ಕನ್ನಡ ಸಂಸ್ಕೃತಿ ಇಲಾಖೆಯ ಅಧಿಕಾರಿಗಳ ಎಡವಟ್ಟಿನಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲಾಗದ ಸಮಾಜ ಸೇವಕ

80

“ಸುವರ್ಣ ಮಹೋತ್ಸವ ಪ್ರಶಸ್ತಿ ವಿಷಯದಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆಯಿಂದ ಸಮಾಜ ಸೇವಕರೊಬ್ಬರಿಗೆ ಅವಮಾನವಾಗಿದೆ. ತಾವು ಪ್ರಶಸ್ತಿಗೆ ಆಯ್ಕೆಯಾಗಿದ್ದೀರಿ ಎಂದು ಮಂಗಳೂರಿನ ಸಮಾಜ ಸೇವಕ ಸೇವಕ ಬಾಬು ಪಿಲಾರ್ ಅವರಿಗೆ ಕರೆ ಮಾಡಿ, ಬೆಂಗಳೂರಿಗೆ ಬರುವಂತೆ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಆದರೆ ಪ್ರಶಸ್ತಿ ಸ್ವೀಕರಿಸಲು ಹೋಗಬೇಕು ಎನ್ನುವಷ್ಟರಲ್ಲಿ ಪ್ರಶಸ್ತಿ ಬಂದಿರುವುದು ನಿಮಗಲ್ಲ ಎಂದು ಹೇಳುವ ಮೂಲಕ ಅಧಿಕಾರಿಗಳು ಬಾಬು ಪಿಲಾರ್ ಗೆ ಅವಮಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ನೀವು ಪ್ರಶಸ್ತಿಗೆ ಭಾಜನರಾಗಿದ್ದೀರಿ ಎಂದು ಅ.31 ರಂದು ಬಾಬು ಪಿಲಾರ್ ಗೆ ಮಾಹಿತಿ ನೀಡಲಾಗಿತ್ತು. ಬೆಂಗಳೂರಿಗೆ ಬಂದ ಪಿಲಾರ್ ಗೆ ಕುಮಾರಕೃಪ ಅತಿಥಿ ಗೃಹದಲ್ಲಿ ಕೊಠಡಿಯನ್ನೂ ನೀಡಲಾಗಿತ್ತು. ಸಂಜೆ ಪ್ರಶಸ್ತಿ ವಿತರಣೆ ವೇಳೆ ಕೊನೇ ಕ್ಷಣದಲ್ಲಿ ಪ್ರಶಸ್ತಿ ಬಂದಿರುವುದು ನಿಮಗಲ್ಲ ಕಣ್ತಪ್ಪಿನಿಂದ ತಪ್ಪಾಗಿದೆ ಕ್ಷಮಿಸಿ. ಬಾಬು ಪಿಲಾರ್ ಬದಲು ಬಾಬು‌ ಕಿಲಾರ್ ಆಗಬೇಕಿತ್ತು ಎಂದು ಅಧಿಕಾರಿಗಳು ಸಮಜಾಯಿಷಿ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿಗೆ ಬಾಬು ಪಿಲಾರ್ ಆಯ್ಕೆಯಾಗಿದ್ದರು. ಅಧಿಕಾರಿಗಳ ಯಡವಟ್ಟಿನಿಂದ ಜಿಲ್ಲಾ ಪ್ರಶಸ್ತಿಯೂ ಇಲ್ಲದೇ, ಸುವರ್ಣ ಮಹೋತ್ಸವ ಪ್ರಶಸ್ತಿಯೂ ಸ್ವೀಕರಿಸಲಾಗದೇ ಬಾಬು ಪಿಲಾರ್ ಬೇಸರಗೊಂಡಿದ್ದಾರೆ.

ಪಾರ್ಥಿವ ಶರೀರಗಳಿಗೆ ಅಂತ್ಯ ಸಂಸ್ಕಾರ ನೆರವೇರಿಸುವ ಮೂಲಕ ಬಾಬು ಪಿಲಾರ್ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಲಾಬಿಗಳಿಗೆ ಮಣಿಯಬೇಡಿ- ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಸೂಚನೆ

ಬೆಂಗಳೂರು: ಜುಲೈ ಮೊದಲ ವಾರದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಮಯದಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳಲು...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ರಾಮನಗರ ಜಿಲ್ಲೆ ಕುಮಾರ ಸ್ವಾಮಿ ಹಾಗೂ ಜೆಡಿಎಸ್ ಪ್ರಾಬಲ್ಯ  ಮುರಿದ ಡಿಕೆ ಶಿವಕುಮಾರ್

ರಾಮನಗರದಲ್ಲಿ ಜೆಡಿಎಸ್ ಯುಗಾಂತ್ಯ: ಜಿಲ್ಲೆಯಲ್ಲಿ ‘ಡಿ.ಕೆ ಬ್ರದರ್ಸ್’ ಪ್ರಾಬಲ್ಯ:ಎಚ್ ಡಿ ಕೆ ಬಳಿಯಿಂದ ಶಿವಕುಮಾರ್ ಕಸಿದುಕೊಂಡ್ರಾ...