ಬೆಂಗಳೂರಿನಿಂದ ಶಬರಿಮಲೆಗೆ ಕೆಎಸ್ಆರ್‌ಟಿಸಿ ವೋಲ್ವೋ ಬಸ್ ಪ್ರಾರಂಭ

129

“ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರಿಗೆ KSRTC ಸಿಹಿಸುದ್ದಿ ನೀಡಿದ್ದು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಸೇವೆ ಆರಂಭಿಸುತ್ತಿದೆ.

. ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರ ಬಹುದಿನಗಳ ಕನಸು ಕೊನೆಗೂ ನನಸಾಗಿದ್ದು, ಬೆಂಗಳೂರಿನಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಅಯ್ಯಪ್ಪ ಭಕ್ತರಿಗೆ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಹೊಸದಾಗಿ ವೋಲ್ವೋ ಬಸ್ ಸೇವೆ ಆರಂಭಿಸಿದೆ

ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಇದೇ ನವೆಂಬರ್ 29ರಿಂದ ಹೊಸ ವೋಲ್ವೋ ಬಸ್ ಸಂಚಾರ ಆರಂಭವಾಗಲಿದೆ ಎಂದು ಹೇಳಿದೆ.

ಪ್ರಕಟಣೆಯಲ್ಲಿರುವಂತೆ ಬೆಂಗಳೂರಿನಿಂದ-ನೀಲಕ್ಕಲ್ (ಪಂಪಾ-ಶಬರಿಮಲೈ) ವರೆಗೆ ಓಡಾಟ ನಡೆಸಲಿದೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ. ನವೆಂಬರ್ 29 ರಿಂದ ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ಮಾರ್ಗದಲ್ಲಿ ವೋಲ್ವೋ ಬಸ್ ಸೇವೆ ಆರಂಭವಾಗಲಿದೆ.

ಅಂದು ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ಬಸ್ ಹೊರಟು, ಮರುದಿನ ಬೆಳಗ್ಗೆ 6.45ಕ್ಕೆ ನೀಲಕ್ಕಲ್ ತಲುಪುತ್ತದೆ. ನೀಲಕ್ಕಲ್‌ನಿಂದ ಸಂಜೆ 6 ಗಂಟೆಗೆ ಹೊರಡುವ ಬಸ್ ಮರುದಿನ ಬೆಳಗ್ಗೆ 10 ಗಂಟೆಗೆ ಬೆಂಗಳೂರು ತಲುಪಲಿದೆ. ಇನ್ನು ಪ್ರಯಾಣ ದರ ವಯಸ್ಕರಿಗೆ 1,750 ರೂ. ನಿಗದಿಪಡಿಸಲಾಗಿದೆ ಎಂದು ಕೆಎಸ್ಆರ್ ಟಿಸಿ ಮಾಹಿತಿ ನೀಡಿದೆ.

Leave a comment

Leave a Reply

Your email address will not be published. Required fields are marked *

Related Articles

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...

ವಿಭಜನೆಯತ್ತ ತೃಣಮೂಲ ಕಾಂಗ್ರೆಸ್  ಬಂಡಾಯ ಸಂಸದರ ಸಂಖ್ಯೆ 20ರ ಮ್ಯಾಜಿಕ್

“ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಹುಕಾಲದಿಂದ ನಡೆಯುತ್ತಿದ್ದ ಅಂತರ್ಯುದ್ಧ ಈಗ ನಿಜವಾಗಿದೆ. ತೃಣಮೂಲ ಕಾಂಗ್ರೆಸ್  ಸ್ಥಾಪಕಿ ಮಮತಾ...