ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಯವರಿಗೆ ಗುರುವಂದನೆ

1

ಉಡುಪಿ: ಗುರುಪೂರ್ಣಿಮೆಯ ಪ್ರಯುಕ್ತ ಅಧಿವಕ್ತ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಅಮೋಘ ಸೇವೆ ಸಲ್ಲಿಸಿರುವ ಹಿರಿಯ ವಕೀಲರಾದ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗೌರವಪೂರ್ವಕವಾಗಿ ಗುರುವಂದನೆ ಸಲ್ಲಿಸಿ, ಅಭಿನಂದಿಸಲಾಯಿತು.

ಕಾನೂನು ಕ್ಷೇತ್ರದಲ್ಲಿ ತಮ್ಮ ಅಪಾರ ಅನುಭವ ಹಾಗೂ ಜ್ಞಾನದಿಂದ ಶಿಷ್ಯವರ್ಗದವರಿಗೆ ಅಮೂಲ್ಯ ಮಾರ್ಗದರ್ಶನ ನೀಡಿರುವ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆಯವರ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಸಮಾಜದ ವಿವಿಧ ಕ್ಷೇತ್ರಗಳಿಗೆ ಅವರು ನೀಡಿರುವ ಕೊಡುಗೆ ಹಾಗೂ ವಕೀಲ ಸಮುದಾಯಕ್ಕೆ ನೀಡಿದ ಮಾರ್ಗದರ್ಶನವನ್ನು ಪ್ರಶಂಸಿಸಲಾಯಿತು.

ಅಧಿವಕ್ತ ಪರಿಷತ್‌ನ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಶ್ವೇತಾ ಜೈನ್ ಅವರು ಉಡುಪಿಗೆ ಭೇಟಿ ನೀಡಿ, ಹಿರಿಯ ವಕೀಲರಾದ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆಯವರಿಗೆ ಗುರುವಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಧಿವಕ್ತ ಪರಿಷತ್ ಉಡುಪಿ ಜಿಲ್ಲಾ ಅಧ್ಯಕ್ಷ *ಸಂತೋಷ್ ಹೆಬ್ಬಾರ್*, ಜಿಲ್ಲಾ ಪ್ರಧಾನ ಕಾರ್ಯದರ್ಶಿ *ಆರೂರು ಸುಕೇಶ್ ಶೆಟ್ಟಿ*, ಸದಸ್ಯರಾದ *ಶಶಿರಾಜ್ ಪೈಯಾರ್, ರಾಜೇಶ್ ಎ.ಆರ್., ಗಿರೀಶ್ ಎಸ್.ಪಿ., ನಿತೇಶ್ ಶೆಟ್ಟಿ ಮಟ್ಟಾರ್, ಜಯಂತ್ ರಾವ್, ಸುಚಿತಾ ಅರುಣ್ ಶೆಟ್ಟಿ, ರವೀಂದ್ರ ಬೈಲೂರು, ನಿತೀಶ್ ಶೆಟ್ಟಿ ಮಟ್ಟಾರ್ ಹಾಗೂ ಯತಿರಾಜ್*, ಕಾನೂನು ವಿದ್ಯಾರ್ಥಿ *ರಕ್ಷಿತ್ ಬೆಳಪು* ಹಾಗೂ ಬಿಜೆಪಿ ಓಬಿಸಿ ಮೋರ್ಚಾ ಕಾಪು ಮಂಡಲ ಅಧ್ಯಕ್ಷ *ಸಂತೋಷ್ ಮೂಡುಬೆಳ್ಳೆ* ಉಪಸ್ಥಿತರಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಮಂಗಳೂರು ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ರ‍್ಯಾಗಿಂಗ್ ಪ್ರಕರಣ ದಾಖಲು ಐವರು ವಿದ್ಯಾರ್ಥಿಗಳ ಬಂಧನ

ಮಂಗಳೂರು: ನಗರದ ಖಾಸಗಿ ಕಾಲೇಜೊಂದರಲ್ಲಿ ರ‍್ಯಾಗಿಂಗ್ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಐವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಹಿರಿಯ...

21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ, ಹುಕ್ಕಾ ಸೇವನೆಗೆ ಅವಕಾಶ ಪೊಲೀಸರಿಂದ ಮಣಿಪಾಲ್ ಪಬ್ ಗಳ ಮೇಲೆ ದಾಳಿ

ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ ಪೂರೈಸಿದ ಆರೋಪದ ಮೇಲೆ...

ಪಡುಬಿದ್ರಿ  ಕಡಲು ಕೊರೆತದಿಂದ ರಕ್ಷಣೆಗೆ  ತಡೆಗೋಡೆ ನಿರ್ಮಾಣಕ್ಕೆ ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ ವಿ ಅಮೀನ್ ಮನವಿ

ಪಡುಬಿದ್ರಿ, ಜು. 4:** ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ...

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್...