ವಯನಾಡು ಶಬರಿಮಲೆ ಯಾತ್ರಿಗಳ ಬಸ್ ಅಪಘಾತ 27 ಮಂದಿಗೆ ಗಾಯ ಆಸ್ಪತ್ರೆಗೆ ದಾಖಲು

82

“ಶಬರಿಮಲೆ ದೇವಸ್ಥಾನದಿಂದ ವಾಪಸ್ ಬರುತ್ತಿದ್ದ ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರು ಪ್ರಯಾಣಿಸುತ್ತಿದ್ದ ಬಸ್ ಕೇರಳದ ವಯನಾಡಿನ ತಿರುನೆಲ್ಲಿ ಬಳಿ ಮಂಗಳವಾರ ಬೆಳಗ್ಗೆ ಪಲ್ಟಿಯಾಗಿದ್ದು, ಅಪಘಾತದಲ್ಲಿ 27 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಇಬ್ಬರು ಮಕ್ಕಳು ಸೇರಿದಂತೆ 45 ಜನರಿದ್ದ ಬಸ್ ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿ, ಮೈಸೂರಿನ ಹುಣಸೂರಿಗೆ ಹಿಂದಿರುಗುವಾಗ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ತಕ್ಷಣವೇ ವಯನಾಡಿನ ಮಾನಂತವಾಡಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ಗಾಯಗೊಂಡ ಎಲ್ಲಾ ಪ್ರಯಾಣಿಕರ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಬರಿಮಲೆ ಮಂಡಲ ಮಹೋತ್ಸವ ಹಾಗೂ ಮಕರಜ್ಯೋತಿ ಉತ್ಸವ ಶುಕ್ರವಾರ(ನವೆಂಬರ್ 15) ಸಂಜೆಯಿಂದಲೇ ಆರಂಭಗೊಂಡಿದ್ದು, ಶನಿವಾರದಿಂದ(ನವೆಂಬರ್ 16) ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.”

Leave a comment

Leave a Reply

Your email address will not be published. Required fields are marked *

Related Articles

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ಡೂಮ್ಸ್ ಡೇ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್

ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ...

ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ...

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ...

ಡ್ರಗ್ಸ್ ಸೇವನೆ ದೃಢಪಟ್ಟ ಹಿನ್ನೆಲೆ ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ

ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ...