20 ವರ್ಷದಿಂದ ಸಂತ್ರಸ್ತ ರೈತರಿಗೆ ಭೂ ಒತ್ತುವರಿ ಪರಿಹಾರ ಬಾಕಿ ಗದಗ ಜಿಲ್ಲಾಧಿಕಾರಿ ಸರಕಾರಿ ಕಾರು ಕಚೇರಿ ಸೊತ್ತು ಜಪ್ತಿ

1

“ಗದಗ:  ಸರಕಾರ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡದಿದ್ದರೆ, ಏನು ಮಾಡುತ್ತಾರೆ? ಎಂದುಕೊಂಡರು ಅನಿಸುತ್ತೆ ಗದಗ ಜಿಲ್ಲಾಧಿಕಾರಿಗಳು! ಆದ್ರೆ, ಅದೇ ರೈತರು, ನ್ಯಾಯಾಂಗದ ಮೂಲಕ ಜಿಲ್ಲೆಯ ಪ್ರಥಮ ಪ್ರಜೆಗೆ ಸರಿಯಾದ ಪಾಠ ಮಾಡಿದ್ದಾರೆ.ಏನಿದು ಘಟನೆ? ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಭಾಗದಲ್ಲಿ, ಬಿಡನಾಳ, ಶೀರನಹಳ್ಳಿ, ಬರದೂರು, ಮೇವುಂಡಿ ಸೇರಿದಂತೆ 10ಕ್ಕೂ ಅಧಿಕ ಗ್ರಾಮಗಳ ರೈತರು ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕಾಲುವೆ ನಿರ್ಮಾಣಕ್ಕಾಗಿ ಸುಮಾರು 300 ಎಕರೆ ರೈತರ ಜಮೀನನ್ನು ಸರ್ಕಾರ ವಶಪಡಿಸಿಕೊಂಡಿತ್ತು.
ಆದರೆ, ಈ ಯೋಜನೆಗಾಗಿ ಜಮೀನು ಕಳೆದುಕೊಂಡು ಸುಮಾರು 20 ವರ್ಷಗಳು ಕಳೆದರೂ ಜಿಲ್ಲಾಡಳಿತ ಹಾಗೂ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ರೈತರಿಗೆ ನೀಡಬೇಕಾದ ಸೂಕ್ತ ಪರಿಹಾರದ ಹಣವನ್ನು ಬಿಡುಗಡೆ ಮಾಡದೆ ವಿಳಂಬ ಧೋರಣೆ ಅನುಸರಿಸಿದ್ದರು. ಈ ವಿಳಂಬದಿಂದ ಬೇಸತ್ತ ಗದಿಗೆಪ್ಪ ಎಂಬ ರೈತರು, ತಮಗೆ ನ್ಯಾಯ ಸಿಗಬೇಕೆಂದು 2015 ರಲ್ಲಿಯೇ ಗದಗ ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇನ್ನು ಆರಂಭದಲ್ಲಿ ಪ್ರತಿ ಎಕರೆಗೆ 50 ಸಾವಿರ ರೂಪಾಯಿ ನೀಡುವಂತೆ ಘೋಷಣೆ ಮಾಡಲಾಗಿತ್ತು. ಆದ್ರೆ ಪರಿಹಾರ ಮೊತ್ತ ಹೆಚ್ಚಿಸಬೇಕು ಎಂದು ರೈತರು 2017ರಲ್ಲಿ ಬೇಡಿಕೆ ಸಲ್ಲಿಸಿದ್ದರು. ಹಲವು ವರ್ಷಗಳ ಕಾಲ ನಡೆದ ಕಾನೂನು ಪ್ರಕ್ರಿಯೆಯ ಬಳಿಕ 2024ರಲ್ಲಿ ಎಕರೆಗೆ 40 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೋರ್ಟ್ ಆದೇಶ ಹೊರಡಿಸಿತ್ತು. ಆದ್ರೆ ಕೋರ್ಟ್ ಆದೇಶವಾಗಿ ಎರಡು ವರ್ಷ ಕಳೆದರೂ ಪರಿಹಾರ ಮಾತ್ರ ಸಿಕ್ಕಿಲ್ಲ. ಮುಂದುವರೆದು, ರೈತನ ಅರ್ಜಿಯನ್ನು ಪುರಸ್ಕರಿಸಿದ ಗದಗ ಜಿಲ್ಲಾ ನ್ಯಾಯಾಲಯವು, ಬಾಕಿ ಇರುವ ಬೃಹತ್ ಪರಿಹಾರ ಮೊತ್ತವನ್ನು ಪಾವತಿಸದ ಕಾರಣ ಜಿಲ್ಲಾಧಿಕಾರಿ ಕಚೇರಿಯ ಆಸ್ತಿ ಹಾಗೂ ಕಾರನ್ನು ಜಪ್ತಿ ಮಾಡಲು ಆದೇಶಿಸಿತು. ಅದರಂತೆ, ನ್ಯಾಯಾಲಯದ ಆದೇಶದ ಪ್ರತಿ ಹಾಗೂ ಜಪ್ತಿ ಮಾಡುವ ಅಧಿಕಾರ ಹೊಂದಿದ್ದ ಕೋರ್ಟ್ ಸಿಬ್ಬಂದಿ ಮತ್ತು ವಕೀಲರು ನೇರವಾಗಿ ಗದಗ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ, ಜಿಲ್ಲಾಧಿಕಾರಿಗಳ ಅಧಿಕೃತ ಸರ್ಕಾರಿ ವಾಹನವನ್ನು (ಕಾರು) ಕೂಡ ಕೋರ್ಟ್ ಆದೇಶದ ಅನ್ವಯ ವಶಪಡಿಸಿಕೊಂಡರು. ಇದರೊಂದಿಗೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿದ್ದ ಕಂಪ್ಯೂಟರ್‌ಗಳು, ಮಾನಿಟರ್‌ಗಳು, ಜೆರಾಕ್ಸ್ ಯಂತ್ರಗಳು ಮತ್ತು ಪ್ರಮುಖ ಕಚೇರಿ ಪೀಠೋಪಕರಣಗಳನ್ನು ಸಿಬ್ಬಂದಿ ಅಧಿಕೃತವಾಗಿ ಜಪ್ತಿ ಮಾಡಿಕೊಂಡರು. ಏತನ್ಮಧ್ಯೆ, ಈ ಯೋಜನೆಯಡಿ ಭೂಮಿ ಕಳೆದುಕೊಂಡಿರುವ ಸುಮಾರು 600ಕ್ಕೂ ಹೆಚ್ಚು ರೈತ ಕುಟುಂಬಗಳು ಕಳೆದ ಎರಡು ದಶಕಗಳಿಂದ ಇಂದಿಗೂ ಸೂಕ್ತ ಪರಿಹಾರ ಸಿಗದೆ ಕಷ್ಟ ಅನುಭವಿಸುತ್ತಿದ್ದಾರೆ. ಆದ್ರೆ, ಪ್ರಕರಣವು ಹೈಕೋರ್ಟ್‌ನಲ್ಲಿದೆ ಅಥವಾ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ಸುಳ್ಳು ನೆಪಗಳನ್ನು ಹೇಳುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ರೈತ ಸಂಘಟನೆಗಳು ಆಕ್ರೋಶ ಹೊರಹಾಕಿವೆ.

Leave a comment

Leave a Reply

Your email address will not be published. Required fields are marked *

Related Articles

ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಸಿಕ್ಕ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು, ಯುವತಿಯರ ಅಶ್ಲೀಲ ಫೋಟೂ ಕಟಿಂಗ್ ಪತ್ತೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆ ಹಿನ್ನೆಲೆ ಸಿಸಿಬಿ ಪೊಲೀಸರ ತಂಡ ದಿಢೀರ್ ದಾಳಿ...

ರೇಣುಕಾಸ್ವಾಮಿ ಪ್ರಕರಣ ನಟ ದರ್ಶನ್ ಗೆ ಸಂಕಸ್ಟ ಆರೋಪಿ ಪ್ರದೋಷನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಕೋರ್ಟ್ ಅನುಮತಿ

“ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ...

ಕೆಪಿಎಸ್ ಸಿ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಮಾಹಿತಿ ಸೋರಿಕೆ ಇಬ್ಬರು ಸಿಬ್ಬಂದಿಗಳ ಬಂಧನ

ಬೆಂಗಳೂರು: ಸದಾ ಅಕ್ರಮಗಳಿಂದಲೇ ಸದ್ದು ಮಾಡುವ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ)ದ ನೇಮಕಾತಿ ಪ್ರಕ್ರಿಯೆಯಲ್ಲಿ ಈಗ...

ರಾಜ್ಯ ಸಚಿವ ಸಂಪುಟ ಕೋಟಿ ಕೋಟಿ ಮಾತುಕತೆಯ ಆಡಿಯೋಬಿಡುಗಡೆ ಮಾಡಿದ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ

“ಬೆಂಗಳೂರು: ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಕಳೆದ ಸೋಮವಾರ ವಿಸ್ತರಣೆಯಾಗಿದ್ದು, 19...