ನವೆಂಬರ್ 7 ವಿಜಯಪುರಕ್ಕೆ ವಕ್ಫ್   ಮಸೂದೆ ಜಂಟಿ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಬೇಟಿ

47

“ವಕ್ಫ್ ಮಸೂದೆ 2024ರ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ನವೆಂಬರ್ 7 ರಂದು ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಭೇಟಿ ನೀಡಿ, ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಮಂಗಳವಾರ ತಿಳಿಸಿದ್ದಾರೆ

. ವಕ್ಫ್ ಭೂ ವಿವಾದ ಸಂಬಂಧ ವಿಜಯಪುರ ಜಿಲ್ಲೆಯ ರೈತರನ್ನು ಭೇಟಿ ಮಾಡಿ, ಚರ್ಚಿಸುವಂತೆ ತೇಜಸ್ವಿ ಸೂರ್ಯ ಅವರು ಪಾಲ್ ಅವರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರು ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಭೇಟಿ ನೀಡುತ್ತಿದ್ದಾರೆ.

“ವಕ್ಫ್‌ ಅತಿಕ್ರಮಣದಿಂದ ಸಂತ್ರಸ್ತರಾದ ರೈತರೊಂದಿಗೆ ಸಂವಾದ ನಡೆಸಲು ನವೆಂಬರ್ 7 ರಂದು ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಭೇಟಿ ನೀಡುವಂತೆ ನಾನು ಮಾಡಿದ್ದ ಮನವಿಗೆ ಜೆಪಿಸಿ ಅಧ್ಯಕ್ಷರು ಒಪ್ಪಿಗೆ ನೀಡಿದ್ದಾರೆ ಎಂದರು.

ಜೆಪಿಸಿ ಅಧ್ಯಕ್ಷರು ರೈತ ಸಂಘಟನೆಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಮಠಾಧೀಶರು ಮತ್ತು ಇತರರು ನೀಡಿದ ಮನವಿಗಳನ್ನು ಜೆಪಿಸಿ ಮುಂದೆ ಇಡಲಾಗುವುದು” ಎಂದು ಜೆಪಿಸಿ ಸದಸ್ಯರಾದ ತೇಜಸ್ವಿ ಸೂರ್ಯ ಅವರು ಹೇಳಿದ್ದಾರೆ. “ರೈತರು ಸುಮಾರು ಒಂದು ಶತಮಾನದಿಂದ ತಮ್ಮ ಜಮೀನುಗಳನ್ನು ಸಾಗುವಳಿ ಮಾಡುತ್ತಿದ್ದಾರೆ.

ಆದರೆ ಇತ್ತೀಚಿನ ತಿಂಗಳುಗಳಲ್ಲಿ, ಅವರಲ್ಲಿ ಹಲವರಿಗೆ ಯಾವುದೇ ದಾಖಲೆ ಅಥವಾ ವಿವರಣೆಯಿಲ್ಲದೆ ಅವರ ಭೂಮಿಯನ್ನು ವಕ್ಫ್ ಆಸ್ತಿ ಎಂದು ಘೋಷಿಸಲು ನೋಟಿಸ್ ನೀಡಲಾಗಿದೆ ಎಂದು ಬಿಜೆಪಿ ಸಂಸದ ದೂರಿದ್ದಾರೆ. ವಕ್ಫ್‌ ಅತಿಕ್ರಮಣ ಮಾಡಿದ ಆಸ್ತಿಯ ಪ್ರಮಾಣವು ಗಣನೀಯವಾಗಿದೆ.

ಸುಮಾರು 1,500 ಎಕರೆ ಆಸ್ತಿಯನ್ನು ಅವರ ಹಳ್ಳಿಯಲ್ಲಿಯೇ ವಕ್ಫ್ ಆಸ್ತಿ ಎಂದು ಗೊತ್ತುಪಡಿಸಲಾಗಿದೆ” ಎಂದು ಪಾಲ್‌ಗೆ ಬರೆದ ಪತ್ರದಲ್ಲಿ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಸಂದರ್ಭದಲ್ಲಿ ಮೋದಿ ಸರಕಾರದ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದಂತಹ ಪರಿಸ್ಥಿತಿಯ ನಡುವೆ, ಹಿರಿಯ ಕಾಂಗ್ರೆಸ್ ನಾಯಕ...

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ ಟಿಎಂಸಿಯಲ್ಲಿ ಭುಗಿಲೆದ್ದ ಅಸಮಾಧಾನ

ಕೋಲ್ಕತ್ತಾ: ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ...

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ  ಸೇರಿದಂತೆ 40ಪ್ರಮುಖರು ಬಿಜೆಪಿಗೆ ಸೇರ್ಪಡೆ

“ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿಯಿರುವಂತೆಯೇ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಿದೆ....

ಮಹಿಳೆಯರ ಬಗ್ಗೆ ಅಶ್ಲೀಲ ಹಾಡು ಹಾಡಿದ ರ‍್ಯಾಪರ್ ಬಾದ್‌ಶಾ ಹಣೆಗೆ ನೇರವಾಗಿ ‘ಗುಂಡು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬೆದರಿಕೆ

“ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈಗ ಗಾಯಕ-ರ‍್ಯಾಪರ್ ಬಾದ್‌ಶಾ ಅವರ ಹರಿಯಾಣ ಭಾಷೆಯ ಹಾಡು ‘ಟಟೀರಿ’ ಸುತ್ತಲಿನ...