ಈಜುಕೊಳದಲ್ಲಿ ಮೂವರು ಯುವತಿಯರು ಮೃತಪಟ್ಟ ಪ್ರಕರಣ ಇಬ್ಬರ ಬಂಧನ

38

“ಈಜುಕೊಳದಲ್ಲಿ ಮೂವರು ಯುವತಿಯರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್‌ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ರೆಸಾರ್ಟ್ ಮಾಲೀಕ ಮನೋಹರ್ ವಿ.ಪುತ್ರನ್ ಮತ್ತು ವ್ಯವಸ್ಥಾಪಕ ಭರತ್ ಬಂಧನಕ್ಕೊಳಗಾದವರಾಗಿದ್ದಾರೆ.

ಮಂಗಳೂರು ಹೊರವಲಯ ಉಚ್ಚಿಲ ಬೀಚ್ ಬಳಿಯ ರೆಸಾರ್ಟ್ ನಲ್ಲಿ ಈಜುಕೊಳದಲ್ಲಿ ಈಜಾಡುವಾಗ ನಿಶಿತ ಎಂ.ಡಿ. (21), ಪಾರ್ವತಿ ಎಸ್ (20), ಕೀರ್ತನ ಎನ್(21) ಉಸಿರುಗಟ್ಟಿ ಸಾವನ್ನಪ್ಪಿದ್ದರು.

ಮೈಸೂರಿನ ಜಿಎಸ್ ಎಸ್ ಎಸ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಅ್ಯಂಡ್‌ ಕಮ್ಯುನಿಕೇಷನ್ ವಿಭಾಗದ ವಿದ್ಯಾರ್ಥಿನಿಯರಾಗಿದ್ದ ಇವರು, ಕಳೆದ ಶನಿವಾರ ರೆಸಾರ್ಟ್ ನಲ್ಲಿ ರೂಮನ್ನು ಬಾಡಿಗೆಗೆ ಪಡೆದುಕೊಂಡಿದ್ದರು.

ಭಾನುವಾರ ಬೆಳಿಗ್ಗೆ ವಿಡಿಯೊ ಮಾಡುವುದಕ್ಕಾಗಿ ಮೊಬೈಲ್ ಫೋನ್‌ನಲ್ಲಿ ಕ್ಯಾಮೆರಾ ಆನ್ ಮಾಡಿಟ್ಟು ನೀರಿಗಿಳಿದಿದ್ದರು. ಈ ವೇಳೆ ಆಳವಿರುವ ಕಡೆ ತೆರಳಿರುವ ಯುವತಿಯರು, ಈಜು ಬಾರದೆ ಮುಳುಗಿ ಮೃತಪಟ್ಟಿದ್ದಾರೆಂದು ವರದಿಗಳು ತಿಳಿಸಿವೆ.

ಘಟನೆ ಬೆನ್ನಲ್ಲೇ ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಸಿಬ್ಬಂದಿಯನ್ನು ನಿಯೋಜಿಸದೆ ಮತ್ತು ನೀರಿನ ಆಳದ ಬಗ್ಗೆ ಮಾಹಿತಿ ಫಲಕ ಅಳವಡಿಸದೆ ಸುರಕ್ಷತಾ ಲೋಪ ಎಸಗಿರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ...

ಪೂರ್ಣಿಮಾ ಶೆಟ್ಟಿಗೆ ‘ಮಾನವ ಹಕ್ಕುಗಳ ಸಬಲೀಕರಣ ಮಾನವೀಯ ಶ್ರೇಷ್ಠತೆ’ ಪ್ರಶಸ್ತಿ ಗೌರವ

ಸಾಮಾಜಿಕ ಸೇವಾ ಕಾರ್ಯಕರ್ತೆ ಹಾಗೂ ‘ವಸುದೈವ ಕುಟುಂಬಕಂ’ ಎನ್‌ಜಿಒ ಸಂಸ್ಥೆಯ ಸಂಸ್ಥಾಪಕಿ ಪೂರ್ಣಿಮಾ ಶೆಟ್ಟಿ ಅವರಿಗೆ...