಿ ಮುಖ್ಯ ::ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜಕೀಯಕ್ಕಿಂತ ರಾಜ್ಯದ ರೈತರು ಮತ್ತು ಜನರ ಹಿತವೇ...

ಬಾಂಗ್ಲಾದೇಶಿಯರ ಮಾಹಿತಿ ನೀಡಿದ ಭಾರತೀಯ ಪ್ರಜೆ ವಿರುದ್ಧ ಹಲ್ಲೆ ಪ್ರಕರಣ ನಿಮ್ಮ ಓಲೈಕೆ ನಿಲ್ಲಿಸಿ  ರಾಜ್ಯ ಸರಕಾರಕ್ಕೆ ಹೈಕೋರ್ಟ್ ಚಾಟಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದವರ ಬಗ್ಗೆ ಮಾಹಿತಿ ನೀಡಿದ ಸಾಮಾಜಿಕ ಕಾರ್ಯಕರೊಬ್ಬರ ವಿರುದ್ಧ ಹಲ್ಲೆ...

ಬಿಪಿಎಲ್ ಕಾರ್ಡ್ ವಾರ್ಷಿಕ ಆದಾಯದ ಮಿತಿ, 3 ಲಕ್ಷ ನಿಗದಿಗೆ ಕ್ರಮ- ಸಚಿವ ಕೆ ಹೆಚ್ ಮುನಿಯಪ್ಪ

ಬೆಂಗಳೂರು: ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯದ ಮಿತಿಯನ್ನು 3 ಲಕ್ಷ ರೂಗೆ ಹೆಚ್ಚಿಸಲು ಕ್ರಮ...