ಕರ್ನಾಟಕ ರಾಜ್ಯ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಮನೆ ಮನೆಗೆ ಭೇಟಿ ನೀಡಿ ಪ್ರಚಾರ ಮಾತ್ರ

51

ರಾಜ್ಯ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ: ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಶಿಗ್ಗಾಂವಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ ಖಾನ್ ಪಠಾಣ್ ಪರ ಪ್ರಚಾರ ಸಭೆ ನಡೆಸಲಿದ್ದಾರೆ. ಬೆಂಗಳೂರು: ರಾಜ್ಯದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾಣೆಯ ಬಹಿರಂಗ ಪ್ರಚಾರ ಇಂದು ಸೋಮವಾರ ಸಂಜೆ 6 ಗಂಟೆಗೆ ಅಂತ್ಯವಾಗಲಿದೆ.

ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮನೆ ಮನೆಗೆ ತೆರಳಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಅವಕಾಶವಿದೆ. ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಶಿಗ್ಗಾಂವಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ ಖಾನ್ ಪಠಾಣ್ ಪರ ಪ್ರಚಾರ ಸಭೆ ನಡೆಸುತ್ತಿದ್ದಾರೆ.

ಉಪ ಚುನಾವಣೆ: ಮೂರೂ ಪಕ್ಷಗಳಿಗೆ ಪ್ರತಿಷ್ಠೆ ಕಣ, ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಸವಾಲು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಂಸದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ಇಂದು ವಿವಿಧೆಡೆ ಪ್ರಚಾರ ನಡೆಸುತ್ತಿದ್ದಾರೆ.

ಈ ನಡುವೆ, ಸಂಡೂರು ಹಾಗೂ ಚನ್ನಪಟ್ಟಣದಲ್ಲೂ ಅಭ್ಯರ್ಥಿಗಳು ಹಾಗೂ ರಾಜಕೀಯ ನಾಯಕರು ಮತಯಾಚಿಸುತ್ತಿದ್ದಾರೆ.ಮೂರೂ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳು ಬೃಹತ್ ಸಮಾವೇಶ ಹಮ್ಮಿಕೊಂಡು ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ.

ಚನ್ನಪಟ್ಟಣ ಉಪ ಚುನಾವಣೆ: ‘ಇಗ್ಗಲೂರು ಡ್ಯಾಮ್’ ಎಲ್ಲರ ಹಾಟ್ ಫೇವರಿಟ್; ಕ್ರೆಡಿಟ್ ಪಡೆಯಲು ನಾಯಕರ ಫೈಟ್! ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮತದಾರರಲ್ಲದವರು ಇಂದು ಸಂಜೆ 5.30ರ ನಂತರ ಕ್ಷೇತ್ರ ಬಿಟ್ಟುಹೋಗುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದೆ.

ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ, ಅದೇ ದಿನ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ಕೂಡ ಪ್ರಕಟವಾಗಲಿದೆ.

Leave a comment

Leave a Reply

Your email address will not be published. Required fields are marked *

Related Articles

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಸಂದರ್ಭದಲ್ಲಿ ಮೋದಿ ಸರಕಾರದ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದಂತಹ ಪರಿಸ್ಥಿತಿಯ ನಡುವೆ, ಹಿರಿಯ ಕಾಂಗ್ರೆಸ್ ನಾಯಕ...

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ ಟಿಎಂಸಿಯಲ್ಲಿ ಭುಗಿಲೆದ್ದ ಅಸಮಾಧಾನ

ಕೋಲ್ಕತ್ತಾ: ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ...

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ  ಸೇರಿದಂತೆ 40ಪ್ರಮುಖರು ಬಿಜೆಪಿಗೆ ಸೇರ್ಪಡೆ

“ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿಯಿರುವಂತೆಯೇ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಿದೆ....

ಮಹಿಳೆಯರ ಬಗ್ಗೆ ಅಶ್ಲೀಲ ಹಾಡು ಹಾಡಿದ ರ‍್ಯಾಪರ್ ಬಾದ್‌ಶಾ ಹಣೆಗೆ ನೇರವಾಗಿ ‘ಗುಂಡು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬೆದರಿಕೆ

“ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈಗ ಗಾಯಕ-ರ‍್ಯಾಪರ್ ಬಾದ್‌ಶಾ ಅವರ ಹರಿಯಾಣ ಭಾಷೆಯ ಹಾಡು ‘ಟಟೀರಿ’ ಸುತ್ತಲಿನ...