ಮಂಗಳೂರು ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ರ‍್ಯಾಗಿಂಗ್ ಪ್ರಕರಣ ದಾಖಲು ಐವರು ವಿದ್ಯಾರ್ಥಿಗಳ ಬಂಧನ

1

ಮಂಗಳೂರು: ನಗರದ ಖಾಸಗಿ ಕಾಲೇಜೊಂದರಲ್ಲಿ ರ‍್ಯಾಗಿಂಗ್ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಐವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಹಿರಿಯ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಕಾಲೇಜು ಆವರಣದ ಒಳಗೆ ಮತ್ತು ಹೊರಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಶ್ರೀನಿವಾಸ ಖಾಸಗಿ ಕಾಲೇಜಿನಲ್ಲಿ ಸೀನಿಯರ್ ವಿದ್ಯಾರ್ಥಿಗಳು ಕಾಲೇಜಿನ ಒಳಗೆ ಅಷ್ಟೇ ಅಲ್ಲ, ಹೊರಗೆ ತಮ್ಮ ರೂಮಿಗೆ ಕರೆದೊಯ್ದು ಕಿರುಕುಳ ಕೊಡ್ತಿದ್ದಾರೆ ಎಂದು ಜೂನಿಯರ್ಸ್ ಆರೋಪ ಮಾಡ್ತಿದ್ದಾರೆ.
ಈ ಸಂಬಂಧ ಇಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಗಳು ನೀಡಿದ ದೂರಿನ ಮೇರೆಗೆ, ರ‍್ಯಾಗಿಂಗ್ ವಿರೋಧಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ. ರ‍್ಯಾಗಿಂಗ್ ಕಿರುಕುಳಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ಗಾಯಗಳಾಗಿರುವುದರಿಂದ, ಹಲ್ಲೆಗೆ ಸಂಬಂಧಿಸಿದ ಹೆಚ್ಚುವರಿ ಆರೋಪಗಳನ್ನು ಕೂಡ ಪ್ರಕರಣದಲ್ಲಿ ಸೇರಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ದೂರುದಾರರ ಪ್ರಕಾರ, ಜೆಪ್ಪು ಪ್ರದೇಶದ ಗುಜರೆಕೆರೆ ಕೆರೆಯ ಸಮೀಪವಿರುವ ಚಹಾ ಅಂಗಡಿಯೊಂದರ ಬಳಿ ಹಿರಿಯ ವಿದ್ಯಾರ್ಥಿಗಳ ಗುಂಪೊಂದು ತಮ್ಮ ಮೇಲೆ ಹಲ್ಲೆ ನಡೆಸಿದೆ. ನೀವು ಶೂ ಧರಿಸಬಾರದು” ಎಂದು ವಿನಾಕಾರಣ ಡ್ರೆಸ್ ಕೋಡ್ ಹೇರಲು ಯತ್ನಿಸಿದೆ. ಜೂನಿಯರ್‌ಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ, ಸೀನಿಯರ್ಸ್ ಕಡೆಯಿಂದ ತೀವ್ರ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ಸಂತ್ರಸ್ತ ವಿದ್ಯಾರ್ಥಿಗಳು ಹಾಗೂ ಹಲ್ಲೆ ನಡೆಸಿದ ಆರೋಪಿಗಳು ಕೇರಳ ಮೂಲದವರು ಎಂದು ಕಮೀಷನರ್ ಮಾಹಿತಿ ನೀಡಿದ್ದಾರೆ.
ತಮ್ಮ ಖಾಸಗಿ ರೂಮ್ ಗೆ ಕರೆದುಕೊಂಡು ಹೋಗುವ ಸೀರಿಯರ್ ಸ್ಟೂಡೆಂಟ್ಸ್ ಅಲ್ಲೇ ಬಟ್ಟೆ ಬಿಚ್ಚಿಸಿ ಕೇವಲ ಒಳ ಉಡುಪಿನಲ್ಲಿ ಕೂರಿಸಿ ಹಿಂಸೆ ನೀಡ್ತಿದ್ದಾರೆ ಎಂದು ಕೆಲ ವಿದ್ಯಾರ್ಥಿಗಳು ದೂರಿದ್ದಾರೆ. ಕರೆದಾಗ ರೂಮ್ಗೆ ಹೋಗದೆ ಇದ್ದರೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸ್ತಾರೆ ಎನ್ನುವ ಆರೋಪ ಸಹ ಕೇಳಿ ಬಂದಿದೆ. ತನಿಖಾಧಿಕಾರಿಗೆ ಪ್ರಕರಣದಲ್ಲಿ ರ‍್ಯಾಗಿಂಗ್ ನಿರೋಧಕ ಕಾಯ್ದೆಯ ಸೂಕ್ತ ಕಲಂಗಳನ್ನು ಸೇರ್ಪಡೆಗೊಳಿಸಿ, ಬಂಧಿತರನ್ನು ಮ್ಯಾಜಿಸ್ಟ್ರೇಟ್‌ ಎದುರು ಹಾಜರುಪಡಿಸಲು ಸೂಚಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ, ಹುಕ್ಕಾ ಸೇವನೆಗೆ ಅವಕಾಶ ಪೊಲೀಸರಿಂದ ಮಣಿಪಾಲ್ ಪಬ್ ಗಳ ಮೇಲೆ ದಾಳಿ

ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ ಪೂರೈಸಿದ ಆರೋಪದ ಮೇಲೆ...

ಪಡುಬಿದ್ರಿ  ಕಡಲು ಕೊರೆತದಿಂದ ರಕ್ಷಣೆಗೆ  ತಡೆಗೋಡೆ ನಿರ್ಮಾಣಕ್ಕೆ ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ ವಿ ಅಮೀನ್ ಮನವಿ

ಪಡುಬಿದ್ರಿ, ಜು. 4:** ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ...

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್...

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...