ವ್ಯಸನಮುಕ್ತ ಭಾರತ  ವಿದ್ಯಾರ್ಥಿಗಳು ಹಾಗೂ ಯುವಜನತೆಯ ಸಂಕಲ್ಪವಾಗಬೇಕು  : ಮಾಜಿ ನಗರಸಭಾ ಸದಸ್ಯ ಕೆ. ವಿಜಯ ಕೊಡವೂರು

1


ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಉಡುಪಿ, ಅಂಬಾಗಿಲು ವಲಯ ಹಾಗೂ ನಿಟ್ಟೂರು ಪ್ರೌಢಶಾಲೆಯ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ‘ಸ್ವಾಸ್ಥ್ಯ ಸಂಕಲ್ಪ’ ಹಾಗೂ ಪೋಷಕರಿಗಾಗಿ ‘ಪಾಲಕ’ ಜಾಗೃತಿ ಕಾರ್ಯಕ್ರಮವನ್ನು ನಿಟ್ಟೂರು ಪ್ರೌಢಶಾಲೆಯಲ್ಲಿ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ನಗರಸಭಾ ಸದಸ್ಯ ಶ್ರೀ ಕೆ. ವಿಜಯ ಕೊಡವೂರು ಅವರು, “ವಿದ್ಯಾರ್ಥಿಗಳು ಈ ದೇಶದ ನಿಜವಾದ ಆಸ್ತಿ ಹಾಗೂ ಭವಿಷ್ಯದ ರೂವಾರಿಗಳು. ಯುವಜನತೆ ಮತ್ತು ವಿದ್ಯಾರ್ಥಿಗಳು ಯಾವುದೇ ದುರಭ್ಯಾಸ ಅಥವಾ ವ್ಯಸನಗಳಿಗೆ ಬಲಿಯಾಗದೆ ಸನ್ಮಾರ್ಗದಲ್ಲಿ ಸಾಗಬೇಕು. ನಮ್ಮ ದೇಶದಿಂದ ವ್ಯಸನಗಳನ್ನು ಸಂಪೂರ್ಣವಾಗಿ ದೂರವಿಟ್ಟು ಬಲಿಷ್ಠ ಭಾರತವನ್ನು ನಿರ್ಮಾಣ ಮಾಡಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜಾಗೃತಿ ಕಾರ್ಯಕ್ರಮಗಳ ಮೂಲಕ ನಿರಂತರವಾಗಿ ಶ್ರಮಿಸುತ್ತಿದೆ,” ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಹಾಗೂ ಪ್ರಮುಖರಾಗಿ ಶ್ರೀ ದಿನೇಶ್ ಆಚಾರ್ಯ, ನಿಟ್ಟೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ರಾಮದಾಸ, ಅಂಬಾಗಿಲು ವಲಯದ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮಾ ಹಾಗೂ ಸೇವಾಪ್ರತಿನಿಧಿ ಶ್ರೀಮತಿ ರಾಧಾ ಉಪಸ್ಥಿತರಿದ್ದರು.ಯೋಜನೆ (ರಿ.), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಉಡುಪಿ, ಅಂಬಾಗಿಲು ವಲಯ ಹಾಗೂ ನಿಟ್ಟೂರು ಪ್ರೌಢಶಾಲೆಯ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ‘ಸ್ವಾಸ್ಥ್ಯ ಸಂಕಲ್ಪ’ ಹಾಗೂ ಪೋಷಕರಿಗಾಗಿ ‘ಪಾಲಕ’ ಜಾಗೃತಿ ಕಾರ್ಯಕ್ರಮವನ್ನು ನಿಟ್ಟೂರು ಪ್ರೌಢಶಾಲೆಯಲ್ಲಿ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು.

.

Leave a comment

Leave a Reply

Your email address will not be published. Required fields are marked *

Related Articles

ಪಕ್ಷ ನಿಷ್ಠೆ ಗುರುತಿಸಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ವಿಶ್ವಾಸ್ ವಿ ಅಮೀನ್ ಪಡುಬಿದ್ರಿ ಮುಂದುವರಿಕೆಗೆ ಆದೇಶ

ಉಡುಪಿ :: ವಿಶ್ವಾಸ್ ವಿ ಅಮೀನ್ ಅವರ ಪಕ್ಷ ನಿಷ್ಠೆಯನ್ನು ಗುರುತಿಸಿದ ಕೆಪಿಸಿಸಿ ಉಡುಪಿ ಜಿಲ್ಲಾ...

ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

ಉಡುಪಿ/ಕೋಡವೂರು: ದಿವ್ಯಾಂಗ ರಕ್ಷಣಾ ಸಮಿತಿ (ರಿ.), ಕೋಡವೂರು ಹಾಗೂ MCKS ಫುಡ್ ಫಾರ್ ದಿ ಹಂಗ್ರಿ...

ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಕಿರುಕುಳ ವಿರುದ್ಧ ಜಿಲ್ಲಾಧ್ಯಂತ ಹೋರಾಟ ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲಾ ಸಂಯೋಜಕ ರಾಜೇಶ್ ಉಚ್ಚಿಲ

80ನೇ ಸ್ವಾತಂತ್ರ್ಯ ದಿನೋತ್ಸವದ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನಲ್ಲಿ ಆಯೋಜನೆಗೊಂಡಿದ್ದ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮಕ್ಕೆ...

ಮರವಂತೆ ಶ್ರೀ ವರಾಹಸ್ವಾಮಿ ಕ್ಷೇತ್ರದಲ್ಲಿ ಬೆಳಕಿಲ್ಲದೆ ಕರ್ಕಾಟಕ ಅಮಾವಾಸ್ಯೆ ಜಾತ್ರೆ: ಕತ್ತಲಲ್ಲಿ ಕಂಗಾಲಾದ ಭಕ್ತರು, ಮಂಡಳಿಯ ವಿರುದ್ಧ ತೀವ್ರ ಆಕ್ರೋಶ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಮರವಂತೆಯ ಶ್ರೀ ವರಾಹಸ್ವಾಮಿ...