17 ವರ್ಷಗಳ ನಂತರ ಭಾರತದ ಪ್ರಧಾನಿ ನೈಜೀರಿಯಾ ಭೇಟಿ ಪ್ರಧಾನಿ ಮೋದಿಗೆ ಅದ್ದೂರಿಯ ಸ್ವಾಗತ

2
17 ವರ್ಷಗಳ ನಂತರ ಭಾರತದ ಪ್ರಧಾನಿ ನೈಜೀರಿಯಾಕ್ಕೆ: ಮೂರು ದೇಶಗಳ ಯಾತ್ರೆ ಶುರು, ಅನಿವಾಸಿ ಭಾರತೀಯರಿಂದ ಮೋದಿಗೆ ಅದ್ಧೂರಿ ಸ್ವಾಗತ ನೈಜೀರಿಯಾ ಅಧ್ಯಕ್ಷರ ಆಹ್ವಾನದ ಮೇರೆಗೆ ಮೋದಿಯವರು ನ.16-17ರಂದು ನೈಜೀರಿಯಾಕ್ಕೆ ಭೇಟಿ ನೀಡಿದ್ದಾರೆ.


ಇದು 17 ವರ್ಷಗಳ ನಂತರ ಭಾರತೀಯ ಪ್ರಧಾನಮಂತ್ರಿಯೊಬ್ಬರ ನೈಜೀರಿಯಾ ಭೇಟಿಯಾಗಿದೆ. 2007ರ ಅಕ್ಟೋಬರ್‌ನಲ್ಲಿ ಮನಮೋಹನ್ ಸಿಂಗ್ ನೈಜೀರಿಯಾಕ್ಕೆ ಭೇಟಿ ನೀಡಿದ್ದರು. ಅನಿವಾಸಿ ಭಾರತೀಯರೊಂದಿಗೆ ಮಾತುಕತೆ ನಡೆಸುತ್ತಿರುವ ಪ್ರಧಾನಿ ಮೋದಿ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ 3 ದಿನಗಳ ವಿದೇಶ ಯಾತ್ರೆ ಶನಿವಾರ ಆರಂಭವಾಗಿದ್ದು, ನೈಜೀರಿಯಾಗೆ ಭೇಟಿ ನೀಡಿದ ಮೋದಿಯವರಿಗ ಅದ್ಧೂರಿಯಾಗಿ ಸ್ವಾಗತ ಕೋರಲಾಗಿದೆ.

ನೈಜೀರಿಯಾ ಅಧ್ಯಕ್ಷರ ಆಹ್ವಾನದ ಮೇರೆಗೆ ಮೋದಿಯವರು ನ.16-17ರಂದು ನೈಜೀರಿಯಾಕ್ಕೆ ಭೇಟಿ ನೀಡಿದ್ದಾರೆ. ಇದು 17 ವರ್ಷಗಳ ನಂತರ ಭಾರತೀಯ ಪ್ರಧಾನಮಂತ್ರಿಯೊಬ್ಬರ ನೈಜೀರಿಯಾ ಭೇಟಿಯಾಗಿದೆ. 2007ರ ಅಕ್ಟೋಬರ್‌ನಲ್ಲಿ ಮನಮೋಹನ್ ಸಿಂಗ್ ನೈಜೀರಿಯಾಕ್ಕೆ ಭೇಟಿ ನೀಡಿದ್ದರು.

ಆ ಬಳಿಕ ಇದೇ ಮೊದಲ ಭಾರೀ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ನೈಜೀರಿಯಾಗೆ ಭೇಟಿ ನೀಡಿದ ಮೋದಿಯವರಿಗೆ ಅಲ್ಲಿನ ಅನಿವಾಸಿ ಭಾರತೀಯರು ಅದ್ಧೂರಿ ಸ್ವಾಗತ ಕೋರಿದ್ದಾರೆ.

ಈ ಕುರಿತ ಫೋಟೋಗಳನ್ನು ಮೋದಿಯವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ನೈಜೀರಿಯಾದಲ್ಲಿರುವ ಭಾರತೀಯ ಸಮುದಾಯ ನೀಡಿದ ಅದ್ಧೂರಿ ಸ್ವಾಗತ ನೀಡಿದ್ದು ಹೃದಯ ಮುಟ್ಟಿತು ಎಂದು ಹೇಳಿದ್ದಾರೆ.

ಇನ್ನು ನೈಜೀರಿಯಾ ಭೇಟಿ ಬಳಿಕ ಮೋದಿಯವರು ಜಿ.20 ಶೃಂಗಕ್ಕಾಗಿ ನ.18 ಮತ್ತು 17ರಂದು ಬ್ರೆಜಿಲ್’ಗೆ ಭೇಟಿ ನೀಡಲಿದ್ದಾರೆ. ನಂತರ ನ.21ರವರೆಗೆ ಗಯಾನಾಕ್ಕೂ ಭೇಟಿ ನೀಡಲಿದ್ದಾರೆ.

ಗಯಾನಾದಲ್ಲಿ ನಡೆಯಲಿರುವ CARICOM-India ಶೃಂಗಸಭೆಯಲ್ಲಿ ಮೋದಿಯವರು ಭಾಗವಹಿಸಲಿದ್ದು, ಇದೂ ಕೂಡ ತುಂಬಾ ವಿಶೇಷವಾಗಲಿದೆ.

ಏಕೆಂದರೆ 50 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರ ಮೊದಲ ಭೇಟಿ ನೀಡುತ್ತಿದ್ದಾರೆ. ಜಿ20 ಶೃಂಗ ಅರ್ಥಪೂರ್ಣ ಮಾತುಕತೆಗೆ ಎದುರು ನೋಡುತ್ತಿರುವೆ ಎಂದು ಮೋದಿಯವರು ಟ್ವೀಟ್ ಮಾಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಕೇರಳ ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಯೆಮೆನ್ ಗಲ್ಲು ಶಿಕ್ಷೆ ರದ್ದಾಗಿಲ್ಲ; ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ನವದೆಹಲಿ: ಯುದ್ಧಪೀಡಿತ ಯೆಮೆನ್ ದೇಶದಲ್ಲಿ ಮರಣದಂಡನೆ ಎದುರಿಸುತ್ತಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ...

ಮ್ಯಾನ್ಮಾರ್‌ನಲ್ಲಿ ಭಾರತದ ಸರ್ಜಿಕಲ್ ಸ್ಟ್ರೈಕ್?: ಡ್ರೋನ್ ದಾಳಿಯಲ್ಲಿ ಉಲ್ಫಾ-ಐ ಕಮಾಂಡರ್ ನಯನ್ ಮೇಧಿ ಸೇರಿ 19 ಮಂದಿ ಸಾವು

ಮ್ಯಾನ್ಮಾರ್‌ನ ನಿಷೇಧಿತ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂ-ಇಂಡಿಪೆಂಡೆಂಟ್ (ULFA) ತನ್ನ ಪೂರ್ವ ಪ್ರಧಾನ ಕಚೇರಿಯ...

ಪಾಕಿಸ್ತಾನದ ಐಎಸ್ ಐ ಜೊತೆಗೆ ಸಂಬಂಧ ಹೊಂದಿದ್ದ ಮೋಸ್ಟ್ ವಾಂಟೆಡ್ ಉಗ್ರ ಪವಿತ್ರ ಸಿಂಗ್ ಬಟಾಲ ಬಂಧನ

“ಪಾಕಿಸ್ತಾನದ ಐಎಸ್ ಐ ಜೊತೆಗೆ ಸಂಪರ್ಕ ಹೊಂದಿರುವ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ (ಬಿಕೆಐ) ಸಂಘಟನೆಯೊಂದಿಗೆ ಸಂಬಂಧ...

ಕೈಲಾಸ ಮಾನಸ ಸರೋವರ ಯಾತ್ರೆ ಸೇತುವೆ ಕುಸಿತದಿಂದ ಗೈರಾ೦ಗ್ ಕೌಂಟಿಯಲ್ಲಿ ಸಿಲುಕಿಕೊಂಡ 23 ಯಾತ್ರಿಗಳು

“ಭೂಕುಸಿತದಿಂದಾಗಿ ಸೇತುವೆ ಕುಸಿದ ಪರಿಣಾಮ, ಕೈಲಾಸ ಮಾನಸಸರೋವರಕ್ಕೆ ತೆರಳುತ್ತಿದ್ದ 23 ಯಾತ್ರಿಕರ ಗುಂಪು ಟಿಬೆಟ್‌ನ ಗೈರಾಂಗ್...