ಕರ್ನಾಟಕ ರಾಜ್ಯ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಮನೆ ಮನೆಗೆ ಭೇಟಿ ನೀಡಿ ಪ್ರಚಾರ ಮಾತ್ರ

76

ರಾಜ್ಯ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ: ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಶಿಗ್ಗಾಂವಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ ಖಾನ್ ಪಠಾಣ್ ಪರ ಪ್ರಚಾರ ಸಭೆ ನಡೆಸಲಿದ್ದಾರೆ. ಬೆಂಗಳೂರು: ರಾಜ್ಯದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾಣೆಯ ಬಹಿರಂಗ ಪ್ರಚಾರ ಇಂದು ಸೋಮವಾರ ಸಂಜೆ 6 ಗಂಟೆಗೆ ಅಂತ್ಯವಾಗಲಿದೆ.

ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮನೆ ಮನೆಗೆ ತೆರಳಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಅವಕಾಶವಿದೆ. ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಶಿಗ್ಗಾಂವಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ ಖಾನ್ ಪಠಾಣ್ ಪರ ಪ್ರಚಾರ ಸಭೆ ನಡೆಸುತ್ತಿದ್ದಾರೆ.

ಉಪ ಚುನಾವಣೆ: ಮೂರೂ ಪಕ್ಷಗಳಿಗೆ ಪ್ರತಿಷ್ಠೆ ಕಣ, ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಸವಾಲು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಂಸದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ಇಂದು ವಿವಿಧೆಡೆ ಪ್ರಚಾರ ನಡೆಸುತ್ತಿದ್ದಾರೆ.

ಈ ನಡುವೆ, ಸಂಡೂರು ಹಾಗೂ ಚನ್ನಪಟ್ಟಣದಲ್ಲೂ ಅಭ್ಯರ್ಥಿಗಳು ಹಾಗೂ ರಾಜಕೀಯ ನಾಯಕರು ಮತಯಾಚಿಸುತ್ತಿದ್ದಾರೆ.ಮೂರೂ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳು ಬೃಹತ್ ಸಮಾವೇಶ ಹಮ್ಮಿಕೊಂಡು ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ.

ಚನ್ನಪಟ್ಟಣ ಉಪ ಚುನಾವಣೆ: ‘ಇಗ್ಗಲೂರು ಡ್ಯಾಮ್’ ಎಲ್ಲರ ಹಾಟ್ ಫೇವರಿಟ್; ಕ್ರೆಡಿಟ್ ಪಡೆಯಲು ನಾಯಕರ ಫೈಟ್! ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮತದಾರರಲ್ಲದವರು ಇಂದು ಸಂಜೆ 5.30ರ ನಂತರ ಕ್ಷೇತ್ರ ಬಿಟ್ಟುಹೋಗುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದೆ.

ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ, ಅದೇ ದಿನ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ಕೂಡ ಪ್ರಕಟವಾಗಲಿದೆ.

Leave a comment

Leave a Reply

Your email address will not be published. Required fields are marked *

Related Articles

ಚೀನಾ ಪಾಕಿಸ್ತಾನ ಬಾಂಗ್ಲಾ ದೇಶದ ಗಡಿ ಪ್ರದೇಶದ ರಾಜ್ಯಗಳ ರೈಲ್ವೆ ಮೂಲಭೂತ ಸೌಲಭ್ಯ ಹೆಚ್ಚಳಕ್ಕೆ ಆದ್ಯತೆ ನೀಡಿದ ಕೇಂದ್ರ ಸರಕಾರ

“ನವದೆಹಲಿ: ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ತನ್ನ ಗಡಿಗಳಲ್ಲಿ ರೈಲ್ವೆ ಮೂಲಸೌಕರ್ಯವನ್ನು ನವೀಕರಿಸಲು ಭಾರತ 45,000...

ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ವಿಪಕ್ಷೀಯರ ಮೇಲೆ ಅಶ್ಲೀಲ ಪದ ಬಳಕೆ ನಿಲ್ಲಿಸಲಿ; ರಾಜ್ ಠಾಕ್ರೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಸದಸ್ಯರಿಗೆ ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ...

ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಕೇಂದ್ರ ಜಲಶಕ್ತಿ ಸಚಿವಾಲಯ

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ...

ಕಾಕ್ರೋಚ್ ಜನತಾ ಪಕ್ಷಕ್ಕೆ 1 ಕೋಟಿ ದೇಣಿಗೆ ನೀಡಿ ಕಾನೂನು ನೆರವು ಉಚಿತ ಎಂದ ಕಪಿಲ್ ಸಿಬಲ್

“ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು...