ಜಮ್ಮುಕಾಶ್ಮೀರ ವಿಧಾನ ಸಭೆಯಲ್ಲಿ ಬಿಜೆಪಿ ಸದಸ್ಯರ ವಿರೋಧದ ನಡುವೆ370ನೇ ವಿಧಿ ಮರುಸ್ಥಾಪನೆ ನಿರ್ಣಯ ಅಂಗೀಕಾರ

85

“ಪ್ರಮುಖ ಬೆಳವಣಿಗೆಯಲ್ಲಿ ಬಿಜೆಪಿ ಸದಸ್ಯರ ಪ್ರತಿಭಟನೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು ಬುಧವಾರ ಸಂವಿಧಾನದ 370 ನೇ ವಿಧಿಯನ್ನು ಮರುಸ್ಥಾಪಿಸುವ ನಿರ್ಣಯವನ್ನು ಅಂಗೀಕರಿಸಿದೆ. ಇಂದು ಜಮ್ಮು-ಕಾಶ್ಮೀರ ಸದನ ಸಭೆಯ ನಂತರ ನ್ಯಾಶನಲ್ ಕಾನ್ಫರೆನ್ಸ್ ಹಿರಿಯ ನಾಯಕ ಮತ್ತು ಡಿಸಿಎಂ ಸುರೀಂದರ್ ಸಿಂಗ್ ಚೌಧರಿ ಅವರು ಸಂವಿಧಾನ ಪರಿಚ್ಛೇದ 370 ಮರುಸ್ಥಾಪನೆ ಕುರಿತು ನಿರ್ಣಯವನ್ನು ಮಂಡಿಸಿದರು.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಖಾತರಿಯನ್ನು ಮರುಸ್ಥಾಪಿಸಲು ಮತ್ತು ಈ ನಿಬಂಧನೆಗಳನ್ನು ಮರುಸ್ಥಾಪಿಸಲು ಸಾಂವಿಧಾನಿಕ ಕಾರ್ಯವಿಧಾನಗಳನ್ನು ತರಲು ಚುನಾಯಿತ ಪ್ರತಿನಿಧಿಗಳೊಂದಿಗೆ ಸಂವಾದವನ್ನು ಪ್ರಾರಂಭಿಸಲು ಸರ್ಕಾರವನ್ನು ಒತ್ತಾಯಿಸುತ್ತದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪನೆಗಾಗಿ ಯಾವುದೇ ಪ್ರಕ್ರಿಯೆಯು ರಾಷ್ಟ್ರೀಯ ಏಕತೆ ಮತ್ತು ಜಮ್ಮು ಮತ್ತು ಕಾಶ್ಮೀರದ ಜನರ ಕಾನೂನುಬದ್ಧ ಆಕಾಂಕ್ಷೆಗಳನ್ನು ರಕ್ಷಿಸಬೇಕು ಎಂದು ಅದು ಹೇಳಿದೆ.

ಉಪ ಮುಖ್ಯಮಂತ್ರಿ ಅವರು ನಿರ್ಣಯ ಮಂಡಿಸುತ್ತಿದ್ದಂತೆಯೇ ಬಿಜೆಪಿ ಸದಸ್ಯರು ತಮ್ಮ ಕುರ್ಚಿಯಿಂದ ಎದ್ದು ನಿಂತು ನಿರ್ಣಯವನ್ನು ಮಂಡಿಸುವುದನ್ನು ವಿರೋಧಿಸಿದರು. ಇದು ಈ ದಿನದ ಕಲಾಪ ಭಾಗವಲ್ಲ ಎಂದು ಅವರು ಹೇಳಿದರು. ಬಿಜೆಪಿ ಸದಸ್ಯರ ನಿರಂತರ ಪ್ರತಿಭಟನೆಯ ನಡುವೆ, ಸ್ಪೀಕರ್ ಅಬ್ದುರ್ ರಹೀಮ್ ರಾಥರ್ ಬಿಜೆಪಿ ನಾಯಕರೊಬ್ಬರಿಗೆ ಈ ವಿಷಯದ ಬಗ್ಗೆ ಮಾತನಾಡಲು ಹೇಳಿದರು.

ಆದರೆ, ಬಿಜೆಪಿ ಸದಸ್ಯರು ಧರಣಿ ಹಾಗೂ ಘೋಷಣೆಗಳನ್ನು ಮುಂದುವರಿಸಿದರು. ಪ್ರತಿಭಟನೆಯ ನಡುವೆಯೇ ಸಭಾಧ್ಯಕ್ಷರು, ‘ನೀವು ಮಾತನಾಡಲು ಬಯಸದಿದ್ದರೆ ಮತಕ್ಕೆ ಹಾಕುತ್ತೇನೆ’ ಎಂದರು. ಬಿಜೆಪಿ ಸದಸ್ಯರ ಪ್ರತಿಭಟನೆ ಮುಂದುವರಿದಾಗ ಸ್ಪೀಕರ್ ನಿರ್ಣಯವನ್ನು ಮತಕ್ಕೆ ಹಾಕಿದರು. ಬಿಜೆಪಿಯ ಪ್ರತಿಭಟನೆ ಮತ್ತು ಘೋಷಣೆಗಳ ನಡುವೆಯೇ ಸದನದಲ್ಲಿ ನಿರ್ಣಯ ಅಂಗೀಕರಿಸಲಾಯಿತು. ನಿರ್ಣಯ ಅಂಗೀಕರಿಸಿದ ನಂತರ ಸ್ಪೀಕರ್ ಸದನವನ್ನು 15 ನಿಮಿಷಗಳ ಕಾಲ ಮುಂದೂಡಿದರು.

ಆಗಸ್ಟ್ 15, 2019 ರಂದು ಕೇಂದ್ರ ಸರ್ಕಾರವು ಸಂವಿಧಾನ ವಿಧಿ 370 ಮತ್ತು 35ಎಯನ್ನು ರದ್ದುಗೊಳಿಸಿತು. ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು.

Leave a comment

Leave a Reply

Your email address will not be published. Required fields are marked *

Related Articles

ಚೀನಾ ಪಾಕಿಸ್ತಾನ ಬಾಂಗ್ಲಾ ದೇಶದ ಗಡಿ ಪ್ರದೇಶದ ರಾಜ್ಯಗಳ ರೈಲ್ವೆ ಮೂಲಭೂತ ಸೌಲಭ್ಯ ಹೆಚ್ಚಳಕ್ಕೆ ಆದ್ಯತೆ ನೀಡಿದ ಕೇಂದ್ರ ಸರಕಾರ

“ನವದೆಹಲಿ: ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ತನ್ನ ಗಡಿಗಳಲ್ಲಿ ರೈಲ್ವೆ ಮೂಲಸೌಕರ್ಯವನ್ನು ನವೀಕರಿಸಲು ಭಾರತ 45,000...

ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ವಿಪಕ್ಷೀಯರ ಮೇಲೆ ಅಶ್ಲೀಲ ಪದ ಬಳಕೆ ನಿಲ್ಲಿಸಲಿ; ರಾಜ್ ಠಾಕ್ರೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಸದಸ್ಯರಿಗೆ ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ...

ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಕೇಂದ್ರ ಜಲಶಕ್ತಿ ಸಚಿವಾಲಯ

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ...

ಕಾಕ್ರೋಚ್ ಜನತಾ ಪಕ್ಷಕ್ಕೆ 1 ಕೋಟಿ ದೇಣಿಗೆ ನೀಡಿ ಕಾನೂನು ನೆರವು ಉಚಿತ ಎಂದ ಕಪಿಲ್ ಸಿಬಲ್

“ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು...