ಕಾಂಗ್ರೆಸ್ ಸರಕಾರ ಇರುವ ರಾಜ್ಯಗಳು ಗಾಂಧಿ ಪರಿವಾರಕ್ಕೆ ಬಳಕೆಯಾಗುವ ಖಜಾನೆಯಾಗಿದೆ ಪ್ರಧಾನಿ ನರೇಂದ್ರ ಮೋದಿ

61
ಮಹಾರಾಷ್ಟ್ರ ಚುನಾವಣೆ: ಕಾಂಗ್ರೆಸ್ ಆಡಳಿತದ ರಾಜ್ಯಗಳು ಪಕ್ಷದ ಶಾಹಿ ಪರಿವಾರಕ್ಕೆ ಖಜಾನೆ ಯಾಗಿದೆ ಪ್ರಧಾನಿ ಮೋದಿ ವಾಗ್ದಾಳಿ ಕಾಂಗ್ರೆಸ್ ನವರು ಎಂದಾದ್ದರೂ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪಂಚತೀರ್ಥಕ್ಕೆ ಭೇಟಿ ನೀಡಿದ್ದರೆ ಅದನ್ನು ಸಾಬೀತುಪಡಿಸುವಂತೆ ಕಾಂಗ್ರೆಸ್‌ನ ಶಾಹಿ ಪರಿವಾರಕ್ಕೆ ಸವಾಲು ಹಾಕುತ್ತೇನೆ ಎಂದರು.

ಪ್ರಧಾನಿ ಮೋದಿ ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳು ಪಕ್ಷದ ಶಾಹಿ ಪರಿವಾರಕ್ಕೆ (ಗಾಂಧಿ ಕುಟುಂಬ) ಖಜಾನೆ ಗಳಾಗಿವೆ. ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಕಾಂಗ್ರೆಸ್ ಖಜಾನೆ ಆಗಲು ನಾವು ಬಿಡಲ್ಲಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಇದೇ 20 ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕೋಲಾದಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಅವರು ಎಂದಾದರೂ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪಂಚತೀರ್ಥಕ್ಕೆ ಭೇಟಿ ನೀಡಿದ್ದರೆ ಅದನ್ನು ಸಾಬೀತುಪಡಿಸುವಂತೆ ಕಾಂಗ್ರೆಸ್‌ನ ಶಾಹಿ ಪರಿವಾರಕ್ಕೆ ಸವಾಲು ಹಾಕುತ್ತೇನೆ ಎಂದರು.


ಅಂಬೇಡ್ಕರ್ ಅವರ ಜನ್ಮಸ್ಥಳ ಮೊವ್, ಯುಕೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಲಂಡನ್ ನಲ್ಲಿ ತಂಗಿದ್ದ ಸ್ಥಳ, ಬೌದ್ಧ ಧರ್ಮವನ್ನು ಸ್ವೀಕರಿಸಿದ ನಾಗ್ಪುರದ ದೀಕ್ಷಾ ಭೂಮಿ, ದೆಹಲಿಯಲ್ಲಿ ಅವರ ‘ಮಹಾಪರಿನಿರ್ವಾಣ ಸ್ಥಳ’ ಮತ್ತು ಮುಂಬೈನ ‘ಚೈತ್ಯ ಭೂಮಿ’ಯ ಸಂಕೇತವಾಗಿ ಮೋದಿ ಅವರು ಪಂಚತೀರ್ಥ ಎಂಬ ಪದವನ್ನು ಬಳಸುವ ಮೂಲಕ ದಲಿತರ ಮತದ ಬುಟ್ಟಿಗೆ ಕೈ ಹಾಕಲು ಪ್ರಯತ್ನಿಸಿದರು.

ಹರಿಯಾಣದ ಜನರು ‘ಏಕ್ ಹೈ ತೋ ಸೇಫ್ ಹೈ’ (ನಾವು ಒಗ್ಗಟ್ಟಿನಿಂದ ಇದ್ದರೆ ನಾವು ಸುರಕ್ಷಿತರು) ಎಂಬ ಮಂತ್ರವನ್ನು ಅನುಸರಿಸುವ ಮೂಲಕ ಕಾಂಗ್ರೆಸ್‌ನ ಪಿತೂರಿಯನ್ನು ವಿಫಲಗೊಳಿಸಿದ್ದಾರೆ.ದೇಶವನ್ನು ದುರ್ಬಲಗೊಳಿಸಿದರೆ ಮಾತ್ರ ಬಲಗೊಳ್ಳುತ್ತದೆ ಎಂಬುದು ಕಾಂಗ್ರೆಸ್‌ಗೆ ಗೊತ್ತು. ಹೀಗಾಗಿ ಒಂದು ಜಾತಿಯನ್ನು ಇನ್ನೊಂದು ಜಾತಿಯ ವಿರುದ್ಧ ಎತ್ತಿಕಟ್ಟುವುದು ಆ ಪಕ್ಷದ ನೀತಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.

ಮಹಾರಾಷ್ಟ್ರದಲ್ಲಿ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ಎಂದರೆ ಭ್ರಷ್ಟಾಚಾರ ಮತ್ತು ಸಾವಿರಾರು ಕೋಟಿ ರೂಪಾಯಿಗಳ ಹಗರಣಗಳ ಗುಂಪು ಆಗಿದೆ.ನಾನು ಪ್ರಧಾನಿಯಾದ ಮೊದಲ ಎರಡು ಅವಧಿಯಲ್ಲಿ ಬಡವರಿಗೆ ನಾಲ್ಕು ಕೋಟಿ ಪಕ್ಕಾ ಮನೆಗಳನ್ನು ನೀಡಿದ್ದೇನೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟಕ್ಕೆ ಮತ ಯಾಚಿಸಲು ಬಂದಿರುವುದಾಗಿ ಮೋದಿ ಹೇಳಿದರು.

Leave a comment

Leave a Reply

Your email address will not be published. Required fields are marked *

Related Articles

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ...

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಹುಮತ ತಮಿಳುನಾಡು ಡಿ ಎಂ ಕೆ ಕೇರಳ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ??

ನವದೆಹಲಿ: ಬುಧವಾರ ನಡೆದ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಮತ್ತು ಪಶ್ಚಿಮ...

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...