ಅಸ್ಸಾಂ ರಾಜ್ಯದ ಕರಿಮ್ ಗಂಜ್ ಜಿಲ್ಲೆಯ ಹೆಸರನ್ನು ಶ್ರೀ ಭೂಮಿ ಜಿಲ್ಲೆ ಯೆಂದು ಮರುನಾಮಕರಣ ಮಾಡಿದ ರಾಜ್ಯ ಸರಕಾರ

2

“: ಅಸ್ಸಾಂ ಸರ್ಕಾರ ಗುರುವಾರ ಕರೀಂಗಂಜ್ ಜಿಲ್ಲೆಯ ಹೆಸರು ಬದಲಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದು, ಬರಾಕ್ ಕಣಿವೆಯಲ್ಲಿರುವ ಜಿಲ್ಲೆಯನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಲಾಗಿದೆ.

ಜಿಲ್ಲಾ ಕೇಂದ್ರ ಕರೀಂಗಂಜ್ ಪಟ್ಟಣವನ್ನು ಶ್ರೀಭೂಮಿ ಪಟ್ಟಣ ಎಂದು ಮರುನಾಮಕರಣ ಮಾಡಲಾಗಿದೆ. ಅಸ್ಸಾಂ ರಾಜ್ಯಪಾಲರ ಆದೇಶದಂತೆ ಕರೀಂಗಂಜ್ ಜಿಲ್ಲೆಯನ್ನು ಶ್ರೀಭೂಮಿ ಜಿಲ್ಲೆ ಮತ್ತು ಕರೀಂಗಂಜ್ ಪಟ್ಟಣವನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಿ ಸಾಮಾನ್ಯ ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುಖೇಶ್ ಚಂದ್ರ ಸಾಹು ಅವರು ಅಧಿಸೂಚನೆ ಹೊರಡಿಸಿದ್ದಾರೆ.

ಈ ಬದಲಾವಣೆಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಅವರು ತಿಳಿಸಿದ್ದಾರೆ. ಕರೀಂಗಂಜ್ ಜಿಲ್ಲೆಯನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಲು ಅಸ್ಸಾಂ ಕ್ಯಾಬಿನೆಟ್ ಮಂಗಳವಾರ ಒಪ್ಪಿಗೆ ನೀಡಿತ್ತು.

“100 ವರ್ಷಗಳ ಹಿಂದೆ, ಕಬಿಗುರು ರವೀಂದ್ರನಾಥ ಠಾಗೋರ್ ಅವರು ಅಸ್ಸಾಂನ ಆಧುನಿಕ ಕರೀಂಗಂಜ್ ಜಿಲ್ಲೆಯನ್ನು ಶ್ರೀಭೂಮಿ – ಮಾ ಲಕ್ಷ್ಮಿಯ ನಾಡು ಎಂದು ಬಣ್ಣಿಸಿದ್ದರು.

ಇಂದು, ಅಸ್ಸಾಂ ಕ್ಯಾಬಿನೆಟ್ ನಮ್ಮ ಜನರ ಈ ಬಹುಕಾಲದ ಬೇಡಿಕೆಯನ್ನು ಈಡೇರಿಸಿದೆ” ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಂಪುಟ ಸಭೆಯ ನಂತರ ಹೇಳಿದ್ದರು

Leave a comment

Leave a Reply

Your email address will not be published. Required fields are marked *

Related Articles

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

2008 ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಮುಂಬೈ: 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್,...