thekarnatakatoday.com
National

ಬೆಂಗಳೂರಿನಿಂದ ಶಬರಿಮಲೆಗೆ ಕೆಎಸ್ಆರ್‌ಟಿಸಿ ವೋಲ್ವೋ ಬಸ್ ಪ್ರಾರಂಭ

“ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರಿಗೆ KSRTC ಸಿಹಿಸುದ್ದಿ ನೀಡಿದ್ದು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಸೇವೆ ಆರಂಭಿಸುತ್ತಿದೆ.

. ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರ ಬಹುದಿನಗಳ ಕನಸು ಕೊನೆಗೂ ನನಸಾಗಿದ್ದು, ಬೆಂಗಳೂರಿನಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಅಯ್ಯಪ್ಪ ಭಕ್ತರಿಗೆ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಹೊಸದಾಗಿ ವೋಲ್ವೋ ಬಸ್ ಸೇವೆ ಆರಂಭಿಸಿದೆ

ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಇದೇ ನವೆಂಬರ್ 29ರಿಂದ ಹೊಸ ವೋಲ್ವೋ ಬಸ್ ಸಂಚಾರ ಆರಂಭವಾಗಲಿದೆ ಎಂದು ಹೇಳಿದೆ.

ಪ್ರಕಟಣೆಯಲ್ಲಿರುವಂತೆ ಬೆಂಗಳೂರಿನಿಂದ-ನೀಲಕ್ಕಲ್ (ಪಂಪಾ-ಶಬರಿಮಲೈ) ವರೆಗೆ ಓಡಾಟ ನಡೆಸಲಿದೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ. ನವೆಂಬರ್ 29 ರಿಂದ ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ಮಾರ್ಗದಲ್ಲಿ ವೋಲ್ವೋ ಬಸ್ ಸೇವೆ ಆರಂಭವಾಗಲಿದೆ.

ಅಂದು ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ಬಸ್ ಹೊರಟು, ಮರುದಿನ ಬೆಳಗ್ಗೆ 6.45ಕ್ಕೆ ನೀಲಕ್ಕಲ್ ತಲುಪುತ್ತದೆ. ನೀಲಕ್ಕಲ್‌ನಿಂದ ಸಂಜೆ 6 ಗಂಟೆಗೆ ಹೊರಡುವ ಬಸ್ ಮರುದಿನ ಬೆಳಗ್ಗೆ 10 ಗಂಟೆಗೆ ಬೆಂಗಳೂರು ತಲುಪಲಿದೆ. ಇನ್ನು ಪ್ರಯಾಣ ದರ ವಯಸ್ಕರಿಗೆ 1,750 ರೂ. ನಿಗದಿಪಡಿಸಲಾಗಿದೆ ಎಂದು ಕೆಎಸ್ಆರ್ ಟಿಸಿ ಮಾಹಿತಿ ನೀಡಿದೆ.

Related posts

“ಮುಂದಿನ ವಿಚಾರಣೆಯವರೆಗೆ ವಕ್ಫ್‌ ಮಂಡಳಿಗೆ ಮುಸ್ಲಿಮೇತರರನ್ನು ನೇಮಕ ಮಾಡುವಂತಿಲ್ಲ ಮತ್ತು ವಕ್ಫ್ ಕಾಯ್ದೆ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಆದೇಶ

The Karnataka Today

ಮಹಾರಾಷ್ಟ್ರ ಮುಖ್ಯಮಂತ್ರಿ  ಹುದ್ದೆ ದೇವೇಂದ್ರ ಫಡ್ನವೀಸ್ ಗೆ ಬಹುತೇಕ ಖಚಿತ,

The Karnataka Today

ವಿದೇಶಗಳಲ್ಲಿ ಆಪರೇಷನ್ ಸಿಂಧೂರ ಬಗ್ಗೆ ಮಾಹಿತಿ ನೀಡಿ ಉಗ್ರವಾದದ ವಿರುದ್ಧ ಭಾರತದ ನಿಲುವನ್ನು ಬಹಿರಂಗಪಡಿಸಿದ ನಿಯೋಗ ಪ್ರಧಾನಿ ಮೋದಿ ಭೇಟಿ

The Karnataka Today

Leave a Comment