thekarnatakatoday.com
Politics

ಹೃದಯವಂತರಿಗೆ ಮಾತ್ರ ಕಣ್ಣೀರು ಬರುವುದು ಕಟುಕರಿಗೆ ಇದ್ಯಾವುದೂ ಇಲ್ಲ:: ಕೇಂದ್ರ ಸಚಿವ ಕುಮಾರಸ್ವಾಮಿ

“ನಾನು ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಅದು ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತೆ, ಕಟುಕರಿಗೆ ಯಾವ ಕಣ್ಣೀರು ಬರಲ್ಲ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ, ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಮತಯಾಚನೆ ವೇಳೆ ಕಣ್ಣೀರು ಹಾಕಿದ್ದನ್ನು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಎಚ್.ಡಿ‌.ಕುಮಾರಸ್ವಾಮಿ, ‘ಕಟುಕರಿಗೆ ಕಣ್ಣೀರು ಬರುವುದಿಲ್ಲ’ ಎಂದು ಹೇಳಿದರು. ರಾಜಕಾರಣದಲ್ಲಿ ಕೆಲವರು ಕಟುಕರಿದ್ದಾರೆ. ಅವರಿಗೆ ಕಣ್ಣೀರು ಬರುವುದಿಲ್ಲ. ಭಯ-ಭಕ್ತಿ ಇಲ್ಲದ ಅವರಿಗೆ ಕಣ್ಣೀರು ಬಾರದು. ನಮಗೆ ಜನರ ಕಷ್ಟ ನೋಡಿದರೆ ಕಣ್ಣೀರು ಬರುತ್ತದೆ ಎಂದರು.

ನಾನೂ ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಅದನ್ನು ಮಾಡಿರುವುದು ಅನುಕಂಪ‌ ಗಿಟ್ಟಿಸಿಕೊಳ್ಳುವುದಕ್ಕಲ್ಲ. ಜನರ ಸಮಸ್ಯೆ ಕಂಡಾಗ, ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತದೆ ಎಂದರು.
ಪ್ರಧಾನಿ ಮೋದಿ ಬಗ್ಗೆ ರಾಜಕೀಯ ಪುಡಾರಿ ಎಂಬ ಸಿಎಂ ಟೀಕೆ ವಿಚಾರಕ್ಕೆ ಉತ್ತರಿಸಿದ ಹೆಚ್‌ಡಿಕೆ, ಸಿದ್ದರಾಮಯ್ಯನವರು ಯಾವ ರೀತಿ ಮಾತನಾಡುತ್ತಿದ್ದಾರೆ? ಅವರನ್ನ ಪುಡಾರಿ ಅನ್ನೋದಾದ್ರೆ ಇವರು ಅದೇ ರೀತಿ ಅಲ್ಲವೇ ಮಾತನಾಡುತ್ತಿರೋದು ಎಂದು ಕುಟುಕಿದರು.

Related posts

ಕಾಂಗ್ರೆಸ್ ಸರಕಾರ ಇರುವ ರಾಜ್ಯಗಳು ಗಾಂಧಿ ಪರಿವಾರಕ್ಕೆ ಬಳಕೆಯಾಗುವ ಖಜಾನೆಯಾಗಿದೆ ಪ್ರಧಾನಿ ನರೇಂದ್ರ ಮೋದಿ

The Karnataka Today

ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆ ಪ್ರಧಾನಿ ನರೇಂದ್ರ ಮೋದಿಯಿಂದ ರಾಮ ನವಮಿ ಪ್ರಯುಕ್ತ ನಾಳೆ ಉದ್ಘಾಟನೆ

The Karnataka Today

ಬಸವನಗೌಡ ಯತ್ನಾಳ್ ಹೊರಗಿನವರಲ್ಲ ಅವರ ಅಸಮಾಧಾನ ಪಕ್ಷದ ಆಂತರಿಕ ವಿಷಯ ಒಟ್ಟಿಗೆ ಕುಳಿತು ಬಗೆಹರಿಸಿಕೊಳ್ಳುತೇವೆ ::ಯಡಿಯೂರಪ್ಪ

The Karnataka Today

Leave a Comment