ನವೆಂಬರ್ 7 ವಿಜಯಪುರಕ್ಕೆ ವಕ್ಫ್   ಮಸೂದೆ ಜಂಟಿ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಬೇಟಿ

79

“ವಕ್ಫ್ ಮಸೂದೆ 2024ರ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ನವೆಂಬರ್ 7 ರಂದು ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಭೇಟಿ ನೀಡಿ, ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಮಂಗಳವಾರ ತಿಳಿಸಿದ್ದಾರೆ

. ವಕ್ಫ್ ಭೂ ವಿವಾದ ಸಂಬಂಧ ವಿಜಯಪುರ ಜಿಲ್ಲೆಯ ರೈತರನ್ನು ಭೇಟಿ ಮಾಡಿ, ಚರ್ಚಿಸುವಂತೆ ತೇಜಸ್ವಿ ಸೂರ್ಯ ಅವರು ಪಾಲ್ ಅವರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರು ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಭೇಟಿ ನೀಡುತ್ತಿದ್ದಾರೆ.

“ವಕ್ಫ್‌ ಅತಿಕ್ರಮಣದಿಂದ ಸಂತ್ರಸ್ತರಾದ ರೈತರೊಂದಿಗೆ ಸಂವಾದ ನಡೆಸಲು ನವೆಂಬರ್ 7 ರಂದು ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಭೇಟಿ ನೀಡುವಂತೆ ನಾನು ಮಾಡಿದ್ದ ಮನವಿಗೆ ಜೆಪಿಸಿ ಅಧ್ಯಕ್ಷರು ಒಪ್ಪಿಗೆ ನೀಡಿದ್ದಾರೆ ಎಂದರು.

ಜೆಪಿಸಿ ಅಧ್ಯಕ್ಷರು ರೈತ ಸಂಘಟನೆಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಮಠಾಧೀಶರು ಮತ್ತು ಇತರರು ನೀಡಿದ ಮನವಿಗಳನ್ನು ಜೆಪಿಸಿ ಮುಂದೆ ಇಡಲಾಗುವುದು” ಎಂದು ಜೆಪಿಸಿ ಸದಸ್ಯರಾದ ತೇಜಸ್ವಿ ಸೂರ್ಯ ಅವರು ಹೇಳಿದ್ದಾರೆ. “ರೈತರು ಸುಮಾರು ಒಂದು ಶತಮಾನದಿಂದ ತಮ್ಮ ಜಮೀನುಗಳನ್ನು ಸಾಗುವಳಿ ಮಾಡುತ್ತಿದ್ದಾರೆ.

ಆದರೆ ಇತ್ತೀಚಿನ ತಿಂಗಳುಗಳಲ್ಲಿ, ಅವರಲ್ಲಿ ಹಲವರಿಗೆ ಯಾವುದೇ ದಾಖಲೆ ಅಥವಾ ವಿವರಣೆಯಿಲ್ಲದೆ ಅವರ ಭೂಮಿಯನ್ನು ವಕ್ಫ್ ಆಸ್ತಿ ಎಂದು ಘೋಷಿಸಲು ನೋಟಿಸ್ ನೀಡಲಾಗಿದೆ ಎಂದು ಬಿಜೆಪಿ ಸಂಸದ ದೂರಿದ್ದಾರೆ. ವಕ್ಫ್‌ ಅತಿಕ್ರಮಣ ಮಾಡಿದ ಆಸ್ತಿಯ ಪ್ರಮಾಣವು ಗಣನೀಯವಾಗಿದೆ.

ಸುಮಾರು 1,500 ಎಕರೆ ಆಸ್ತಿಯನ್ನು ಅವರ ಹಳ್ಳಿಯಲ್ಲಿಯೇ ವಕ್ಫ್ ಆಸ್ತಿ ಎಂದು ಗೊತ್ತುಪಡಿಸಲಾಗಿದೆ” ಎಂದು ಪಾಲ್‌ಗೆ ಬರೆದ ಪತ್ರದಲ್ಲಿ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ಡೂಮ್ಸ್ ಡೇ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್

ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ...

ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ...

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ...

ಡ್ರಗ್ಸ್ ಸೇವನೆ ದೃಢಪಟ್ಟ ಹಿನ್ನೆಲೆ ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ

ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ...