ಅಸ್ಸಾಂ ರಾಜ್ಯದ ಕರಿಮ್ ಗಂಜ್ ಜಿಲ್ಲೆಯ ಹೆಸರನ್ನು ಶ್ರೀ ಭೂಮಿ ಜಿಲ್ಲೆ ಯೆಂದು ಮರುನಾಮಕರಣ ಮಾಡಿದ ರಾಜ್ಯ ಸರಕಾರ

73

“: ಅಸ್ಸಾಂ ಸರ್ಕಾರ ಗುರುವಾರ ಕರೀಂಗಂಜ್ ಜಿಲ್ಲೆಯ ಹೆಸರು ಬದಲಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದು, ಬರಾಕ್ ಕಣಿವೆಯಲ್ಲಿರುವ ಜಿಲ್ಲೆಯನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಲಾಗಿದೆ.

ಜಿಲ್ಲಾ ಕೇಂದ್ರ ಕರೀಂಗಂಜ್ ಪಟ್ಟಣವನ್ನು ಶ್ರೀಭೂಮಿ ಪಟ್ಟಣ ಎಂದು ಮರುನಾಮಕರಣ ಮಾಡಲಾಗಿದೆ. ಅಸ್ಸಾಂ ರಾಜ್ಯಪಾಲರ ಆದೇಶದಂತೆ ಕರೀಂಗಂಜ್ ಜಿಲ್ಲೆಯನ್ನು ಶ್ರೀಭೂಮಿ ಜಿಲ್ಲೆ ಮತ್ತು ಕರೀಂಗಂಜ್ ಪಟ್ಟಣವನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಿ ಸಾಮಾನ್ಯ ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುಖೇಶ್ ಚಂದ್ರ ಸಾಹು ಅವರು ಅಧಿಸೂಚನೆ ಹೊರಡಿಸಿದ್ದಾರೆ.

ಈ ಬದಲಾವಣೆಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಅವರು ತಿಳಿಸಿದ್ದಾರೆ. ಕರೀಂಗಂಜ್ ಜಿಲ್ಲೆಯನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಲು ಅಸ್ಸಾಂ ಕ್ಯಾಬಿನೆಟ್ ಮಂಗಳವಾರ ಒಪ್ಪಿಗೆ ನೀಡಿತ್ತು.

“100 ವರ್ಷಗಳ ಹಿಂದೆ, ಕಬಿಗುರು ರವೀಂದ್ರನಾಥ ಠಾಗೋರ್ ಅವರು ಅಸ್ಸಾಂನ ಆಧುನಿಕ ಕರೀಂಗಂಜ್ ಜಿಲ್ಲೆಯನ್ನು ಶ್ರೀಭೂಮಿ – ಮಾ ಲಕ್ಷ್ಮಿಯ ನಾಡು ಎಂದು ಬಣ್ಣಿಸಿದ್ದರು.

ಇಂದು, ಅಸ್ಸಾಂ ಕ್ಯಾಬಿನೆಟ್ ನಮ್ಮ ಜನರ ಈ ಬಹುಕಾಲದ ಬೇಡಿಕೆಯನ್ನು ಈಡೇರಿಸಿದೆ” ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಂಪುಟ ಸಭೆಯ ನಂತರ ಹೇಳಿದ್ದರು

Leave a comment

Leave a Reply

Your email address will not be published. Required fields are marked *

Related Articles

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...

ವಿಭಜನೆಯತ್ತ ತೃಣಮೂಲ ಕಾಂಗ್ರೆಸ್  ಬಂಡಾಯ ಸಂಸದರ ಸಂಖ್ಯೆ 20ರ ಮ್ಯಾಜಿಕ್

“ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಹುಕಾಲದಿಂದ ನಡೆಯುತ್ತಿದ್ದ ಅಂತರ್ಯುದ್ಧ ಈಗ ನಿಜವಾಗಿದೆ. ತೃಣಮೂಲ ಕಾಂಗ್ರೆಸ್  ಸ್ಥಾಪಕಿ ಮಮತಾ...