ಶ್ರೀರಂಗಪಟ್ಟಣ ಸುರಕ್ಷಿತ ಸ್ಮಾರಕ ಜಾಮ ಮಸೀದಿಯಲ್ಲಿ ಅಕ್ರಮ ಮದರಸಾ ತೆರವಿಗೆ ರಾಜ್ಯ ಸರಕಾರಕ್ಕೆ ನಿರ್ದೇಶಿಸುವಂತೆ ಹೈಕೋರ್ಟಿಗೆ ಮನವಿ ಸಲ್ಲಿಸಿದ ಕೇಂದ್ರ ಸರ್ಕಾರ

69

“ಶ್ರೀರಂಗಪಟ್ಟಣದ ಐತಿಹಾಸಿಕ ಜಾಮಾ ಮಸೀದಿ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಮದರಸಾವನ್ನು ತೆರವುಗೊಳಿಸುವಂತೆ ಮಂಡ್ಯ ಜಿಲ್ಲಾಡಳಿತ ಮತ್ತು ರಾಜ್ಯ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಮನವಿ ಮಾಡಿದೆ.

ವಕ್ಫ್ ಬೋರ್ಡ್ ಈ ಕ್ರಮವನ್ನು ವಿರೋಧಿಸಿದ್ದು, ಮಸೀದಿಯನ್ನು ತನ್ನ ಆಸ್ತಿ ಎಂದು ಹೇಳಿಕೊಂಡಿದೆ ಮತ್ತು ಅಲ್ಲಿ ಮದರಸಾ ನಡೆಸುವ ಹಕ್ಕನ್ನು ಸಮರ್ಥಿಸಿಕೊಂಡಿದೆ.

ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದ ಅಭಿಷೇಕ್ ಗೌಡ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಅವರಿದ್ದ ವಿಭಾಗೀಯ ಪೀಠ ಈ ಪ್ರಕರಣದ ವಿಚಾರಣೆ ನಡೆಸಿತು.

ಮಸೀದಿಯೊಳಗೆ ಅನಧಿಕೃತ ಮದರಸಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. 1951 ರಲ್ಲಿ ಜಾಮಾ ಮಸೀದಿಯನ್ನು ಸಂರಕ್ಷಿತ ಸ್ಮಾರಕವಾಗಿ ಘೋಷಿಸಲಾಯಿತು.

ಆದರೂ ಅನಧಿಕೃತ ಮದರಸಾ ಚಟುವಟಿಕೆಗಳು ಅಲ್ಲಿ ಮುಂದುವರೆದಿವೆ ಎಂದು ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ ಅರವಿಂದ್ ಕಾಮತ್ ವಾದಿಸಿದರು

. ಕಾಮತ್ ಅವರು, ಮಸೀದಿಯಿಂದ ಮದರಸಾವನ್ನು ತೆರವುಗೊಳಿಸುವಂತೆ ಮಂಡ್ಯ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ಪ್ರತಿವಾದದಲ್ಲಿ, ರಾಜ್ಯ ಸರ್ಕಾರ ಮತ್ತು ವಕ್ಫ್ ಮಂಡಳಿಯ ವಕೀಲರು ಈ ಮನವಿಯನ್ನು ವಿರೋಧಿಸಿದರು.

ವಕ್ಫ್ ಬೋರ್ಡ್ 1963 ರಿಂದ ಈ ಆಸ್ತಿಯ ಮಾಲೀಕ ಎಂದು ಗುರುತಿಸಲಾಗಿದೆ ಮತ್ತು ಆದ್ದರಿಂದ ಅಲ್ಲಿ ಮದರಸಾ ಚಟುವಟಿಕೆಗಳನ್ನು ನಡೆಸುವುದು ಕಾನೂನುಬದ್ಧವಾಗಿದೆ ಎಂದು ಹೇಳಿದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಅವರು, ವಿಚಾರಣೆಯನ್ನು ನವೆಂಬರ್ 20ಕ್ಕೆ ಮುಂದೂಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಚೀನಾ ಪಾಕಿಸ್ತಾನ ಬಾಂಗ್ಲಾ ದೇಶದ ಗಡಿ ಪ್ರದೇಶದ ರಾಜ್ಯಗಳ ರೈಲ್ವೆ ಮೂಲಭೂತ ಸೌಲಭ್ಯ ಹೆಚ್ಚಳಕ್ಕೆ ಆದ್ಯತೆ ನೀಡಿದ ಕೇಂದ್ರ ಸರಕಾರ

“ನವದೆಹಲಿ: ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ತನ್ನ ಗಡಿಗಳಲ್ಲಿ ರೈಲ್ವೆ ಮೂಲಸೌಕರ್ಯವನ್ನು ನವೀಕರಿಸಲು ಭಾರತ 45,000...

ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ವಿಪಕ್ಷೀಯರ ಮೇಲೆ ಅಶ್ಲೀಲ ಪದ ಬಳಕೆ ನಿಲ್ಲಿಸಲಿ; ರಾಜ್ ಠಾಕ್ರೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಸದಸ್ಯರಿಗೆ ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ...

ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಕೇಂದ್ರ ಜಲಶಕ್ತಿ ಸಚಿವಾಲಯ

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ...

ಕಾಕ್ರೋಚ್ ಜನತಾ ಪಕ್ಷಕ್ಕೆ 1 ಕೋಟಿ ದೇಣಿಗೆ ನೀಡಿ ಕಾನೂನು ನೆರವು ಉಚಿತ ಎಂದ ಕಪಿಲ್ ಸಿಬಲ್

“ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು...