thekarnatakatoday.com
National

ವಯನಾಡು ಶಬರಿಮಲೆ ಯಾತ್ರಿಗಳ ಬಸ್ ಅಪಘಾತ 27 ಮಂದಿಗೆ ಗಾಯ ಆಸ್ಪತ್ರೆಗೆ ದಾಖಲು

“ಶಬರಿಮಲೆ ದೇವಸ್ಥಾನದಿಂದ ವಾಪಸ್ ಬರುತ್ತಿದ್ದ ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರು ಪ್ರಯಾಣಿಸುತ್ತಿದ್ದ ಬಸ್ ಕೇರಳದ ವಯನಾಡಿನ ತಿರುನೆಲ್ಲಿ ಬಳಿ ಮಂಗಳವಾರ ಬೆಳಗ್ಗೆ ಪಲ್ಟಿಯಾಗಿದ್ದು, ಅಪಘಾತದಲ್ಲಿ 27 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಇಬ್ಬರು ಮಕ್ಕಳು ಸೇರಿದಂತೆ 45 ಜನರಿದ್ದ ಬಸ್ ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿ, ಮೈಸೂರಿನ ಹುಣಸೂರಿಗೆ ಹಿಂದಿರುಗುವಾಗ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ತಕ್ಷಣವೇ ವಯನಾಡಿನ ಮಾನಂತವಾಡಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ಗಾಯಗೊಂಡ ಎಲ್ಲಾ ಪ್ರಯಾಣಿಕರ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಬರಿಮಲೆ ಮಂಡಲ ಮಹೋತ್ಸವ ಹಾಗೂ ಮಕರಜ್ಯೋತಿ ಉತ್ಸವ ಶುಕ್ರವಾರ(ನವೆಂಬರ್ 15) ಸಂಜೆಯಿಂದಲೇ ಆರಂಭಗೊಂಡಿದ್ದು, ಶನಿವಾರದಿಂದ(ನವೆಂಬರ್ 16) ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.”

Related posts

ಮಹಾಕುಂಭಮೇಳವನ್ನು ‘ಮೃತ್ಯುಕುಂಭ’ ಎಂದು ಗೇಲಿ ಮಾಡಿದ ಮಮತಾ ಬ್ಯಾನರ್ಜಿಗೆ ಹೋಳಿ ವೇಳೆ ಹಿಂದೂಗಳ ಮೇಲಿನ ಹಲ್ಲೆ ತಡೆಯಲು ಆಗಲಿಲ್ಲ: ಯೋಗಿ ಆದಿತ್ಯನಾಥ್

The Karnataka Today

ಟ್ರೇಡ್ ಯೂನಿಯನ್ ಕಾರ್ಯಕರ್ತನ ಹತ್ಯೆ ಪ್ರಕರಣ ಆರು ಜನ ಪಿಎಫ್ ಐ ಕಾರ್ಯಕರ್ತರಿಗೆ ಎರಡು ಪಟ್ಟು ಜೀವಾವಧಿ ಶಿಕ್ಷೆ ಹಾಗೂ 13,ಲಕ್ಷ ದಂಡ ವಿಧಿಸಿದ ನ್ಯಾಯಾಲಯ

The Karnataka Today

ದೇಶದ ಎಲ್ಲಾ ರಾಜ್ಯಗಳಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಅಮಿತ್ ಶಾ ಸೂಚನೆ

The Karnataka Today

Leave a Comment