ಕನ್ನಡ ಸಂಸ್ಕೃತಿ ಇಲಾಖೆಯ ಅಧಿಕಾರಿಗಳ ಎಡವಟ್ಟಿನಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲಾಗದ ಸಮಾಜ ಸೇವಕ

49

“ಸುವರ್ಣ ಮಹೋತ್ಸವ ಪ್ರಶಸ್ತಿ ವಿಷಯದಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆಯಿಂದ ಸಮಾಜ ಸೇವಕರೊಬ್ಬರಿಗೆ ಅವಮಾನವಾಗಿದೆ. ತಾವು ಪ್ರಶಸ್ತಿಗೆ ಆಯ್ಕೆಯಾಗಿದ್ದೀರಿ ಎಂದು ಮಂಗಳೂರಿನ ಸಮಾಜ ಸೇವಕ ಸೇವಕ ಬಾಬು ಪಿಲಾರ್ ಅವರಿಗೆ ಕರೆ ಮಾಡಿ, ಬೆಂಗಳೂರಿಗೆ ಬರುವಂತೆ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಆದರೆ ಪ್ರಶಸ್ತಿ ಸ್ವೀಕರಿಸಲು ಹೋಗಬೇಕು ಎನ್ನುವಷ್ಟರಲ್ಲಿ ಪ್ರಶಸ್ತಿ ಬಂದಿರುವುದು ನಿಮಗಲ್ಲ ಎಂದು ಹೇಳುವ ಮೂಲಕ ಅಧಿಕಾರಿಗಳು ಬಾಬು ಪಿಲಾರ್ ಗೆ ಅವಮಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ನೀವು ಪ್ರಶಸ್ತಿಗೆ ಭಾಜನರಾಗಿದ್ದೀರಿ ಎಂದು ಅ.31 ರಂದು ಬಾಬು ಪಿಲಾರ್ ಗೆ ಮಾಹಿತಿ ನೀಡಲಾಗಿತ್ತು. ಬೆಂಗಳೂರಿಗೆ ಬಂದ ಪಿಲಾರ್ ಗೆ ಕುಮಾರಕೃಪ ಅತಿಥಿ ಗೃಹದಲ್ಲಿ ಕೊಠಡಿಯನ್ನೂ ನೀಡಲಾಗಿತ್ತು. ಸಂಜೆ ಪ್ರಶಸ್ತಿ ವಿತರಣೆ ವೇಳೆ ಕೊನೇ ಕ್ಷಣದಲ್ಲಿ ಪ್ರಶಸ್ತಿ ಬಂದಿರುವುದು ನಿಮಗಲ್ಲ ಕಣ್ತಪ್ಪಿನಿಂದ ತಪ್ಪಾಗಿದೆ ಕ್ಷಮಿಸಿ. ಬಾಬು ಪಿಲಾರ್ ಬದಲು ಬಾಬು‌ ಕಿಲಾರ್ ಆಗಬೇಕಿತ್ತು ಎಂದು ಅಧಿಕಾರಿಗಳು ಸಮಜಾಯಿಷಿ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿಗೆ ಬಾಬು ಪಿಲಾರ್ ಆಯ್ಕೆಯಾಗಿದ್ದರು. ಅಧಿಕಾರಿಗಳ ಯಡವಟ್ಟಿನಿಂದ ಜಿಲ್ಲಾ ಪ್ರಶಸ್ತಿಯೂ ಇಲ್ಲದೇ, ಸುವರ್ಣ ಮಹೋತ್ಸವ ಪ್ರಶಸ್ತಿಯೂ ಸ್ವೀಕರಿಸಲಾಗದೇ ಬಾಬು ಪಿಲಾರ್ ಬೇಸರಗೊಂಡಿದ್ದಾರೆ.

ಪಾರ್ಥಿವ ಶರೀರಗಳಿಗೆ ಅಂತ್ಯ ಸಂಸ್ಕಾರ ನೆರವೇರಿಸುವ ಮೂಲಕ ಬಾಬು ಪಿಲಾರ್ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...