ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರಕ್ಕಾಗಿ ಅಧಿಕಾರಿಗಳ ಬಲಿ ಪಡೆಯುತ್ತಿದೆ ಆರ್ ಅಶೋಕ್

5

“ಬೆಳಗಾವಿ ತಹಶೀಲ್ದಾರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಕೊಂಡರುವ ಅಶೋಕ್, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದಾಗಲೆಲ್ಲ ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ ಎಂದು ವ್ಯಂಗ್ಯವಾಡಿದ್ದಾರೆ. 2013-18ರ ಅವಧಿಯಲ್ಲಿ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ, ️ಕೋಲಾರ ಡಿಸಿ ಡಿ.ಕೆ.ರವಿ ಆತ್ಮಹತ್ಯೆ️ಕಲ್ಬುರ್ಗಿಯ ದಕ್ಷ ಪೊಲೀಸ್‌ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಹತ್ಯೆ, ️ಅನ್ನಭಾಗ್ಯ ಹಗರಣದ ಸಾಕ್ಷ್ಯ ಸಂಗ್ರಹಿಸಿದ್ದ ಐ.ಎ.ಎಸ್‌ ಅಧಿಕಾರಿ ಅನುರಾಗ್‌ ತಿವಾರಿ ಉತ್ತರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಾವು.

ಹೂವಿನ ಹಡಗಲಿಯ ಡಿ.ವೈ.ಎಸ್.ಪಿ ಯಾಗಿದ್ದ ಅನುಪಮಾ ಶೆಣೈಗೆ ಕಿರುಕುಳ, ನೌಕರಿಗೆ ರಾಜೀನಾಮೆ, ಮೈಸೂರಿನ ಜಿಲ್ಲಾಧಿಕಾರಿ ಶಿಖಾ ಅವರಿಗೆ ಸಿಎಂ ಆಪ್ತರಿಂದ ಕಿರುಕುಳ, ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿಯಾಗಿದ್ದ ರಶ್ಮಿಯವರ ಮೇಲೆ ಹಾಡುಹಗಲೇ ಮಾರಣಾಂತಿಕ ಹಲ್ಲೆ.

2023- ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ, ️ಗ್ರಾಮೀಣಾಭಿವೃದ್ಧಿ ಇಲಾಖೆಯ ಲಂಚಕೋರತನಕ್ಕೆ ಬೇಸತ್ತು ದಾವಣಗೆರೆಯ ಗುತ್ತಿಗೆದಾರ ಪಿ.ಸಿ.ಗೌಡರ್ ಆತ್ಮಹತ್ಯೆ, ವರ್ಗಾವಣೆ ದಂಧೆಯ ಒತ್ತಡ, ಕಿರುಕುಳ ತಾಳಲಾರದೆ ಯಾದಗಿರಿ ಪಿಎಸ್ ಐ ಪರಶುರಾಮ್ ಹೃದಯಾಘಾತದಿಂದ ಸಾವು.

ಸಚಿವರ ಆಪ್ತರ ಕಿರುಕುಳದಿಂದ ಬೆಳಗಾವಿಯ ಎಸ್ ಡಿಎ ರುದ್ರಣ್ಣ ಆತ್ಮಹತ್ಯೆ. ಸಿಎಂ ಸಿದ್ದರಾಮಯ್ಯನವರೇ ತಮ್ಮ ಭ್ರಷ್ಟಾಚಾರದ ದಾಹ ತೀರಲು ಇನ್ನೆಷ್ಟು ಪ್ರಾಮಾಣಿಕ ಅಧಿಕಾರಿಗಳ ಬಲಿ ಆಗಬೇಕು? ಎಂದು ಪ್ರಶ್ನಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಧರ್ಮ ರಾಜಕಾರಣಕ್ಕಾಗಿ ಬಿಜೆಪಿಯವರಿಗೆ ಧರ್ಮಸ್ಥಳ ಬೇಕು ಬಿಜೆಪಿ ವಿರುದ್ಧ ::ಡಿ ಕೆ ಶಿವಕುಮಾರ್ ಆಕ್ರೋಶ

ಬೆಂಗಳೂರು: ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ...

ಪಂಚಾಯತ್ ಅಧ್ಯಕ್ಷರ ಸದಸ್ಯರ ಗೌರವಧನ ಹೆಚ್ಚಳಕ್ಕೆ ಮನವಿ ಶ್ರೀ ಮಂಜುನಾಥ್ ಭಂಡಾರಿರವರ ಪಂಚಾಯತ್ ಸದಸ್ಯರ ಹಾಗೂ ಸಿಬ್ಬಂದಿಗಳ ಪರವಾದ ಕಾಳಜಿ ಶ್ಲಾಘನೀಯ: ನವೀನ್ ಸಾಲ್ಯಾನ್

ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಮಾನ್ಯ ಶಾಸಕರಾದ ಶ್ರೀಯುತ ಮಂಜುನಾಥ್...

ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಆದೇಶ ಸುಪ್ರೀಂ ಕೋರ್ಟ್,

ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ನೀಡಲಾಗಿದ್ದ...

ಅಗಸ್ಟ್ 15 ರಿಂದ ಮುಜರಾಯಿ ಇಲಾಖೆ ಅಧೀನ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಸಚಿವ ರಾಮಲಿಂಗ ರೆಡ್ಡಿ

“ಆಗಸ್ಟ್ 15 ರಿಂದ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು...

Join our WhatsApp community