17 ವರ್ಷಗಳ ನಂತರ ಭಾರತದ ಪ್ರಧಾನಿ ನೈಜೀರಿಯಾ ಭೇಟಿ ಪ್ರಧಾನಿ ಮೋದಿಗೆ ಅದ್ದೂರಿಯ ಸ್ವಾಗತ

50
17 ವರ್ಷಗಳ ನಂತರ ಭಾರತದ ಪ್ರಧಾನಿ ನೈಜೀರಿಯಾಕ್ಕೆ: ಮೂರು ದೇಶಗಳ ಯಾತ್ರೆ ಶುರು, ಅನಿವಾಸಿ ಭಾರತೀಯರಿಂದ ಮೋದಿಗೆ ಅದ್ಧೂರಿ ಸ್ವಾಗತ ನೈಜೀರಿಯಾ ಅಧ್ಯಕ್ಷರ ಆಹ್ವಾನದ ಮೇರೆಗೆ ಮೋದಿಯವರು ನ.16-17ರಂದು ನೈಜೀರಿಯಾಕ್ಕೆ ಭೇಟಿ ನೀಡಿದ್ದಾರೆ.


ಇದು 17 ವರ್ಷಗಳ ನಂತರ ಭಾರತೀಯ ಪ್ರಧಾನಮಂತ್ರಿಯೊಬ್ಬರ ನೈಜೀರಿಯಾ ಭೇಟಿಯಾಗಿದೆ. 2007ರ ಅಕ್ಟೋಬರ್‌ನಲ್ಲಿ ಮನಮೋಹನ್ ಸಿಂಗ್ ನೈಜೀರಿಯಾಕ್ಕೆ ಭೇಟಿ ನೀಡಿದ್ದರು. ಅನಿವಾಸಿ ಭಾರತೀಯರೊಂದಿಗೆ ಮಾತುಕತೆ ನಡೆಸುತ್ತಿರುವ ಪ್ರಧಾನಿ ಮೋದಿ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ 3 ದಿನಗಳ ವಿದೇಶ ಯಾತ್ರೆ ಶನಿವಾರ ಆರಂಭವಾಗಿದ್ದು, ನೈಜೀರಿಯಾಗೆ ಭೇಟಿ ನೀಡಿದ ಮೋದಿಯವರಿಗ ಅದ್ಧೂರಿಯಾಗಿ ಸ್ವಾಗತ ಕೋರಲಾಗಿದೆ.

ನೈಜೀರಿಯಾ ಅಧ್ಯಕ್ಷರ ಆಹ್ವಾನದ ಮೇರೆಗೆ ಮೋದಿಯವರು ನ.16-17ರಂದು ನೈಜೀರಿಯಾಕ್ಕೆ ಭೇಟಿ ನೀಡಿದ್ದಾರೆ. ಇದು 17 ವರ್ಷಗಳ ನಂತರ ಭಾರತೀಯ ಪ್ರಧಾನಮಂತ್ರಿಯೊಬ್ಬರ ನೈಜೀರಿಯಾ ಭೇಟಿಯಾಗಿದೆ. 2007ರ ಅಕ್ಟೋಬರ್‌ನಲ್ಲಿ ಮನಮೋಹನ್ ಸಿಂಗ್ ನೈಜೀರಿಯಾಕ್ಕೆ ಭೇಟಿ ನೀಡಿದ್ದರು.

ಆ ಬಳಿಕ ಇದೇ ಮೊದಲ ಭಾರೀ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ನೈಜೀರಿಯಾಗೆ ಭೇಟಿ ನೀಡಿದ ಮೋದಿಯವರಿಗೆ ಅಲ್ಲಿನ ಅನಿವಾಸಿ ಭಾರತೀಯರು ಅದ್ಧೂರಿ ಸ್ವಾಗತ ಕೋರಿದ್ದಾರೆ.

ಈ ಕುರಿತ ಫೋಟೋಗಳನ್ನು ಮೋದಿಯವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ನೈಜೀರಿಯಾದಲ್ಲಿರುವ ಭಾರತೀಯ ಸಮುದಾಯ ನೀಡಿದ ಅದ್ಧೂರಿ ಸ್ವಾಗತ ನೀಡಿದ್ದು ಹೃದಯ ಮುಟ್ಟಿತು ಎಂದು ಹೇಳಿದ್ದಾರೆ.

ಇನ್ನು ನೈಜೀರಿಯಾ ಭೇಟಿ ಬಳಿಕ ಮೋದಿಯವರು ಜಿ.20 ಶೃಂಗಕ್ಕಾಗಿ ನ.18 ಮತ್ತು 17ರಂದು ಬ್ರೆಜಿಲ್’ಗೆ ಭೇಟಿ ನೀಡಲಿದ್ದಾರೆ. ನಂತರ ನ.21ರವರೆಗೆ ಗಯಾನಾಕ್ಕೂ ಭೇಟಿ ನೀಡಲಿದ್ದಾರೆ.

ಗಯಾನಾದಲ್ಲಿ ನಡೆಯಲಿರುವ CARICOM-India ಶೃಂಗಸಭೆಯಲ್ಲಿ ಮೋದಿಯವರು ಭಾಗವಹಿಸಲಿದ್ದು, ಇದೂ ಕೂಡ ತುಂಬಾ ವಿಶೇಷವಾಗಲಿದೆ.

ಏಕೆಂದರೆ 50 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರ ಮೊದಲ ಭೇಟಿ ನೀಡುತ್ತಿದ್ದಾರೆ. ಜಿ20 ಶೃಂಗ ಅರ್ಥಪೂರ್ಣ ಮಾತುಕತೆಗೆ ಎದುರು ನೋಡುತ್ತಿರುವೆ ಎಂದು ಮೋದಿಯವರು ಟ್ವೀಟ್ ಮಾಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಜೆರುಸಲೇಂ ಅಲ್-ಅಕ್ಸಾ ಮಸೀದಿ  ಮೇಲೆ ಇರಾನ್ ಕ್ಷಿಪಣಿ ದಾಳಿ

ಈದ್ ಅಲ್-ಫಿತರ್‌ ದಿನವೇ ಜೆರುಸಲೇಂ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಅಲ್-ಅಕ್ಸಾ ಮಸೀದಿಯಿಂದ ಕೇವಲ...

ಇಂಧನ ಮೂಲಸೌಕರ್ಯದ ಮೇಲೆ ದಾಳಿಗೆ ಇರಾನ್ ತೀವ್ರ ಆಕ್ರೋಶ ಅನಿಯಂತ್ರಿತ ಪ್ರತಿದಾಳಿ” ಇರಾನ್ ಸ್ಪಷ್ಟ ಎಚ್ಚರಿಕೆ

“ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಇಂಧನ ಮೂಲಸೌಕರ್ಯದ ಮೇಲೆ ನಡೆದ ದಾಳಿಗೆ ಇರಾನ್ ತೀವ್ರ...

ಹಾರ್ಮುಜ್ ಜಲಸಂಧಿಯ ಬಳಿ ಸಮುದ್ರ ಸಂಚಾರಕ್ಕೆ ಅಡ್ಡಿ ಭಾರತೀಯ ಯುದ್ಧನೌಕೆ    ಭದ್ರತೆಯಲ್ಲಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಎಲ್ ಪಿಜಿ ಟ್ಯಾಂಕರ್

ನವದೆಹಲಿ: ಇರಾನ್ ಸಂಘರ್ಷದ ನಡುವೆಯೇ ಶನಿವಾರವೂ ಕೂಡ ಭಾರತ ಮೂಲದ  ಎಲ್ ಪಿಜಿ  ಟ್ಯಾಂಕರ್ ವೊಂದು...

ಇರಾನ್‌ನ ಪ್ರಮುಖ ತೈಲ ಶುದ್ಧೀಕರಣ ಘಟಕ ಮೇಲೆ ಇಸ್ರೇಲ್ ದಾಳಿ ನೆರೆ ರಾಷ್ಟ್ರ ಗಳ ಕ್ಷಮೆ ಕೇಳಿದ ಇರಾನ್

ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಎರಡನೇ ವಾರಕ್ಕೆ ಕಾಲಿಟ್ಟಿದ್ದು, ಇರಾನ್ ಹಾಗೂ ಮಧ್ಯಪ್ರಾಚ್ಯದ...