ವಯನಾಡು ಶಬರಿಮಲೆ ಯಾತ್ರಿಗಳ ಬಸ್ ಅಪಘಾತ 27 ಮಂದಿಗೆ ಗಾಯ ಆಸ್ಪತ್ರೆಗೆ ದಾಖಲು

78

“ಶಬರಿಮಲೆ ದೇವಸ್ಥಾನದಿಂದ ವಾಪಸ್ ಬರುತ್ತಿದ್ದ ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರು ಪ್ರಯಾಣಿಸುತ್ತಿದ್ದ ಬಸ್ ಕೇರಳದ ವಯನಾಡಿನ ತಿರುನೆಲ್ಲಿ ಬಳಿ ಮಂಗಳವಾರ ಬೆಳಗ್ಗೆ ಪಲ್ಟಿಯಾಗಿದ್ದು, ಅಪಘಾತದಲ್ಲಿ 27 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಇಬ್ಬರು ಮಕ್ಕಳು ಸೇರಿದಂತೆ 45 ಜನರಿದ್ದ ಬಸ್ ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿ, ಮೈಸೂರಿನ ಹುಣಸೂರಿಗೆ ಹಿಂದಿರುಗುವಾಗ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ತಕ್ಷಣವೇ ವಯನಾಡಿನ ಮಾನಂತವಾಡಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ಗಾಯಗೊಂಡ ಎಲ್ಲಾ ಪ್ರಯಾಣಿಕರ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಬರಿಮಲೆ ಮಂಡಲ ಮಹೋತ್ಸವ ಹಾಗೂ ಮಕರಜ್ಯೋತಿ ಉತ್ಸವ ಶುಕ್ರವಾರ(ನವೆಂಬರ್ 15) ಸಂಜೆಯಿಂದಲೇ ಆರಂಭಗೊಂಡಿದ್ದು, ಶನಿವಾರದಿಂದ(ನವೆಂಬರ್ 16) ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.”

Leave a comment

Leave a Reply

Your email address will not be published. Required fields are marked *

Related Articles

ಚೀನಾ ಪಾಕಿಸ್ತಾನ ಬಾಂಗ್ಲಾ ದೇಶದ ಗಡಿ ಪ್ರದೇಶದ ರಾಜ್ಯಗಳ ರೈಲ್ವೆ ಮೂಲಭೂತ ಸೌಲಭ್ಯ ಹೆಚ್ಚಳಕ್ಕೆ ಆದ್ಯತೆ ನೀಡಿದ ಕೇಂದ್ರ ಸರಕಾರ

“ನವದೆಹಲಿ: ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ತನ್ನ ಗಡಿಗಳಲ್ಲಿ ರೈಲ್ವೆ ಮೂಲಸೌಕರ್ಯವನ್ನು ನವೀಕರಿಸಲು ಭಾರತ 45,000...

ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ವಿಪಕ್ಷೀಯರ ಮೇಲೆ ಅಶ್ಲೀಲ ಪದ ಬಳಕೆ ನಿಲ್ಲಿಸಲಿ; ರಾಜ್ ಠಾಕ್ರೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಸದಸ್ಯರಿಗೆ ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ...

ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಕೇಂದ್ರ ಜಲಶಕ್ತಿ ಸಚಿವಾಲಯ

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ...

ಕಾಕ್ರೋಚ್ ಜನತಾ ಪಕ್ಷಕ್ಕೆ 1 ಕೋಟಿ ದೇಣಿಗೆ ನೀಡಿ ಕಾನೂನು ನೆರವು ಉಚಿತ ಎಂದ ಕಪಿಲ್ ಸಿಬಲ್

“ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು...