ಮಹಾರಾಷ್ಟ್ರ ಶಿವಸೇನೆ ಉದ್ಭವ ಠಾಕ್ರೆ ಬಣದ ಐದು ಜನ ಬಂಡಾಯ ಅಭ್ಯರ್ಥಿಗಳ ಉಚ್ಚಾಟನೆ

73

“ಮಹಾರಾಷ್ಟ್ರ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಶಿವಸೇನೆ ಉದ್ಧವ್ ಠಾಕ್ರೆ ಬಣದಲ್ಲಿ ಬಂಡಾಯದ ಬಿಸಿ ಜೋರಾಗಿದ್ದು, ಐವರು ಬಂಡಾಯ ನಾಯಕರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ

. ಮಹಾರಾಷ್ಟ್ರ ಚುನಾವಣೆಯಲ್ಲಿ ನಾಮಪತ್ರ ಹಿಂತೆಗೆದುಕೊಳ್ಳದ ಐವರು ಬಂಡಾಯ ನಾಯಕರನ್ನು ಶಿವಸೇನೆ ಉದ್ಧವ್ ಠಾಕ್ರೆ ಬಣ ಉಚ್ಚಾಟಿಸಿದೆ. ಭಿವಂಡಿ ಮಾಜಿ ಶಾಸಕ ರೂಪೇಶ್ ಮ್ಹಾತ್ರೆ, ವಿಶ್ವಾಸ್ ನಾಂದೇಕರ್, ಚಂದ್ರಕಾಂತ್ ಘುಗುಲ್, ಸಂಜಯ್ ಅವರಿ ಮತ್ತು ಪ್ರಸಾದ್ ಠಾಕ್ರೆ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿದುಬಂದಿದೆ.

ಹಾಲಿ ಚುನಾವಣೆಯಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣ ಮಹಾವಿಕಾಸ್ ಅಘಾಡಿ ಮೈತಿಕೂಟದಿಂದ ಕಣಕ್ಕಿಳಿದಿದ್ದು, ಮೈತ್ರಿ ಅಭ್ಯರ್ಥಿಗಳನ್ನು ಇಲ್ಲಿ ಕಣಕ್ಕಿಳಿಸಲಾಗಿದೆ. ಕೆಲ ಕ್ಷೇತ್ರಗಳಲ್ಲಿ ಟಿಕೆಟ್ ಗೊಂದಲವಿದ್ದು, ಪ್ರತಿಪಕ್ಷದ ಮಹಾ ವಿಕಾಸ್ ಅಘಾಡಿ ಬಂಡಾಯ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರಗಳನ್ನು ಹಿಂಪಡೆಯಲು ಒಂದು ಗಂಟೆಯ ಸಮಯ ನೀಡಿದ ಹೊರತಾಗಿಯೂ ಅವರು ನಾಮಪತ್ರ ವಾಪಸ್ ಪಡೆಯದ ಹಿನ್ನಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿದುಬಂದಿದೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಹಿಂಪಡೆಯಲು ವಿಫಲರಾದ ಬಂಡಾಯಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

Leave a comment

Leave a Reply

Your email address will not be published. Required fields are marked *

Related Articles

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ಡೂಮ್ಸ್ ಡೇ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್

ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ...

ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ...

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ...

ಡ್ರಗ್ಸ್ ಸೇವನೆ ದೃಢಪಟ್ಟ ಹಿನ್ನೆಲೆ ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ

ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ...