ಈಜುಕೊಳದಲ್ಲಿ ಮೂವರು ಯುವತಿಯರು ಮೃತಪಟ್ಟ ಪ್ರಕರಣ ಇಬ್ಬರ ಬಂಧನ

1

“ಈಜುಕೊಳದಲ್ಲಿ ಮೂವರು ಯುವತಿಯರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್‌ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ರೆಸಾರ್ಟ್ ಮಾಲೀಕ ಮನೋಹರ್ ವಿ.ಪುತ್ರನ್ ಮತ್ತು ವ್ಯವಸ್ಥಾಪಕ ಭರತ್ ಬಂಧನಕ್ಕೊಳಗಾದವರಾಗಿದ್ದಾರೆ.

ಮಂಗಳೂರು ಹೊರವಲಯ ಉಚ್ಚಿಲ ಬೀಚ್ ಬಳಿಯ ರೆಸಾರ್ಟ್ ನಲ್ಲಿ ಈಜುಕೊಳದಲ್ಲಿ ಈಜಾಡುವಾಗ ನಿಶಿತ ಎಂ.ಡಿ. (21), ಪಾರ್ವತಿ ಎಸ್ (20), ಕೀರ್ತನ ಎನ್(21) ಉಸಿರುಗಟ್ಟಿ ಸಾವನ್ನಪ್ಪಿದ್ದರು.

ಮೈಸೂರಿನ ಜಿಎಸ್ ಎಸ್ ಎಸ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಅ್ಯಂಡ್‌ ಕಮ್ಯುನಿಕೇಷನ್ ವಿಭಾಗದ ವಿದ್ಯಾರ್ಥಿನಿಯರಾಗಿದ್ದ ಇವರು, ಕಳೆದ ಶನಿವಾರ ರೆಸಾರ್ಟ್ ನಲ್ಲಿ ರೂಮನ್ನು ಬಾಡಿಗೆಗೆ ಪಡೆದುಕೊಂಡಿದ್ದರು.

ಭಾನುವಾರ ಬೆಳಿಗ್ಗೆ ವಿಡಿಯೊ ಮಾಡುವುದಕ್ಕಾಗಿ ಮೊಬೈಲ್ ಫೋನ್‌ನಲ್ಲಿ ಕ್ಯಾಮೆರಾ ಆನ್ ಮಾಡಿಟ್ಟು ನೀರಿಗಿಳಿದಿದ್ದರು. ಈ ವೇಳೆ ಆಳವಿರುವ ಕಡೆ ತೆರಳಿರುವ ಯುವತಿಯರು, ಈಜು ಬಾರದೆ ಮುಳುಗಿ ಮೃತಪಟ್ಟಿದ್ದಾರೆಂದು ವರದಿಗಳು ತಿಳಿಸಿವೆ.

ಘಟನೆ ಬೆನ್ನಲ್ಲೇ ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಸಿಬ್ಬಂದಿಯನ್ನು ನಿಯೋಜಿಸದೆ ಮತ್ತು ನೀರಿನ ಆಳದ ಬಗ್ಗೆ ಮಾಹಿತಿ ಫಲಕ ಅಳವಡಿಸದೆ ಸುರಕ್ಷತಾ ಲೋಪ ಎಸಗಿರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...

ಮರವಂತೆ ಮಳೆಗಾಲದಲ್ಲಿ ಬೋಟ್ ರೈಡಿಂಗ್ ಪ್ರವಾಸಿಗರಪ್ರಾಣದೊಂದಿಗೆ ಚೆಲ್ಲಾಟ

ಬೈಂದೂರು ತಾಲೂಕು ಮರವಂತೆ ಗ್ರಾಮದ ಶ್ರೀ ವರಹ ಮಹಾರಾಜ ಸ್ವಾಮಿ ದೇವಸ್ಥಾನದ ಹಿಂಬದಿಯಲ್ಲಿ ನರೇಶ್ ಖಾರ್ವಿ...

ಸರಕಾರಿ ಸ್ಥಳದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮೂವರ ವಿರುದ್ಧ  ಕಲ್ಲು ಕಳವು ಪ್ರಕರಣ ದಾಖಲು

ನಂದಳಿಕೆ ಸರಕಾರಿ ಜಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮಾಡಿ ಸಮುದ್ರಕ್ಕೆ ಕಲ್ಲು ಸಾಗಿಸುತ್ತಿದ್ದ ಮೂವರ ವಿರುದ್ಧ ...

Join our WhatsApp community