ವಯನಾಡು ಶಬರಿಮಲೆ ಯಾತ್ರಿಗಳ ಬಸ್ ಅಪಘಾತ 27 ಮಂದಿಗೆ ಗಾಯ ಆಸ್ಪತ್ರೆಗೆ ದಾಖಲು

72

“ಶಬರಿಮಲೆ ದೇವಸ್ಥಾನದಿಂದ ವಾಪಸ್ ಬರುತ್ತಿದ್ದ ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರು ಪ್ರಯಾಣಿಸುತ್ತಿದ್ದ ಬಸ್ ಕೇರಳದ ವಯನಾಡಿನ ತಿರುನೆಲ್ಲಿ ಬಳಿ ಮಂಗಳವಾರ ಬೆಳಗ್ಗೆ ಪಲ್ಟಿಯಾಗಿದ್ದು, ಅಪಘಾತದಲ್ಲಿ 27 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಇಬ್ಬರು ಮಕ್ಕಳು ಸೇರಿದಂತೆ 45 ಜನರಿದ್ದ ಬಸ್ ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿ, ಮೈಸೂರಿನ ಹುಣಸೂರಿಗೆ ಹಿಂದಿರುಗುವಾಗ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ತಕ್ಷಣವೇ ವಯನಾಡಿನ ಮಾನಂತವಾಡಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ಗಾಯಗೊಂಡ ಎಲ್ಲಾ ಪ್ರಯಾಣಿಕರ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಬರಿಮಲೆ ಮಂಡಲ ಮಹೋತ್ಸವ ಹಾಗೂ ಮಕರಜ್ಯೋತಿ ಉತ್ಸವ ಶುಕ್ರವಾರ(ನವೆಂಬರ್ 15) ಸಂಜೆಯಿಂದಲೇ ಆರಂಭಗೊಂಡಿದ್ದು, ಶನಿವಾರದಿಂದ(ನವೆಂಬರ್ 16) ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.”

Leave a comment

Leave a Reply

Your email address will not be published. Required fields are marked *

Related Articles

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...

ವಿಭಜನೆಯತ್ತ ತೃಣಮೂಲ ಕಾಂಗ್ರೆಸ್  ಬಂಡಾಯ ಸಂಸದರ ಸಂಖ್ಯೆ 20ರ ಮ್ಯಾಜಿಕ್

“ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಹುಕಾಲದಿಂದ ನಡೆಯುತ್ತಿದ್ದ ಅಂತರ್ಯುದ್ಧ ಈಗ ನಿಜವಾಗಿದೆ. ತೃಣಮೂಲ ಕಾಂಗ್ರೆಸ್  ಸ್ಥಾಪಕಿ ಮಮತಾ...