ಮಲೆನಾಡಿನಲ್ಲಿ 13 ವರ್ಷಗಳ ನಂತರ ಮತ್ತೆ ಕಾಣಿಸಿಕೊಂಡ ನಕ್ಸಲ್ ಹೆಜ್ಜೆ ಗುರುತು ತನಿಖೆ ಚುರುಕು

49

13 ವರ್ಷಗಳ ಬಳಿಕ ಮಲೆನಾಡಿನಲ್ಲಿ ಮತ್ತೆ ನಕ್ಸಲರ ಹೆಜ್ಜೆ ಗುರುತು: ಆತಂಕದಲ್ಲಿ ಸ್ಥಳೀಯರು! ಶೃಂಗೇರಿ ತಾಲ್ಲೂಕಿನ ಅರಣ್ಯದ ಸಮೀಪವಿರುವ ಹಳ್ಳಿಗಳಲ್ಲಿ ಆರು ಶಸ್ತ್ರಸಜ್ಜಿತ ಅಪರಿಚಿತರು ಕಾಣಿಸಿಕೊಂಡಿದ್ದಾರೆ ಎಂಬ ವರದಿಗಳ ಆಧಾರದ ಮೇಲೆ ಎಎನ್‌ಎಫ್ ತನ್ನ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಸುಬ್ಬೇಗೌಡ ಎಂಬುವರ ಮನೆಯಲ್ಲಿ ಎಎನ್ ಎಫ್ ತಂಡದಿಂದ ಪರಿಶೀಲನೆ

ಕೊಪ್ಪ ಮತ್ತು ಶೃಂಗೇರಿ ತಾಲೂಕಿನಲ್ಲಿ 13 ವರ್ಷಗಳ ನಂತರ ನಕ್ಸಲ್ ಚಟುವಟಿಕೆಗಳುಮತ್ತೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಜನರಲ್ಲಿ ಆತಂಕ ಮೂಡಿಸಿದೆ. ಕೊಪ್ಪ ಮತ್ತು ಶೃಂಗೇರಿ ತಾಲೂಕಿನಲ್ಲಿ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದೆ. ಜಿಲ್ಲೆಯ ಹಲವೆಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಶೃಂಗೇರಿ ತಾಲ್ಲೂಕಿನ ಅರಣ್ಯದ ಸಮೀಪವಿರುವ ಹಳ್ಳಿಗಳಲ್ಲಿ ಆರು ಶಸ್ತ್ರಸಜ್ಜಿತ ಅಪರಿಚಿತರು ಕಾಣಿಸಿಕೊಂಡಿದ್ದಾರೆ ಎಂಬ ವರದಿಗಳ ಆಧಾರದ ಮೇಲೆ ಎಎನ್‌ಎಫ್ ತನ್ನ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಮೂಲಗಳ ಪ್ರಕಾರ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ತನಗೆ ಸಿಕ್ಕ ಸುಳಿವಿನ ಆಧಾರದ ಮೇಲೆ, ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೇಗೌಡರ ಮನೆಯ ಮೇಲೆ ಎಎನ್‌ಎಫ್ ಸ್ಕ್ವಾಡ್ ದಾಳಿ ನಡೆಸಿತು, ಅಲ್ಲಿ ನಕ್ಸಲರು ಆಹಾರವನ್ನು ಬೇಯಿಸಿ ತಿಂದಿದ್ದಾರೆ ಎಂದು ವರದಿಯಾಗಿದೆ. ತಂಡವು ಮೂರು ಸಿಂಗಲ್ ಬ್ಯಾರೆಲ್ ಬಂದೂಕುಗಳು ಮತ್ತು ಕೆಲವು ಕಾರ್ಟ್ರಿಜ ಗಳನ್ನು ಪತ್ತೆ ಹಚ್ಚಿದೆ

. ಮುಂಡಗಾರು ಲತಾ ಮತ್ತು ಜಾನ್ ಎಂದು ಕರೆಯಲ್ಪಡುವ ಜಯಣ್ಣ ನೇತೃತ್ವದ ನಕ್ಸಲ್ ತಂಡಗಳು ಮನೆಗೆ ಭೇಟಿ ನೀಡಿರಬಹುದು ಎಂದು ಮೂಲಗಳು ಶಂಕಸಿವೆ. ಈ ಬಗ್ಗೆ ಎಎನ್‌ಎಫ್ ಸದಸ್ಯರು ಸುಬ್ಬೇಗೌಡರನ್ನು ವಿಚಾರಣೆಗೊಳಪಡಿಸಿದ್ದಾರೆ. ಕಾರ್ಯಾಚರಣೆ ವೇಳೆ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದು, ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

. ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಮತ್ತು ಸಿಐಡಿ ಎಡಿಜಿಪಿ ಪ್ರಣಬ್ ಮೊಹಾಂತಿ ಗ್ರಾಮಕ್ಕೆ ಭೇಟಿ ನೀಡಿದ್ದು, ಎಎನ್‌ಎಫ್ ಎಸ್‌ಪಿ ಜಿತೇಂದ್ರಕುಮಾರ್ ದಹಿಮಾ, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಮತ್ತು ಚಿಕ್ಕಮಗಳೂರು ಎಸ್‌ಪಿ ಡಾ.ವಿಕ್ರಮ್ ಅಮಾತೆ ಅವರ ಮಾರ್ಗದರ್ಶನದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...