ಐಟಿ ಅಧಿಕಾರಿಗಳ ದಾಳಿ ಹೆಸರಿನಲ್ಲಿ ಬೆದರಿಸಿ 7.50 ಲಕ್ಷ ನಗದು ಚಿನ್ನಾಭರಣ ಪಡೆದು ಪರಾರಿ ಪ್ರಕರಣ ದಾಖಲು

69

: ಶ್ರೀಮತಿ ಜ್ಯೂಲಿಯಟ್‌ ಪೆರಂಪಳ್ಳಿ ರಸ್ತೆ, ಶಿವಳ್ಳಿ ಗ್ರಾಮ ಇವರು ಸುಮಾರು 04 ತಿಂಗಳಿನಿಂದ ಪೆರಂಪಳ್ಳಿಯ ಸುನೀತಾ ಎಂಬವರನ್ನು ಮನೆ ಕೆಲಸಕ್ಕೆ ಇಟ್ಟುಕೊಂಡಿದ್ದು ಸುನೀತಾ ರವರಲ್ಲಿ ಅವರ ಹಾಗೂ ಅವರ ಗಂಡನ ನಡುವೆ ಇದ್ದ ಮನಸ್ತಾಪದ ಬಗ್ಗೆ ಹೇಳಿರುತ್ತಾರೆ.

ಸುನೀತಾ ರವರು ಜೂಲಿಯಟ್ ರಲ್ಲಿ ಅವರ ಗಂಡನಿಗೆ ವಿಚ್ಚೇದನ ಕೊಡುವಂತೆ ಹೇಳುತ್ತಿದ್ದು,ಇದರಿಂದ ಬೇಸರಗೊಂಡು ಮನೆ ಬಿಟ್ಟು ಹೋಗಲು ನಿರ್ಧರಿಸಿ ಅವರ ತಮ್ಮ ತಾಯಿಯನ್ನು ಮನೆಗೆ ಬರಲು ಹೇಳಿ ದಿನಾಂಕ: 28/10/2024 ರಂದು ಅವರ ತಾಯಿಯಲ್ಲಿ ಬಟ್ಟೆಬರೆ ಹಾಗೂ ಸ್ವಲ್ಪ ಚಿನ್ನವನ್ನು ಹಾಗೂ ಗಂಡನ ಮನೆಯ ಲಾಕರ್‌ ನಲ್ಲಿ ಇರಿಸಿದ್ದ 10 ಲಕ್ಷ ರೂಪಾಯಿಯಲ್ಲಿ 1 ಲಕ್ಷ ಹಣವನ್ನು ಕೊಟ್ಟು ಕಳುಹಿಸಿದ್ದು .

ನಂತರ ದಿನಾಂಕ: 29/10/2024 ರಂದು ಬೆಳಿಗ್ಗೆ 10:30 ಗಂಟೆಗೆ ಸುನೀತಾ ರವರು ಸ್ಟ್ಯಾನಿ ಎಂಬವರೊಂದಿಗೆ ಶ್ರೀಮತಿ ಜೂಲಿಯಟ್ ರವರ ಮನೆಗೆ ಬಂದು ಐ,ಟಿ ಅಧಿಕಾರಿಗಳು ಬಂದಿದ್ದಾರೆ ನಿಮ್ಮ ಮನೆಗೆ ರೈಡ್‌ ಮಾಡುತ್ತಾರೆ ಲಾಕರ್‌ ನಲ್ಲಿ ಇದ್ದ ಹಣ ಹಾಗೂ ಒಡವೆಯನ್ನು ತೆಗೆಯಬೇಕು ಎಂದು ಹೇಳಿ ಜೂಲಿಯಟ್ ರಿಂದ ಲಾಕರ್‌ ಕೀ ತೆಗೆದುಕೊಂಡು ಲಾಕರ್‌ ಓಪನ್‌ ಮಾಡಿ ಅದರಲ್ಲಿ ಇದ್ದ ಹಣದಲ್ಲಿ ಒಂದು ಲಕ್ಷ 50 ಸಾವಿರ ರೂಪಾಯಿಯನ್ನು ಜೂಲಿಯೆಟ್ ರಿಗೆ ನೀಡಿರುತ್ತಾರೆ

ಉಳಿದ 7 ಲಕ್ಷ 50 ಸಾವಿರ ರೂಪಾಯಿ ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್‌ ನೆಕ್ಲೆಸ್‌ ನ್ನು ಅವಳ ಚೀಲದಲ್ಲಿ ಹಾಕಿಕೊಂಡು ನನ್ನಲ್ಲಿ ಇರಲಿ ಆ ನಂತರ ಕೊಡುತ್ತೇನೆ

ಎಂದು ಹೇಳಿದ್ದು, ಸುನೀತಾ ಹಾಗೂ ಸ್ಟಾನಿ ಇವರುಗಳು ಐ,ಟಿ ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ 7 ಲಕ್ಷ 50 ಸಾವಿರ ರೂಪಾಯಿ ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್‌ ಸರವನ್ನು ತೆಗೆದುಕೊಂಡು ಮೋಸಮಾಡಿರುವುದಾಗಿದೆ. ಈ ಬಗ್ಗೆ ಮಣಿಪಾಲ ಠಾಣಾ ಯಲ್ಲಿ ಕಲಂ: 316(7) 318(4) R/w 3(5) ಬಿಎನ್ಎಸ್‌ ರಂತೆ ಪ್ರಕರಣ ದಾಖಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ, ಹುಕ್ಕಾ ಸೇವನೆಗೆ ಅವಕಾಶ ಪೊಲೀಸರಿಂದ ಮಣಿಪಾಲ್ ಪಬ್ ಗಳ ಮೇಲೆ ದಾಳಿ

ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ ಪೂರೈಸಿದ ಆರೋಪದ ಮೇಲೆ...

ಪಡುಬಿದ್ರಿ  ಕಡಲು ಕೊರೆತದಿಂದ ರಕ್ಷಣೆಗೆ  ತಡೆಗೋಡೆ ನಿರ್ಮಾಣಕ್ಕೆ ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ ವಿ ಅಮೀನ್ ಮನವಿ

ಪಡುಬಿದ್ರಿ, ಜು. 4:** ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ...

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್...

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...