50 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ ಆರೋಪಿ ತಹಶೀಲ್ದಾರ್ ಬಂಧನ

0
ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50 ಲಕ್ಷ ರೂ. ಲಂಚ ಪಡೆಯುವಾಗ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.


ಧಾರವಾಡ-ಕಲಘಟಗಿ ಮಧ್ಯೆ ಇರುವ ಯರಿಕೊಪ್ಪ ಗ್ರಾಮದ ವ್ಯಾಪ್ತಿಯಲ್ಲಿರುವ 33 ಎಕರೆ ಪೈಕಿ 13 ಎಕರೆ ಭೂಮಿ ಖರಾಬು ಇತ್ತು. ಇದನ್ನು ಮಾರ್ಪಾಟು ಮಾಡಿಕೊಡಲು 50 ಲಕ್ಷ ರೂ. ಲಂಚ ಮತ್ತು ಅದೇ ಭೂಮಿಯ ಪೈಕಿ 2 ಎಕರೆ ಜಮೀನು ನುಂಗಲು ತಹಶೀಲ್ದಾರ್ ಹೊಂಚು ಹಾಕಿದ್ದರು ಎನ್ನಲಾಗಿದೆ.
ಲೋಕಾಯುಕ್ತ ಎಸ್.ಪಿ.ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ಮಾಡಿತು.ಈ ವೇಳೆ ದೂರುದಾರರು ಕೂಡ ಅವರ ಜೊತೆಗೆ ಇದ್ದರು. ಡಿಎಸ್ ಪಿ ರವೀಂದ್ರ ಕುರುಬಗಟ್ಟಿ, ಇನ್ಸಪೆಕ್ಟರ್ ಪ್ರಸಾದ್, ಕರುಣೇಶಗೌಡ, ಪ್ರಸಾದ ಪಾನೇಕರ್ ಸೇರಿದಂತೆ ಇತರರು ಭ್ರಷ್ಟ ತಹಶೀಲ್ದಾರ್ ಬೇಟೆಯಾಡಿದ್ದಾರೆ. ಬಾಗಲಕೋಟೆಯ ಮಂಜುನಾಥ ಅರಳಿಕಟ್ಟಿ ಎಂಬುವವರು ಧಾರವಾಡದ ಯರಿಕೊಪ್ಪ ಹದ್ದಿನಲ್ಲಿ ಖರೀದಿಸಿದ್ದ ಜಮೀನಿನ ಖರಾಬು ಪಹಣಿ ಸರಿಪಡಿಸಲು ಈ ಲಂಚಕ್ಕೆ ತಹಶೀಲ್ದಾರ ಬೇಡಿಕಿ ಇಟ್ಟಿದ್ದರು ಎನ್ನಲಾಗಿದೆ. ಬುಧವಾರ ರಾತ್ರಿ ಕರ್ನಾಟಕ ಕಾಲೇಜು ಆವರಣದಲ್ಲಿಯೇ ಈ ಲಂಚ ಪಡೆಯುವಾಗ ಸಚ್ಚಿದಾನಂದ ಕುಚನೂರು ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಸಚ್ಚಿದಾನಂದ ಕುಚನೂರ್ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಜಮೀನು ದಾಖಲೆ ಸರಿಪಡಿಸಿಕೊಡುವ ವಿಷಯಕ್ಕೆ ಸಂಬಂಧಿಸಿದಂತೆ 50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಧಾರವಾಡ ತಹಸೀಲ್ದಾರ್ ಸಚ್ಚಿದಾನಂದ, ಕಚೇರಿಯಲ್ಲಿ ಸತ್ಯನಾರಾಯಣ ಪೂಜೆ ಇಟ್ಟುಕೊಂಡಿದ್ದರು.
ಪೂಜೆಯ ಜೊತೆಗೆ ಸಾವಿರಾರು ಜನರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಸಹ ಆಯೋಜಿಸಲಾಗಿತ್ತು. ಅನ್ನ ಸಂತರ್ಪಣೆಗಾಗಿ ಕಚೇರಿಯಲ್ಲಿ ಭರದ ಸಿದ್ಧತೆ ನಡೆದಿತ್ತು. ರಾತ್ರಿಯೇ ಅಡುಗೆ ಮಾಡಲು ಬಟ್ಟರು ಬಂದಿದ್ದರು. ಸುಮಾರು ಎರಡು ಸಾವಿರ ಜನರಿಗೆ ಅಡುಗೆ ಸಿದ್ದವಾಗಿತ್ತು.

Leave a comment

Leave a Reply

Your email address will not be published. Required fields are marked *

Related Articles

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ...

ಮಹಿಳಾ ಸಬ್ ಇನ್ಸ್ಪೆಕ್ಟರ್ ಗೆ ಕಪಾಳಮೋಕ್ಷ ಪ್ರಕರಣ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್...

ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಆರೋಪಿ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ...

ಆಂಜನೇಯ ದೇವಸ್ಥಾನ ಅಕ್ರಮ ಪ್ರವೇಶ ದೇವಸ್ಥಾನದ ಆವರಣದಲ್ಲಿ ಮೂತ್ರ ವಿಸರ್ಜನೆ: ಆರೋಪಿ ಮೊಹಮ್ಮದ್ ಜಾಫರ್ ಬಂಧನ

ಹಾವೇರಿ: ದೇವಸ್ಥಾನವೊಂದನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 31 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಹಾವೇರಿ...