ಅಸ್ಸಾಂ ರಾಜ್ಯದ ಕರಿಮ್ ಗಂಜ್ ಜಿಲ್ಲೆಯ ಹೆಸರನ್ನು ಶ್ರೀ ಭೂಮಿ ಜಿಲ್ಲೆ ಯೆಂದು ಮರುನಾಮಕರಣ ಮಾಡಿದ ರಾಜ್ಯ ಸರಕಾರ

67

“: ಅಸ್ಸಾಂ ಸರ್ಕಾರ ಗುರುವಾರ ಕರೀಂಗಂಜ್ ಜಿಲ್ಲೆಯ ಹೆಸರು ಬದಲಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದು, ಬರಾಕ್ ಕಣಿವೆಯಲ್ಲಿರುವ ಜಿಲ್ಲೆಯನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಲಾಗಿದೆ.

ಜಿಲ್ಲಾ ಕೇಂದ್ರ ಕರೀಂಗಂಜ್ ಪಟ್ಟಣವನ್ನು ಶ್ರೀಭೂಮಿ ಪಟ್ಟಣ ಎಂದು ಮರುನಾಮಕರಣ ಮಾಡಲಾಗಿದೆ. ಅಸ್ಸಾಂ ರಾಜ್ಯಪಾಲರ ಆದೇಶದಂತೆ ಕರೀಂಗಂಜ್ ಜಿಲ್ಲೆಯನ್ನು ಶ್ರೀಭೂಮಿ ಜಿಲ್ಲೆ ಮತ್ತು ಕರೀಂಗಂಜ್ ಪಟ್ಟಣವನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಿ ಸಾಮಾನ್ಯ ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುಖೇಶ್ ಚಂದ್ರ ಸಾಹು ಅವರು ಅಧಿಸೂಚನೆ ಹೊರಡಿಸಿದ್ದಾರೆ.

ಈ ಬದಲಾವಣೆಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಅವರು ತಿಳಿಸಿದ್ದಾರೆ. ಕರೀಂಗಂಜ್ ಜಿಲ್ಲೆಯನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಲು ಅಸ್ಸಾಂ ಕ್ಯಾಬಿನೆಟ್ ಮಂಗಳವಾರ ಒಪ್ಪಿಗೆ ನೀಡಿತ್ತು.

“100 ವರ್ಷಗಳ ಹಿಂದೆ, ಕಬಿಗುರು ರವೀಂದ್ರನಾಥ ಠಾಗೋರ್ ಅವರು ಅಸ್ಸಾಂನ ಆಧುನಿಕ ಕರೀಂಗಂಜ್ ಜಿಲ್ಲೆಯನ್ನು ಶ್ರೀಭೂಮಿ – ಮಾ ಲಕ್ಷ್ಮಿಯ ನಾಡು ಎಂದು ಬಣ್ಣಿಸಿದ್ದರು.

ಇಂದು, ಅಸ್ಸಾಂ ಕ್ಯಾಬಿನೆಟ್ ನಮ್ಮ ಜನರ ಈ ಬಹುಕಾಲದ ಬೇಡಿಕೆಯನ್ನು ಈಡೇರಿಸಿದೆ” ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಂಪುಟ ಸಭೆಯ ನಂತರ ಹೇಳಿದ್ದರು

Leave a comment

Leave a Reply

Your email address will not be published. Required fields are marked *

Related Articles

ಪಂಜಾಬ್‌ನ ಜಲಂಧರ್‌ ಹಾಗೂ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಎರಡು ಬಾಂಬ್ ಸ್ಫೋಟ ಕಚ್ ಜಿಲ್ಲೆಯ ತೊರೆ ಪ್ರದೇಶದಲ್ಲಿ ಶಂಕಿತ ಪಾಕಿಸ್ತಾನಿ ದೋಣಿ ಪತ್ತೆ

“ಪಂಜಾಬ್‌ನ ಜಲಂಧರ್‌ ಹಾಗೂ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಸತತ ಎರಡು ಬಾಂಬ್ ಸ್ಫೋಟಗಳು ಸಂಭವಿಸಿದ...

ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ, ಒದ್ದು ಹೊರಹಾಕಿ ::ವಕೀಲ ಮಹೇಶ್ ಜೇಠ್ಮಲಾನಿ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶಗಳ ನಂತರ ರಾಜಕೀಯ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಮತಾ ಬ್ಯಾನರ್ಜಿ...

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ ಮೇ 7 ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

ತಮಿಳುನಾಡು ನಟ-ರಾಜಕಾರಣಿ ವಿಜಯ್ ತಮಿಳುನಾಡು ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು....

ಪಂಚರಾಜ್ಯ ಚುನಾವಣೆ ಪಶ್ಚಿಮ ಬಂಗಾಳ ಅಸ್ಸಾಂ, ಬಿಜೆಪಿ ಕೇರಳ ಯುಡಿಎಫ್ ತಮಿಳುನಾಡು ನಟ ವಿಜಯ್ ನೇತೃತ್ವದ ಟಿವಿಕೆ, ಪುದುಚೆರಿಯಲ್ಲಿ ಎನ್‌ಡಿಎ ಮೈತ್ರಿಕೂಟ ಮುನ್ನಡೆ

ತೀವ್ರ ಕುತೂಹಲ ಕೆರಳಿಸಿದ್ದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶಗಳು ಹೊರ ಬೀಳುತ್ತಿದ್ದು, ತಮಿಳುನಾಡಿನಲ್ಲಿ ನಟ...