ವಕ್ಫ್ ವಿವಾದ: ಹಿಂಸಾತ್ಮಕ ತಿರುವು ಹಾವೇರಿ ಜಿಲ್ಲೆಯಲ್ಲಿ ಕಲ್ಲು ತೂರಾಟ, 32 ಮಂದಿ ಬಂಧನ

45

ವಕ್ಫ್ ಮಂಡಳಿಯಿಂದ ತಮ್ಮ ಭೂಮಿ ಕಳೆದುಕೊಳ್ಳುವ ಭಯದಲ್ಲಿ ರೈತರ ಗುಂಪೊಂದು ಮುಸ್ಲಿಂ ಮುಖಂಡರ ನಿವಾಸಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಇದರೊಂದಿಗೆ ವಕ್ಫ್ ವಿವಾದ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಕಡಕೋಳ ಗ್ರಾಮದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಸ್ಥಳೀಯ ಮುಖಂಡ ಮೊಹಮ್ಮದ್ ರಫಿ ಅವರ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೈಕ್ ಹಾನಿಗೊಳಿಸಿದೆ. ಅಲ್ಪಸಂಖ್ಯಾತ ಸಮುದಾಯದ ಇತರ ಹಲವು ನಾಯಕರನ್ನು ಸಹ ಗುರಿಯಾಗಿಸಲಾಗಿದೆ. ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್, ಎಸ್ಪಿ ಅಂಶುಕುಮಾರ್ ಶ್ರೀವಾಸ್ತವ ಮತ್ತಿತರರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಕಲ್ಲು ತೂರಾಟ ನಡೆಸಿದವರನ್ನು ಪೊಲೀಸರು ಗುರುತಿಸಿ ಬಂಧಿಸಿದ್ದು, ಗ್ರಾಮಸ್ಥರೊಂದಿಗೆ ಮಾತನಾಡಿದ್ದಾರೆ ಮತ್ತು ಜನರನ್ನು ಪ್ರಚೋದಿಸುವವರನ್ನು ಪತ್ತೆ ಹಚ್ಚಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಲು ಯಾರೂ ಮುಂದೆ ಬರುತ್ತಿಲ್ಲ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣಗಳನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ 32 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕೆಎಸ್ ಆರ್ ಪಿ ನಾಲ್ಕು ತುಕಡಿಗಳು ಮತ್ತು 200 ಕ್ಕೂ ಹೆಚ್ಚು ಪೊಲೀಸರನ್ನು ಗ್ರಾಮದಲ್ಲಿ ನಿಯೋಜಿಸಲಾಗಿದೆ. ಪೊಲೀಸರು ಪಥ ಸಂಚಲನ ಕೂಡಾ ನಡೆಸಿದ್ದಾರೆ. 

ಗರಡಿ ಮನೆ’ ಆಸ್ತಿಗೆ ಸಂಬಂಧಿಸಿದಂತೆ ಗೊಂದಲವಿತ್ತು. ಕೆಲವು ಸ್ಥಳೀಯರು ಈ ವಿಷಯವನ್ನು ಪತ್ರಿಕೆಗಳಲ್ಲಿ ಓದಿ, ಈ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ಗುರುತಿಸಬಹುದೆಂಬ ಭೀತಿಯಿಂದ ನಂತರ ತೂರಾಟ ನಡೆಸಿದ್ದಾರೆ. ಗ್ರಾಮದಲ್ಲಿ ಮೂರು ಆಸ್ತಿಗಳು ವಕ್ಫ್ ಮಂಡಳಿ ಅಧೀನದಲ್ಲಿವೆ. ವಕ್ಫ್ ಮಂಡಳಿ ಪಟ್ಟಿ ಕುರಿತು ಜಿಲ್ಲಾಡಳಿತದಿಂದ ಯಾವುದೇ ನೋಟಿಸ್ ಜಾರಿಯಾಗಿಲ್ಲ. ಆದರೆ, ಜನರು ತಮ್ಮ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ನಮೂದಿಸಿಬಹುದೆಂಬ ಭಯದಿಂದ ಹಿಂಸಾಚಾರದಲ್ಲಿ ತೊಡಗಿದ್ದಾರೆ.

ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮಹಾಂತೇಶ್ ಹೇಳಿದರು. ಈ ಮಧ್ಯೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿರುವ ಮಾಜಿ ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರ ಪುತ್ರ ಬಸವಪ್ರಭು ಜೊಲ್ಲೆ ಅವರ 2.13 ಎಕರೆ ಜಾಗವನ್ನು ಈಗ ಭೂ ದಾಖಲೆಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ ಎಂದು ಹೇಳಲಾಗಿದೆ. ಆಸ್ತಿ ಪಿತ್ರಾರ್ಜಿತವಾಗಿದೆ ಮತ್ತು ತಲೆಮಾರುಗಳಿಂದ ಒಡೆತನದಲ್ಲಿದೆ.

2021ರಲ್ಲಿ ಜೊಲ್ಲೆ ಸಚಿವರಾಗಿದ್ದಾಗ ಭೂ ದಾಖಲೆ ಬದಲಾವಣೆ ಮಾಡಿರುವುದು ಬೆಳಕಿಗೆ ಬಂದಿದೆ. ಸಾಮಾಜಿಕ ಕಾರ್ಯಕರ್ತ ಕೃಷ್ಣಪ್ಪ ನೀಲಕಂಠಪ್ಪ ಮುದ್ನಿ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಉಪ್ಪಿನ ಬೆಟಗೇರಿ ಗ್ರಾಮದ ಹಲವರ ಆಸ್ತಿಗಳನ್ನು ವಕ್ಫ್ ಆಸ್ತಿಯಡಿ ಪಟ್ಟಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ನವೆಂಬರ್ 28, 2023 ರಂದು ಪತ್ರವನ್ನು ಕಳುಹಿಸಲಾಗಿದ್ದು, ಅದು ಡಿಸೆಂಬರ್ 2, 2023 ರಂದು ಪಿಎಂಒ ಕಚೇರಿಗೆ ತಲುಪಿದೆ. ಈ ವಿಚಾರವನ್ನು ಪ್ರಧಾನಿ ಅವರ ಗಮನಕ್ಕೆ ತರಲಾಗುವುದು ಎಂದು 2023 ರ ಡಿಸೆಂಬರ್ 8 ರಂದು ಪಿಎಂಒದಿಂದ ಕರೆ ಬಂದಿತ್ತು ಎಂದು ಅವರು ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...

ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಭಾವಿ ಪತಿ ಸೈಯದ್

ಬೆಂಗಳೂರು: ತನ್ನನ್ನು  ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ...

1 ಲಕ್ಷ ರೂ ಬಿಲ್ ಮಾಡಿದ ಆಸ್ಪತ್ರೆ ಐಟಮೈಸ್ಡ್ ಬಿಲ್ ಕೇಳಿದ ಮೇಲೆ 57 ಸಾವಿರಕ್ಕೆ ಇಳಿಕೆ ರೋಗಿ ತಾನು ಮಾಡಿಸಿಕೊಳ್ಳದ ಶಸ್ತ್ರಚಿಕಿತ್ಸೆಗೂ ಬಿಲ್

ನವದೆಹಲಿ: ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಯೊಂದು ಮನಸೋ ಇಚ್ಛೆ ಬಿಲ್ ಮಾಡಿ ಹಣ ಪೀಕುವ...

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿಯನ್ನು ಅತಿಕ್ರಮಣ ಮಾಡಿದವರು ಮುಸ್ಲಿಮರೇ:: ಸಚಿವ ಜಮೀರ್ ಅಹ್ಮದ್

ಬೆಂಗಳೂರು: ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಸೋಮವಾರ...