ಚುನಾವಣೆಗೆ ಮುನ್ನ ದಿನ ಗ್ರಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಬಸವರಾಜ್ ಬೊಮ್ಮಾಯಿ

73

“ಮತದಾನದ ಮುನ್ನಾದಿನ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪ್ರತಿ ಚುನಾವಣೆಗೂ ಮುನ್ನ ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ 2,000 ರೂ. ಜಮಾ ಮಾಡುತ್ತಿರುವುದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಇದನ್ನು ಕೂಡಲೇ ನಿಲ್ಲಿಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಚುನಾವಣೆ ಪಾರದರ್ಶಕವಾಗಿರಬೇಕು. ರಾಜ್ಯ ಸರ್ಕಾರ ಪ್ರತೀ ಬಾರಿಯೂ ಚುನಾವಣೆಗೆ ಮುನ್ನ ಸರ್ಕಾರದ ಹಣದಲ್ಲಿ ತಮ್ಮ ರಾಜಕೀಯ ರೊಟ್ಟಿ ಸುಟ್ಟುಕೊಳ್ಳುವ ಕೆಲಸ ಮಾಡುತ್ತಿದೆ. ಇದು ಅತ್ಯಂತ ಖಂಡನೀಯ.

ಚುನಾವಣಾ ಆಯೋಗ ಕಣ್ಣು ಮುಚ್ಚಿ ಕುಳಿತಿದೆ. ಹಾವೇರಿ ಜಿಲ್ಲಾಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ‌. ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ‌. ಚುನಾವಣೆಗೆ ಸರ್ಕಾರ ಹಣ ಬಳಕೆಯಾಗುತ್ತಿರುವುದು ಸ್ಪಷ್ಟ. ಸಿಎಂ ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವ, ಸಂವಿಧಾನದ ಬಹಳ ಬಗ್ಗೆ ಮಾತನಾಡುತ್ತಾರೆ‌.

ಇಡೀ ಸರಕಾರವೇ ಸರಕಾರಿ ದುಡ್ಡಿನಲ್ಲಿ ರಾಜಕೀಯ ಭ್ರಷ್ಟಾಚಾರ ಮಾಡುತ್ತಿದೆ. ಶಿಗ್ಗಾಂವಿ ಸವಣೂರು ಕ್ಷೇತ್ರದ ಜನರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ನಿರಂತರವಾಗಿ ನಡೆಯುತ್ತಿರುವ ಈ ಕ್ಷೇತ್ರದ ಅಭಿವೃದ್ಧಿಯನ್ನು ನೋಡಿ ಎಲ್ಲ ವರ್ಗದ ಜನರು ಈಗಾಗಲೇ ಏನು ತೀರ್ಮಾನ ಮಾಡಿದ್ದಿರಿ, ಅದನ್ನು ಯಾವುದೇ ಕಾರಣಕ್ಕೂ ಬದಲಾಯಿಸದೇ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ‌.

https://www.kannadaprabha.com/karnataka/2024/Nov/13/bommai-accuses-cong-of-poll-code-violation#:~:text=%E0%B2%AE%E0%B2%A4%E0%B2%A6%E0%B2%BE%E0%B2%A8%E0%B2%A6%20%E0%B2%AE%E0%B3%81%E0%B2%A8%E0%B3%8D%E0%B2%A8%E0%B2%BE%E0%B2%A6%E0%B2%BF%E0%B2%A8%20%E0%B2%97%E0%B3%83%E0%B2%B9%E0%B2%B2%E0%B2%95%E0%B3%8D%E0%B2%B7%E0%B3%8D%E0%B2%AE%E0%B3%80%20%E0%B2%B9%E0%B2%A3%20%E0%B2%AC%E0%B2%BF%E0%B2%A1%E0%B3%81%E0%B2%97%E0%B2%A1%E0%B3%86%20%E0%B2%AE%E0%B2%BE%E0%B2%A1%E0%B3%81%E0%B2%B5,%E0%B2%AE%E0%B2%A4%E0%B2%A6%E0%B2%BE%E0%B2%A8%20%E0%B2%AE%E0%B2%BE%E0%B2%A1%E0%B3%81%E0%B2%B5%E0%B2%82%E0%B2%A4%E0%B3%86%20%E0%B2%AE%E0%B2%A8%E0%B2%B5%E0%B2%BF%20%E0%B2%AE%E0%B2%BE%E0%B2%A1%E0%B2%BF%E0%B2%A6%E0%B3%8D%E0%B2%A6%E0%B2%BE%E0%B2%B0%E0%B3%86%E2%80%8C.

Leave a comment

Leave a Reply

Your email address will not be published. Required fields are marked *

Related Articles

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ...

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಹುಮತ ತಮಿಳುನಾಡು ಡಿ ಎಂ ಕೆ ಕೇರಳ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ??

ನವದೆಹಲಿ: ಬುಧವಾರ ನಡೆದ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಮತ್ತು ಪಶ್ಚಿಮ...

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...