ಚನ್ನಪಟ್ಟಣ ಉಪ ಚುನಾವಣಾ ಅಖಾಡ ಮತ್ತೆ ಚುನಾವಣ ಪ್ರಚಾರದಲ್ಲಿ ಕಣ್ಣೀರು ಹಾಕಿದ ಎನ್‌ಡಿಎ ಅಭ್ಯರ್ಥಿ  ನಿಖಿಲ್ ಕುಮಾರಸ್ವಾಮಿ

34

“ನಾನು ರಾಜಕೀಯ ಷಡ್ಯಂತ್ರಕ್ಕೆ ಬಲಿಯಾಗಿದ್ದೇನೆ. ಸತತ ಎರಡು ಚುನಾವಣೆಯಲ್ಲಿ ಸೋತಿರುವೆ. ನಾನು ಏನು ತಪ್ಪು ಮಾಡಿದ್ದೇನೆಂದು ಗೊತ್ತಾಗುತ್ತಿಲ್ಲ ಎಂದು ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗುರುವಾರ ಭಾವುಕಾರಿ ಕಣ್ಣೀರು ಹಾಕಿದರು. “ನಾನು ಎರಡು ಚುನಾವಣೆಗಳಲ್ಲಿ ಸೋತಿದ್ದೇನೆ.

ಜನರು ನನಗೆ ಮತ ಹಾಕಿದ್ದಾರೆ. ಆದರೆ ನಾನು ರಾಜಕೀಯ ಷಡ್ಯಂತ್ರಕ್ಕೆ ಬಲಿಯಾಗಿದ್ದೇನೆ. ಇದರಿಂದ ನನಗೆ ತೀವ್ರ ನೋವಾಗಿದೆ. ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲು ಈ ಬಾರಿ ಚುನಾವಣೆಯಲ್ಲಿ ನಿಂತಿದ್ದೇನೆ. ನೀವೆಲ್ಲರೂ ಈ ಯುವಕನಿಗೆ ಗೆಲ್ಲುವ ಅವಕಾಶ ನೀಡಬೇಕೆಂದು ವಿನಂತಿಸುತ್ತೇನೆ” ಎಂದು ಕಣ್ಣೀರು ಹಾಕುತ್ತಾ ಮನವಿ ಮಾಡಿದರು.

ಇಂದು ಕನ್ನಮಂಗಲ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನಾನು ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದೇನೆ. ನಾನೇನು ತಪ್ಪು ಮಾಡಿದ್ದೆನೋ ಗೊತ್ತಿಲ್ಲ. ಬಹುಶಃ ಮಾಜಿ ಪ್ರಧಾನಿಯ ಮೊಮ್ಮಗನಾಗಿ ಮತ್ತು ಮಾಜಿ ಮುಖ್ಯಮಂತ್ರಿಯ ಮಗನಾಗಿ ಹುಟ್ಟಿರುವುದು ನನ್ನ ದುರದೃಷ್ಟನೋ ಗೊತ್ತಿಲ್ಲ ಎಂದರು.

ಈ ಚುನಾವಣೆಯಲ್ಲಿ ನಾನು ಕಣ್ಣೀರು ಹಾಕಬಾರದು ಎಂದು ನಿರ್ಧರಿಸಿದ್ದೆ. ಆದರೆ ತುಂಬಾ ನೋವುಗಳಿವೆ” ಎಂದು ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದರು. ಕಳೆದ ಲೋಕಸಭಾ ಚುನಾವಣೆ ವೇಳೆ ಮಂಡ್ಯದಲ್ಲಿ ನಡೆದ ನೋವಿನ ಘಟನೆಗಳನ್ನು ನೆನಪಿಸಿಕೊಂಡ ನಿಖಿಲ್, ನನ್ನ ಮೂಲಕ ಉತ್ತರ ಕೊಡ್ಬೇಕು ಅಂತ ಕಾರ್ಯಕರ್ತರಭಾವನೆಯಾಗಿತ್ತು ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಏನಾಗಿತ್ತು ಅಂತ ಎಲ್ಲರಿಗೂ ಗೊತ್ತು ಎಂದು ಹೇಳಿದರು. ಒಮ್ಮೆ ನಾನು ದೇವೇಗೌಡರಿಗೆ ಪ್ರಾದೇಶಿಕ ಪಕ್ಷ ಕಟ್ಟುವುದೇ ಕಷ್ಟ ಇದೇ ಬೇಡ ಎಂದು ಮನವಿ ಮಾಡಿದ್ದೆ.

ಆದರೆ ರೈತ ಪರವಾಗಿ ಕಾಳಜಿ ಇಟ್ಟ್ಕೊಂಡು ಈ ಪಕ್ಷವನ್ನು ಕಟ್ಟಿದ್ದಾರೆ. ನಂತರ ಕುಮಾರಣ್ಣ ಅವರು ಅಧಿಕಾರ ಇರಲಿ ಇಲ್ಲದೆ ಇರಲಿ ರೈತರ ಪರವಾಗಿ ನಿರಂತರವಾಗಿ ಸಾಲ ಮನ್ನಾ ಮಾಡಿದ್ದಾರೆ. ಅನೇಕ ಅಭಿವೃದ್ಧಿ ಕೆಲಸಗಳು ಮಾಡಿದ್ದಾರೆ ಎಂದು ಹೇಳಿದರು. ಪ್ರಾದೇಶಿಕ ಪಕ್ಷ ಕಟ್ಟುವುದು ಕಷ್ಟ ಆದರೆ ನಿಮ್ಮೆಲ್ಲರ ಆಶೀರ್ವಾದದಿಂದ ರಾಜ್ಯದಲ್ಲಿ ಜೆಡಿಎಸ್ ಉಳಿದಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ಹೇಳಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...

ರಾಜ್ಯಪಾಲರಿಗೆ ಅಪಮಾನ; ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ‘ಅವಮಾನಿಸಿದ ಮತ್ತು...

ಮುಂಬೈ ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕಾಗಿ ಚುನಾವಣೆ ಗರಿಗೆದರಿದ ರಾಜಕೀಯ ಪಕ್ಷಗಳ ಮೈತ್ರಿ

“: ಬೃಹನ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಚ್ಚರಿ ರೀತಿಯಲ್ಲಿ ಬದ್ಧ ವೈರಿಗಳಾದ ಬಿಜೆಪಿ ಹಾಗೂ ಶಿವಸೇನಾ...