thekarnatakatoday.com
Politics

ಕರಿಯ ಕುಮಾರಸ್ವಾಮಿ ಹೇಳಿಕೆ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್ ತಲೆದಂಡ ಸಾಧ್ಯತೆ

“ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರನ್ನು ‘ಕರಿಯ’ ಎಂದು ಟೀಕಿಸಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ರಾಜ್ಯ ಕಾಂಗ್ರೆಸ್ ಶಿಸ್ತು ಕ್ರಮ ತೆಗೆದುಕೊಳ್ಳಬಹುದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಸೋಮವಾರ ಹೇಳಿದ್ದಾರೆ.

ಹಲವು ಕಾಂಗ್ರೆಸ್ ಪದಾಧಿಕಾರಿಗಳು, ಪಕ್ಷಕ್ಕೆ ಹಾನಿ ಮಾಡಿದ ಮತ್ತು ಮುಜುಗರ ಉಂಟು ಮಾಡಿದ ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪಕ್ಷವನ್ನು ಒತ್ತಾಯಿಸುತ್ತಿದ್ದಾರೆ.

“ನಮ್ಮ ರಾಜ್ಯ ಕಾಂಗ್ರೆಸ್ ಅಧ್ಯಕ್ಷ(ಡಿ ಕೆ ಶಿವಕುಮಾರ್)ರು, ಉಪಚುನಾವಣೆಯ ನಂತರ, ಅವರ (ಖಾನ್) ಹೇಳಿಕೆ ಚುನಾವಣೆಯ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ.

ಪಕ್ಷದಲ್ಲಿ ರಹಮಾನ್ ಖಾನ್ ನೇತೃತ್ವದಲ್ಲಿ ಶಿಸ್ತು ಸಮಿತಿಯಿದೆ. ಪಕ್ಷದ ಅಧ್ಯಕ್ಷರು ಈ ಕುರಿತು ಕ್ರಮಕ್ಕೆ ಶಿಸ್ತು ಸಮಿತಿಗೆ ಸೂಚಿಸಿದರೆ, ಅವರು ಖಾನ್ ಅವರನ್ನು ಕರೆದು ವಿಚಾರಿಸಬಹುದು” ಎಂದು ಪರಮೇಶ್ವರ ಅವರು ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷಯ ಗಂಭೀರವಾಗಿದ್ದರೆ ಸಮಿತಿಯು ಅವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಬಹುದು. ನವೆಂಬರ್ 13 ರಂದು, ಚನ್ನಪಟ್ಟಣ, ಶಿಗ್ಗಾಂವ್ ಮತ್ತು ಸಂಡೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಯು ಪಕ್ಷದ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಅನೇಕ ಕಾಂಗ್ರೆಸ್ ಮುಖಂಡರು ನಂಬಿದ್ದಾರೆ.

Related posts

ಸಿಟಿ ರವಿ ಆಕ್ಷೇಪಾರ್ಹ್ ಪದ ಬಳಕೆ ಮಾಡಿದ ಬಗ್ಗೆ ಆಡಿಯೋ ವಿಡಿಯೋ ಸಾಕ್ಷಿ ಇದೆ ಮುಖ್ಯಮಂತ್ರಿ ಸಿದ್ದರಾಮಯ್ಯ

The Karnataka Today

ಸಿಎಂ ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಜಾರಕಿಹೊಳಿ ಮನೆಯಲ್ಲಿ ಔತಣ ಕೂಟ

The Karnataka Today

ಧೈರ್ಯವಿದ್ದರೆ ಬಿಜೆಪಿ ಪಕ್ಷದ ಧ್ವಜದಿಂದ ‘ಹಸಿರು ಬಣ್ಣ’ ತೆಗೆದುಹಾಕಲಿ ಶಿವಸೇನೆ-ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ ಸವಾಲು

The Karnataka Today

Leave a Comment