ಚುನಾವಣೆಗೆ ಮುನ್ನ ದಿನ ಗ್ರಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಬಸವರಾಜ್ ಬೊಮ್ಮಾಯಿ

3

“ಮತದಾನದ ಮುನ್ನಾದಿನ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪ್ರತಿ ಚುನಾವಣೆಗೂ ಮುನ್ನ ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ 2,000 ರೂ. ಜಮಾ ಮಾಡುತ್ತಿರುವುದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಇದನ್ನು ಕೂಡಲೇ ನಿಲ್ಲಿಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಚುನಾವಣೆ ಪಾರದರ್ಶಕವಾಗಿರಬೇಕು. ರಾಜ್ಯ ಸರ್ಕಾರ ಪ್ರತೀ ಬಾರಿಯೂ ಚುನಾವಣೆಗೆ ಮುನ್ನ ಸರ್ಕಾರದ ಹಣದಲ್ಲಿ ತಮ್ಮ ರಾಜಕೀಯ ರೊಟ್ಟಿ ಸುಟ್ಟುಕೊಳ್ಳುವ ಕೆಲಸ ಮಾಡುತ್ತಿದೆ. ಇದು ಅತ್ಯಂತ ಖಂಡನೀಯ.

ಚುನಾವಣಾ ಆಯೋಗ ಕಣ್ಣು ಮುಚ್ಚಿ ಕುಳಿತಿದೆ. ಹಾವೇರಿ ಜಿಲ್ಲಾಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ‌. ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ‌. ಚುನಾವಣೆಗೆ ಸರ್ಕಾರ ಹಣ ಬಳಕೆಯಾಗುತ್ತಿರುವುದು ಸ್ಪಷ್ಟ. ಸಿಎಂ ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವ, ಸಂವಿಧಾನದ ಬಹಳ ಬಗ್ಗೆ ಮಾತನಾಡುತ್ತಾರೆ‌.

ಇಡೀ ಸರಕಾರವೇ ಸರಕಾರಿ ದುಡ್ಡಿನಲ್ಲಿ ರಾಜಕೀಯ ಭ್ರಷ್ಟಾಚಾರ ಮಾಡುತ್ತಿದೆ. ಶಿಗ್ಗಾಂವಿ ಸವಣೂರು ಕ್ಷೇತ್ರದ ಜನರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ನಿರಂತರವಾಗಿ ನಡೆಯುತ್ತಿರುವ ಈ ಕ್ಷೇತ್ರದ ಅಭಿವೃದ್ಧಿಯನ್ನು ನೋಡಿ ಎಲ್ಲ ವರ್ಗದ ಜನರು ಈಗಾಗಲೇ ಏನು ತೀರ್ಮಾನ ಮಾಡಿದ್ದಿರಿ, ಅದನ್ನು ಯಾವುದೇ ಕಾರಣಕ್ಕೂ ಬದಲಾಯಿಸದೇ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ‌.

https://www.kannadaprabha.com/karnataka/2024/Nov/13/bommai-accuses-cong-of-poll-code-violation#:~:text=%E0%B2%AE%E0%B2%A4%E0%B2%A6%E0%B2%BE%E0%B2%A8%E0%B2%A6%20%E0%B2%AE%E0%B3%81%E0%B2%A8%E0%B3%8D%E0%B2%A8%E0%B2%BE%E0%B2%A6%E0%B2%BF%E0%B2%A8%20%E0%B2%97%E0%B3%83%E0%B2%B9%E0%B2%B2%E0%B2%95%E0%B3%8D%E0%B2%B7%E0%B3%8D%E0%B2%AE%E0%B3%80%20%E0%B2%B9%E0%B2%A3%20%E0%B2%AC%E0%B2%BF%E0%B2%A1%E0%B3%81%E0%B2%97%E0%B2%A1%E0%B3%86%20%E0%B2%AE%E0%B2%BE%E0%B2%A1%E0%B3%81%E0%B2%B5,%E0%B2%AE%E0%B2%A4%E0%B2%A6%E0%B2%BE%E0%B2%A8%20%E0%B2%AE%E0%B2%BE%E0%B2%A1%E0%B3%81%E0%B2%B5%E0%B2%82%E0%B2%A4%E0%B3%86%20%E0%B2%AE%E0%B2%A8%E0%B2%B5%E0%B2%BF%20%E0%B2%AE%E0%B2%BE%E0%B2%A1%E0%B2%BF%E0%B2%A6%E0%B3%8D%E0%B2%A6%E0%B2%BE%E0%B2%B0%E0%B3%86%E2%80%8C.

Leave a comment

Leave a Reply

Your email address will not be published. Required fields are marked *

Related Articles

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಾಗಿ 50 ಕೋಟಿ ಅನುದಾನ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50...

ರಾಜ್ಯ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಸಂಚಲನ ಮೂಡಿಸಿದ್ದ ಆರೋಪದ ಆಡಿಯೋ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ; ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌

ಬೆಂಗಳೂರು: ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಕುರಿತು ಸಚಿವ ಜಮೀರ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಸರ್ಫ‌ರಾಜ್‌...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮ :: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಸಮಾಜದಲ್ಲಿ ಪುಟಾಣಿ ಮಕ್ಕಳಿಂದ...

ನವೆಂಬರ್ ನಂತರ ಕರ್ನಾಟಕ ರಾಜ್ಯದ ಮುಂದಿನ ಮುಖ್ಯ ಮಂತ್ರಿ ಯಾಗಿ ಡಿಕೆ ಶಿವಕುಮಾರ್ ಅಥವಾ ಖರ್ಗೆ :: ಎಚ್‌ ವಿಶ್ವನಾಥ್‌

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚೆಂದರೆ ನವೆಂಬರ್ ವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ನಂತರ ಸಿಎಂ...