thekarnatakatoday.com
State

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ ತನಿಖೆಗೆ ತಡೆ ನೀಡಿದ ಹೈಕೋರ್ಟ್

“ರೈತ ರುದ್ರಪ್ಪ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಗುರುವಾರ ತಡೆ ನೀಡಿದೆ.

ಹಾವೇರಿ ಸೆನ್‌ (ಸೈಬರ್‌, ಆರ್ಥಿಕ ಹಾಗೂ ಮಾದಕ ದ್ರವ್ಯ ನಿಯಂತ್ರಣ) ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು ಎಂದು ಕೋರಿ ಬಿಜೆಪಿಯ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿಯ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಎಫ್‌ಐಆರ್‌ಗೆ ತಡೆ ನೀಡಿದೆ. ನಕಲಿ ಸುದ್ದಿ ಹರಡಿದ ಆರೋಪ:

ತೇಜಸ್ವಿ ಸೂರ್ಯ ಪರ ವಾದ ಮಂಡಿಸಿದ ವಕೀಲರು, ತೇಜಸ್ವಿ ಸೂರ್ಯ ಅವರು ರೈತ ರುದ್ರಪ್ಪರವರ ಕುಟುಂಬಸ್ಥರ ಹೇಳಿಕೆಗಳನ್ನು ಆಧರಿಸಿ ಟ್ವೀಟ್ ಮಾಡಿದ್ದಾರೆ.

ಆದರೆ, ಜಿಲ್ಲಾ ಪೊಲೀಸರಿಂದ ಸ್ಪಷ್ಟನೆ ಸಿಗುತ್ತಿದ್ದಂತೆಯೇ ಟ್ವೀಟ್ ಡಿಲೀಟ್ ಮಾಡಲಾಗಿದೆ. ಆದ ಕಾರಣ ಅವರ ವಿರುದ್ಧ ಕಾನೂನು ಪ್ರಕ್ರಿಯೆ ಜಾರಿಗೊಳಿಸದಿರಲು ಸೂಚನೆ ನೀಡಬೇಕೆಂದು ನ್ಯಾಯಾಲಯವನ್ನು ಮನವಿ ಮಾಡಿದ್ದರು.

ಬಳಿಕ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಪ್ರಕರಣಕ್ಕೆ ತಡೆಯಾಜ್ಞೆ ನೀಡಿ, ವಿಚಾರಣೆಯನ್ನು ಡಿಸೆಂಬರ್‌ 4ಕ್ಕೆ ಮುಂದೂಡಿದರು. ಪಹಣಿಯಲ್ಲಿ ವಕ್ಫ್ ಎಂದು ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಬಳಿಕ ಸಾಲಬಾಧೆಗೆ ನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿತ್ತು

. ಈ ಕಾರಣಕ್ಕೆ ತೇಜಸ್ವಿ ಸೂರ್ಯ ಅವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

Related posts

ರಾಜ್ಯದಲ್ಲಿ 25 ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ 137ಬಾಂಗ್ಲಾದೇಶಿ ವಲಸಿಗರ ಗಡಿಪಾರು::ಗ್ರಹ ಸಚಿವ ಜಿ ಪರಮೇಶ್ವರ್

The Karnataka Today

ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ನಾಳೆ ರಾಜ್ಯಾದ್ಯಂತ ಸರಕಾರಿ ರಜೆ ಘೋಷಣೆ

The Karnataka Today

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹತ್ಯೆ ಮಾಡಿದ  ಕ್ರಿಮಿಗಳ ವಿರುದ್ಧ ಸರಕಾರ ಸೂಕ್ತ ಕಠಿಣ ಕ್ರಮಕೈಗೊಳ್ಳುವುದು :: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

The Karnataka Today

Leave a Comment