ಕಡಲ್ ಪಿಶ್ ಟ್ರೋಫಿ -2024 ಕ್ರೀಡೆಯಲ್ಲಿನ ಸ್ಪರ್ಧಾತ್ಮಕ ಮನೋಭಾವ ಎಲ್ಲರೊಂದಿಗೆ ಭಾಂದವ್ಯ ವೃದ್ಧಿಸುವಂತೆ ಮಾಡುತ್ತದೆ ::ಪ್ರಸಾದ್ ರಾಜ್ ಕಾಂಚನ್

3

ಪಡುಬಿದ್ರಿ :- ಪಡುಬಿದ್ರಿ ಕಡಲ್ ಫಿಶ್ ಕ್ರಿಕೆಟರ್ಸ ವತಿಯಿಂದ ಪಡುಬಿದ್ರಿ ಬೋರ್ಡ್ ಶಾಲಾ ಮೃೆದಾನದಲ್ಲಿ  3 ದಿನ ಕಾಲ  ನಡೆದ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಪಂದ್ಯಕೂಟಯಶಸ್ವಿ ಯಾಗಿ ಮುಕ್ತಾಯಗೊಂಡಿತು.

ಸಮಾರೋಪ ಸಮಾರಂಭದಲ್ಲಿ  ಉಡುಪಿ ಕಾಂಚನ್ ಹುಂಡೃೆ ಅಢಳಿತ ನಿರ್ದೇಶಕ ಪ್ರಸಾದ್ ಕಾಂಚನ್ ಮಾತನಾಡಿ  “ಕ್ರೀಡೆಗಳ ಸ್ಪರ್ಧಾತ್ಮಕ ಸ್ವಭಾವವು , ಅರೋಗ್ಯಕರ ಆತ್ಮವಿಶ್ವಾಸವು ಕ್ರೀಡಾಪಟುಗಳ ಸ್ವಾಭಿಮಾನವನ್ನು ಹೆಚ್ಚಿಸುತ್ತದೆ…ಕ್ರಿಕೆಟ್ ಎಂಬ ಕ್ರೀಡೆ  ಎಲ್ಲರೊಂದಿಗೆ ಬಾಂಧವ್ಯವನ್ನು ಹೆಚ್ಚಿಸುತ್ತದೆ ಅಲ್ಲದೆ ಸಂಘಟಿತ ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೃೆಹಿಕ ಚಟುವಟಿಕೆಯಾಗಿದೆ.ಉಭಯ ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ  ನಡೆದ ಈ ರಾಷ್ಟೀಯ ಮಟ್ಚದ ಕ್ರಿಕೆಟ್ ಪಂದ್ಯಕೂಟ ಇತಿಹಾಸವನ್ನು ಸೃಷ್ಟಿಸಿದೆ  “ಎಂದು ಹೇಳಿದರು

ಕಡಲ್ ಫಿಶ್ ಸಂಸ್ಥೆಯ ಅಧ್ಯಕ್ಷ ಚೇತನ್ ಪಡುಬಿದ್ರಿ ಅಧ್ಯಕ್ಷತೆ ವಹಿಸಿದರು.

ಸಂದರ್ಭದಲ್ಲಿ  ಕಾಪು ಕ್ಷೇತ್ರದ ಮಾಜಿ ಶಾಸಕ ಲಾಲಾಜಿ ಮೆಂಡನ್ , ಸಂಸ್ಥೆಯ ಗೌರವ ಅಧ್ಯಕ್ಷ ನವೀನಚಂದ್ರ ಜೆ ಶೆಟ್ಟಿ , ಮುಂಬೃೆ ಉದ್ಯಮಿ ಜಿತೇಂದ್ರ ಜೆ. ಶೆಟ್ಚಿ , ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ಸುಧೀರ್ ಕುಮಾರ್ ,ಉದ್ಯಮಿಗಳಾದ ಸಂತೋಷ್ ಕುಮಾರ್ ಶೆಟ್ಟಿ , ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಗೌರವ ಅಧ್ಯಕ್ಷ ಶರತ್ ಶೆಟ್ಟಿ ,

ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ ವಿ ಅಮೀನ್, ಕಾಪು ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯ ರಮೀಜ್ ಹುಸೇನ್, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಕರ್ನಾಟಕ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್, ನಂದಿಕೂರು ಎಮ್ ಇಲೆವನ್ ಇಂಡಸ್ಟೀಸ್ ಸೂಪರ್ವೃೆಸರ್ ಅಹಮದ್ ಕಭೀರ್ , ,ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಕರುಣಾಕರ್ ಪೂಜಾರಿ, ಉದ್ಯಮಿಗಳಾದ ಬಾಲಚಂದ್ರ ಶೆಟ್ಟಿ ಪುಣೆ ಎರ್ಮಾಳ್ ಪೂಚ್ಚುಟ್ಟು , ಪ್ರಭಾಕರ್ ಶೆಟ್ಟಿ ಕರ್ನಿರೆ, ಸಂಪತ್ ಶೆಟ್ಟಿ ಕರ್ನಿರೆ ,ರಕ್ಷಿತ್ ಶೆಟ್ಟಿ ‌ಕರ್ನಿರೆ, ಮತ್ಸೋದ್ಯಮಿ ತಿಲಕ್ ರಾಜ್ ಮಲ್ಪೆ,

ಮಂಗಳೂರು ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್ ಪ್ರೇಮ ವಾಸುದೇವ್ , ಕರ್ನಾಟಕ ಪಬ್ಲಿಕ್ ಸ್ಕೂಲ್ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃಷ್ಣ ಬಂಗೇರ, ಕಡಲ್ ಫಿಶ್ ಸಂಸ‌್ಥೆಯ ಅಧ್ಯಕ್ಷ ಪ್ರಶಾಂತ್ ಸಾಲ್ಯಾನ್, ಪಡುಬಿದ್ರಿ ಗ್ರಾ.ಪಂ ಮಾಜಿ ಉಪಾಧ್ಯಕ್ಷೆ ಯಶೋಧ ಪಡುಬಿದ್ರಿ, ಸದಸ್ಯರಾದ ಮುಬೀನಾ ಬೇಗಂ, ಸುನಂದಾ ದೇವಾಡಿಗ, ಮಹಮ್ಮದ್ ನಿಯಾಝ್ ಉಪಸ್ಥಿತರಿದ್ದರು… ಸಂತೋಷ್ ಪಡುಬಿದ್ರಿ ಸ್ವಾಗತಿಸಿ , ಸಂತೋಷ್ ನಂಬಿಯಾರ್ ನಿರೂಪಿಸಿ , ವಂದಿಸಿದರು.

ಕೊನೆಯ ದಿನ ನಡೆದ ಪಂದ್ಯಕೂಟದಲ್ಲಿ  ಸಮಿಫೃೆನಲ್ ಪಂದ್ಯದಲ್ಲಿ ವಿಷ್ಣುಮೂರ್ತಿ ಕರ್ನಿರೆ ತಂಡ ಹೆಜಮಾಡಿ ದುರ್ಗ ಎಜಿಫ್ ತಂಡವನ್ನು ಸೋಲಿಸಿ ಫೃೆನಲ್ ಪ್ರವೇಶಿಸಿತು..ಬಹಳ ರೋಮಾಂಚಕಾರಿಯಾಗಿ ನಡೆದ ದ್ವಿತೀಯ ಸಮಿಫೃೆನಲ್ ನಲ್ಲಿ ಇಝಾನ್ ಸ್ಪೋರ್ಟ್ಸ್ ಉಡುಪಿ ತಂಡ ಮತ್ತು ಪಂಚ್ಯಜನ್ಯಾ ಕೋಟ ತಂಡದ ವಿರುದ್ಧ ನಡೆದ ಪಂದ್ಯ ಟೃೆ ಗೊಂಡು ನಂತರ ನಡೆದ ಸೂಪರ್ ಓವರ್ ನಲ್ಲಿ ಪಂದ್ಯದಲ್ಲಿ ಪಂಚ್ಯಾಜನ್ಯ ತಂಡ ವನ್ನು ಮಣಿಸಿ ಇಝಾನ್ ಸ್ಪೋರ್ಟ್ಸ್ ಉಡುಪಿ ಫೈನಲ್ ಪ್ರವೇಶಿಸಿತು..

ನಂತರ ನಡೆದ ಫೃೆನಲ್ ಹಣಾಹಣಿಯಲ್ಲಿ ಇಝಾನ್ ಸ್ಪೋರ್ಟ್ಸ್ ಉಡುಪಿ ತಂಡ ವಿಷ್ಣುಮೂರ್ತಿ ಕರ್ನಿರೆ ತಂಡವನ್ನು ನಿರಾಯಾಸವಾಗಿ ಮಣಿಸಿ ಕಡಲ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು… ಫೃೆನಲ್ ಪಂದ್ಯದ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಇಝಾನ್ ಸ್ಪೋರ್ಟ್ಸ್ ಉಡುಪಿ ತಂಡದ ತರುಣ್ ಪಡುಬಿದ್ರಿ , ಉತ್ತಮ ದಾಂಡಿಗ ಪ್ರಶಸ್ತಿ ಯನ್ನು ದುರ್ಗ ‌ಎಜಿಎಫ್ ತಂಡದ ಇರ್ಫಾನ್ ಹೆಜಮಾಡಿ , ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಇಝಾನ್ ಸ್ಪೋರ್ಟ್ಸ್ ತಂಡದ ಇರ್ಪಾನ್ ಪಟೇಲ್ ಮಧ್ಯಪ್ರದೇಶ್

, ಉತ್ತಮ ಎಸೆತಗಾರ ಪ್ರಶಸ್ತಿಯನ್ನು ವಿಷ್ಣುಮೂರ್ತಿ ಕರ್ನಿರೆ ತಂಡದ ಸುದರ್ಶನ್, ಬೆಸ್ಟ್ ಫಿಲ್ಡರ್ ಪ್ರಶಸ್ತಿಯನ್ನು ವಿಷ್ಣುಮೂರ್ತಿ ಕರ್ನಿರೆ ತಂಡದ ಪ್ರಸಿದ್ಧ್ ಅಚಾರ್ಯ, ಬೆಸ್ಟ್ ಕೀಪರ್ ಪ್ರಶಸ್ತಿ ಯನ್ನು ವಿಷ್ಣುಮೂರ್ತಿ ಕರ್ನಿರೆ ತಂಡದ ಜೀತು , ಶಿಸ್ತುಬದ್ಧ ತಂಡ ಪ್ರಶಸ್ತಿ ಯನ್ನು ಫ್ರೆಂಡ್ಸ್ ಕಂಚಿನಡ್ಕ ತಂಡ ಪಡೆದು ಕೊಂಡರು .. ಈ ಸಂದರ್ಭದಲ್ಲಿ ರಾಷ್ಟ್ರೀಯ ಅತ್ಲೆಟಿಕ್ ಕೀಡಾಪಟು ಅನುರಾಗ್ ಜಿ. ರವರನ್ನು ಸನ್ಮಾನಿಸಲಾಯಿತು.

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...