ಅಸ್ಸಾಂ ರಾಜ್ಯದ ಕರಿಮ್ ಗಂಜ್ ಜಿಲ್ಲೆಯ ಹೆಸರನ್ನು ಶ್ರೀ ಭೂಮಿ ಜಿಲ್ಲೆ ಯೆಂದು ಮರುನಾಮಕರಣ ಮಾಡಿದ ರಾಜ್ಯ ಸರಕಾರ

80

“: ಅಸ್ಸಾಂ ಸರ್ಕಾರ ಗುರುವಾರ ಕರೀಂಗಂಜ್ ಜಿಲ್ಲೆಯ ಹೆಸರು ಬದಲಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದು, ಬರಾಕ್ ಕಣಿವೆಯಲ್ಲಿರುವ ಜಿಲ್ಲೆಯನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಲಾಗಿದೆ.

ಜಿಲ್ಲಾ ಕೇಂದ್ರ ಕರೀಂಗಂಜ್ ಪಟ್ಟಣವನ್ನು ಶ್ರೀಭೂಮಿ ಪಟ್ಟಣ ಎಂದು ಮರುನಾಮಕರಣ ಮಾಡಲಾಗಿದೆ. ಅಸ್ಸಾಂ ರಾಜ್ಯಪಾಲರ ಆದೇಶದಂತೆ ಕರೀಂಗಂಜ್ ಜಿಲ್ಲೆಯನ್ನು ಶ್ರೀಭೂಮಿ ಜಿಲ್ಲೆ ಮತ್ತು ಕರೀಂಗಂಜ್ ಪಟ್ಟಣವನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಿ ಸಾಮಾನ್ಯ ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುಖೇಶ್ ಚಂದ್ರ ಸಾಹು ಅವರು ಅಧಿಸೂಚನೆ ಹೊರಡಿಸಿದ್ದಾರೆ.

ಈ ಬದಲಾವಣೆಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಅವರು ತಿಳಿಸಿದ್ದಾರೆ. ಕರೀಂಗಂಜ್ ಜಿಲ್ಲೆಯನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಲು ಅಸ್ಸಾಂ ಕ್ಯಾಬಿನೆಟ್ ಮಂಗಳವಾರ ಒಪ್ಪಿಗೆ ನೀಡಿತ್ತು.

“100 ವರ್ಷಗಳ ಹಿಂದೆ, ಕಬಿಗುರು ರವೀಂದ್ರನಾಥ ಠಾಗೋರ್ ಅವರು ಅಸ್ಸಾಂನ ಆಧುನಿಕ ಕರೀಂಗಂಜ್ ಜಿಲ್ಲೆಯನ್ನು ಶ್ರೀಭೂಮಿ – ಮಾ ಲಕ್ಷ್ಮಿಯ ನಾಡು ಎಂದು ಬಣ್ಣಿಸಿದ್ದರು.

ಇಂದು, ಅಸ್ಸಾಂ ಕ್ಯಾಬಿನೆಟ್ ನಮ್ಮ ಜನರ ಈ ಬಹುಕಾಲದ ಬೇಡಿಕೆಯನ್ನು ಈಡೇರಿಸಿದೆ” ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಂಪುಟ ಸಭೆಯ ನಂತರ ಹೇಳಿದ್ದರು

Leave a comment

Leave a Reply

Your email address will not be published. Required fields are marked *

Related Articles

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ಡೂಮ್ಸ್ ಡೇ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್

ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ...

ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ...

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ...

ಡ್ರಗ್ಸ್ ಸೇವನೆ ದೃಢಪಟ್ಟ ಹಿನ್ನೆಲೆ ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ

ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ...