ಐಟಿ ಅಧಿಕಾರಿಗಳ ದಾಳಿ ಹೆಸರಿನಲ್ಲಿ ಬೆದರಿಸಿ 7.50 ಲಕ್ಷ ನಗದು ಚಿನ್ನಾಭರಣ ಪಡೆದು ಪರಾರಿ ಪ್ರಕರಣ ದಾಖಲು

40

: ಶ್ರೀಮತಿ ಜ್ಯೂಲಿಯಟ್‌ ಪೆರಂಪಳ್ಳಿ ರಸ್ತೆ, ಶಿವಳ್ಳಿ ಗ್ರಾಮ ಇವರು ಸುಮಾರು 04 ತಿಂಗಳಿನಿಂದ ಪೆರಂಪಳ್ಳಿಯ ಸುನೀತಾ ಎಂಬವರನ್ನು ಮನೆ ಕೆಲಸಕ್ಕೆ ಇಟ್ಟುಕೊಂಡಿದ್ದು ಸುನೀತಾ ರವರಲ್ಲಿ ಅವರ ಹಾಗೂ ಅವರ ಗಂಡನ ನಡುವೆ ಇದ್ದ ಮನಸ್ತಾಪದ ಬಗ್ಗೆ ಹೇಳಿರುತ್ತಾರೆ.

ಸುನೀತಾ ರವರು ಜೂಲಿಯಟ್ ರಲ್ಲಿ ಅವರ ಗಂಡನಿಗೆ ವಿಚ್ಚೇದನ ಕೊಡುವಂತೆ ಹೇಳುತ್ತಿದ್ದು,ಇದರಿಂದ ಬೇಸರಗೊಂಡು ಮನೆ ಬಿಟ್ಟು ಹೋಗಲು ನಿರ್ಧರಿಸಿ ಅವರ ತಮ್ಮ ತಾಯಿಯನ್ನು ಮನೆಗೆ ಬರಲು ಹೇಳಿ ದಿನಾಂಕ: 28/10/2024 ರಂದು ಅವರ ತಾಯಿಯಲ್ಲಿ ಬಟ್ಟೆಬರೆ ಹಾಗೂ ಸ್ವಲ್ಪ ಚಿನ್ನವನ್ನು ಹಾಗೂ ಗಂಡನ ಮನೆಯ ಲಾಕರ್‌ ನಲ್ಲಿ ಇರಿಸಿದ್ದ 10 ಲಕ್ಷ ರೂಪಾಯಿಯಲ್ಲಿ 1 ಲಕ್ಷ ಹಣವನ್ನು ಕೊಟ್ಟು ಕಳುಹಿಸಿದ್ದು .

ನಂತರ ದಿನಾಂಕ: 29/10/2024 ರಂದು ಬೆಳಿಗ್ಗೆ 10:30 ಗಂಟೆಗೆ ಸುನೀತಾ ರವರು ಸ್ಟ್ಯಾನಿ ಎಂಬವರೊಂದಿಗೆ ಶ್ರೀಮತಿ ಜೂಲಿಯಟ್ ರವರ ಮನೆಗೆ ಬಂದು ಐ,ಟಿ ಅಧಿಕಾರಿಗಳು ಬಂದಿದ್ದಾರೆ ನಿಮ್ಮ ಮನೆಗೆ ರೈಡ್‌ ಮಾಡುತ್ತಾರೆ ಲಾಕರ್‌ ನಲ್ಲಿ ಇದ್ದ ಹಣ ಹಾಗೂ ಒಡವೆಯನ್ನು ತೆಗೆಯಬೇಕು ಎಂದು ಹೇಳಿ ಜೂಲಿಯಟ್ ರಿಂದ ಲಾಕರ್‌ ಕೀ ತೆಗೆದುಕೊಂಡು ಲಾಕರ್‌ ಓಪನ್‌ ಮಾಡಿ ಅದರಲ್ಲಿ ಇದ್ದ ಹಣದಲ್ಲಿ ಒಂದು ಲಕ್ಷ 50 ಸಾವಿರ ರೂಪಾಯಿಯನ್ನು ಜೂಲಿಯೆಟ್ ರಿಗೆ ನೀಡಿರುತ್ತಾರೆ

ಉಳಿದ 7 ಲಕ್ಷ 50 ಸಾವಿರ ರೂಪಾಯಿ ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್‌ ನೆಕ್ಲೆಸ್‌ ನ್ನು ಅವಳ ಚೀಲದಲ್ಲಿ ಹಾಕಿಕೊಂಡು ನನ್ನಲ್ಲಿ ಇರಲಿ ಆ ನಂತರ ಕೊಡುತ್ತೇನೆ

ಎಂದು ಹೇಳಿದ್ದು, ಸುನೀತಾ ಹಾಗೂ ಸ್ಟಾನಿ ಇವರುಗಳು ಐ,ಟಿ ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ 7 ಲಕ್ಷ 50 ಸಾವಿರ ರೂಪಾಯಿ ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್‌ ಸರವನ್ನು ತೆಗೆದುಕೊಂಡು ಮೋಸಮಾಡಿರುವುದಾಗಿದೆ. ಈ ಬಗ್ಗೆ ಮಣಿಪಾಲ ಠಾಣಾ ಯಲ್ಲಿ ಕಲಂ: 316(7) 318(4) R/w 3(5) ಬಿಎನ್ಎಸ್‌ ರಂತೆ ಪ್ರಕರಣ ದಾಖಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ...

ಪೂರ್ಣಿಮಾ ಶೆಟ್ಟಿಗೆ ‘ಮಾನವ ಹಕ್ಕುಗಳ ಸಬಲೀಕರಣ ಮಾನವೀಯ ಶ್ರೇಷ್ಠತೆ’ ಪ್ರಶಸ್ತಿ ಗೌರವ

ಸಾಮಾಜಿಕ ಸೇವಾ ಕಾರ್ಯಕರ್ತೆ ಹಾಗೂ ‘ವಸುದೈವ ಕುಟುಂಬಕಂ’ ಎನ್‌ಜಿಒ ಸಂಸ್ಥೆಯ ಸಂಸ್ಥಾಪಕಿ ಪೂರ್ಣಿಮಾ ಶೆಟ್ಟಿ ಅವರಿಗೆ...