ಬಿಜೆಪಿ ವಿರುದ್ಧ 100ಕೋಟಿ ಆಮಿಷ ಆರೋಪ ಸಾಕ್ಷಿ ಒದಗಿಸಿ ಇಲ್ವವೇ ಸೂಕ್ತ ಕ್ರಮ ಎದುರಿಸಿ ಪ್ರಹ್ಲಾದ್ ಜೋಶಿ

54

“ಬಿಜೆಪಿ ವಿರುದ್ಧ 100 ಕೋಟಿ ಆಮಿಷ ಆರೋಪ ಮಾಡಿರುವ ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಗಣಿಗ ಅವರು ತಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಲಿ, ಇಲ್ಲವೇ ಕ್ರಮ ಎದುರಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಆಧಾರರಹಿತ ಆರೋಪಗಳನ್ನು ಮಾಡುವುದು ಸರಿಯಲ್ಲ. ಆರೋಪಕ್ಕೆ ಸಾಕ್ಷಿಗಳಿದ್ದರೆ ಬಹಿರಂಗಪಡಿಸಲಿ.

100 ಕೋಟಿ ಇರಲಿ, 500 ಕೋಟಿ ಇರಲಿ, ಸಾಕ್ಷ್ಯವಿದ್ದರೆ ಬಿಡುಗಡೆ ಮಾಡಿ. ಯಾರೂ ನಿಮ್ಮನ್ನು ತಡೆಯುತ್ತಿಲ್ಲ. ಗಾಣಿಗ ಅವರು ಮೊದಲಿನಿಂದಲೂ ಈ ಬಗ್ಗೆ ಮಾತನಾಡುತ್ತಿದ್ದಾರೆ, ಆದರೆ, ಈ ವರೆಗೂ ಯಾವುದೇ ಸಾಕ್ಷಿಗಳನ್ನೇಕೆ ಬಿಡುಗಡೆ ಮಾಡಿಲ್ಲ? ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಸಿದ್ದರಾಮಯ್ಯ ಅವರೇ ಬಿಜೆಪಿಕೆ ಕೆಲ ಕಾಂಗ್ರೆಸ್‌ ಶಾಸಕರನ್ನು ಕಳುಹಿಸಿದ್ದರು. ಹೀಗಾಗಿಯೇ ನಾವು ಸರ್ಕಾರ ರಚನೆ ಮಾಡಿದೆವು. ಈ ಬಾರಿ ಅವರಿಗೆ ಬಹುಮತ ಇದೆ.

ನಾವು ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ. ಪ್ರತಿಪಕ್ಷದಲ್ಲಿದ್ದು ಸಾರ್ವಜನಿಕ ಒಳಿತಿಗಾಗಿ ರಚನಾತ್ಮಕ ಕೆಲಸಗಳತ್ತ ಗಮನ ಹರಿಸುವಂತೆ ಹೈಕಮಾಂಡ್ ರಾಜ್ಯ ಘಟಕಕ್ಕೆ ಸೂಚನೆ ನೀಡಿದೆ ಎಂದು ತಿಳಿಸಿದರು. ಇದೇ ವೇಳೆ ಸರ್ಕಾರದ ವಿರುದ್ದ ಕಿಡಿಕಾರಿದ ಅವರು, ಕಾಂಗ್ರೆಸ್ ತನ್ನ ಅಕ್ರಮಗಳನ್ನು ಮುಚ್ಚಿಕೊಳ್ಳಲು ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು.

ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನ್ಯಾಯಾಲಯ ಸ್ಪಷ್ಟ ತೀರ್ಪು ನೀಡಿದೆ. ಲೋಕಾಯುಕ್ತ ತನಿಖೆ ನಡೆಯುತ್ತಿದ್ದರೂ ಕಾಂಗ್ರೆಸ್ ನಾಯಕರು ನೈಜ ಸಮಸ್ಯೆಗಳಿಂದ ಗಮನ ಬೇರೆಡೆ ಸೆಳೆಯಲು ಆಧಾರ ರಹಿತ ಹೇಳಿಕೆ ನೀಡುತ್ತಿದ್ದಾರೆಂದು ಕಿಡಿಕಾರಿದರು”

Leave a comment

Leave a Reply

Your email address will not be published. Required fields are marked *

Related Articles

ರಾಜ್ಯ ಸಚಿವ ಸಂಪುಟ ಖಾತೆ ಹಂಚಿಕೆ ಕಸರತ್ತು ನೂತನ ಸಚಿವರ ಸಂಭಾವ್ಯ ಖಾತೆಗಳ ಪಟ್ಟಿ

“ಬೆಂಗಳೂರು: ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ವಿಸ್ತರಣೆಯಾಗಿದ್ದು, 19 ಕಾಂಗ್ರೆಸ್...

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: ಡಿಸಿಸಿ ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆಗಳ ವೇಳೆ ನಾಯಕರು ಪಕ್ಷಾಂತರ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕುವ...

ಉಡುಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ:ಶಾಸಕಮಂಜುನಾಥ ಭಂಡಾರಿ

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ...