ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ ತನಿಖೆಗೆ ತಡೆ ನೀಡಿದ ಹೈಕೋರ್ಟ್

84

“ರೈತ ರುದ್ರಪ್ಪ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಗುರುವಾರ ತಡೆ ನೀಡಿದೆ.

ಹಾವೇರಿ ಸೆನ್‌ (ಸೈಬರ್‌, ಆರ್ಥಿಕ ಹಾಗೂ ಮಾದಕ ದ್ರವ್ಯ ನಿಯಂತ್ರಣ) ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು ಎಂದು ಕೋರಿ ಬಿಜೆಪಿಯ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿಯ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಎಫ್‌ಐಆರ್‌ಗೆ ತಡೆ ನೀಡಿದೆ. ನಕಲಿ ಸುದ್ದಿ ಹರಡಿದ ಆರೋಪ:

ತೇಜಸ್ವಿ ಸೂರ್ಯ ಪರ ವಾದ ಮಂಡಿಸಿದ ವಕೀಲರು, ತೇಜಸ್ವಿ ಸೂರ್ಯ ಅವರು ರೈತ ರುದ್ರಪ್ಪರವರ ಕುಟುಂಬಸ್ಥರ ಹೇಳಿಕೆಗಳನ್ನು ಆಧರಿಸಿ ಟ್ವೀಟ್ ಮಾಡಿದ್ದಾರೆ.

ಆದರೆ, ಜಿಲ್ಲಾ ಪೊಲೀಸರಿಂದ ಸ್ಪಷ್ಟನೆ ಸಿಗುತ್ತಿದ್ದಂತೆಯೇ ಟ್ವೀಟ್ ಡಿಲೀಟ್ ಮಾಡಲಾಗಿದೆ. ಆದ ಕಾರಣ ಅವರ ವಿರುದ್ಧ ಕಾನೂನು ಪ್ರಕ್ರಿಯೆ ಜಾರಿಗೊಳಿಸದಿರಲು ಸೂಚನೆ ನೀಡಬೇಕೆಂದು ನ್ಯಾಯಾಲಯವನ್ನು ಮನವಿ ಮಾಡಿದ್ದರು.

ಬಳಿಕ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಪ್ರಕರಣಕ್ಕೆ ತಡೆಯಾಜ್ಞೆ ನೀಡಿ, ವಿಚಾರಣೆಯನ್ನು ಡಿಸೆಂಬರ್‌ 4ಕ್ಕೆ ಮುಂದೂಡಿದರು. ಪಹಣಿಯಲ್ಲಿ ವಕ್ಫ್ ಎಂದು ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಬಳಿಕ ಸಾಲಬಾಧೆಗೆ ನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿತ್ತು

. ಈ ಕಾರಣಕ್ಕೆ ತೇಜಸ್ವಿ ಸೂರ್ಯ ಅವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

Leave a comment

Leave a Reply

Your email address will not be published. Required fields are marked *

Related Articles

ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಲಾಬಿಗಳಿಗೆ ಮಣಿಯಬೇಡಿ- ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಸೂಚನೆ

ಬೆಂಗಳೂರು: ಜುಲೈ ಮೊದಲ ವಾರದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಮಯದಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳಲು...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ರಾಮನಗರ ಜಿಲ್ಲೆ ಕುಮಾರ ಸ್ವಾಮಿ ಹಾಗೂ ಜೆಡಿಎಸ್ ಪ್ರಾಬಲ್ಯ  ಮುರಿದ ಡಿಕೆ ಶಿವಕುಮಾರ್

ರಾಮನಗರದಲ್ಲಿ ಜೆಡಿಎಸ್ ಯುಗಾಂತ್ಯ: ಜಿಲ್ಲೆಯಲ್ಲಿ ‘ಡಿ.ಕೆ ಬ್ರದರ್ಸ್’ ಪ್ರಾಬಲ್ಯ:ಎಚ್ ಡಿ ಕೆ ಬಳಿಯಿಂದ ಶಿವಕುಮಾರ್ ಕಸಿದುಕೊಂಡ್ರಾ...