ಹೆಬ್ರಿ ನಕ್ಸಲೆಟ್ ಎನ್ ಕೌಂಟರ್ ಪ್ರಕರಣ ತನಿಖೆಗಾಗಿ ಅಮಾಯಕನ ಬಂಧನ ಸಿಡಿದೆದ್ದ ಗ್ರಾಮಸ್ಥರು ಬಳಿಕ ಬಿಡುಗಡೆ

48

ಪೊಲೀಸ್ ಇಲಾಖೆ,ಅರಣ್ಯ ಇಲಾಖೆ ಅಧಿಕಾರಿಗಳ ಕಿರುಕುಳ ಒಳಗಾಗಿ ಕಾಡಿನ ಬದಿಯಲ್ಲಿ ಜೀವನ ನೆಡೆಸುತ್ತಿದ್ದ ಅಮಾಯಕ ಜನರ ಕಷ್ಟ ಇನ್ನೂ ಮುಗಿದ್ದಂತೆ ಇಲ್ಲ ಎನ್ನುವಂತೆ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್‌ ಕೌಂಟರ್ ಪ್ರಕರಣದಲ್ಲಿ

ತನಿಖೆಯ ಕುರಿತಾಗಿ ಘಟನೆ ನಡೆದ ಸ್ಥಳದ ನಿವಾಸಿ ಜಯಂತ್ ಗೌಡ ಅವರನ್ನು ಹೆಬ್ರಿ ಪೊಲೀಸರು ವಿಚಾರಣೆಗೆ ವಶಕ್ಕೆ ಪಡೆದುಕೊಂಡಿದ್ದು, ಈ ಕುರಿತು ಗ್ರಾಮಸ್ಥರು ವಿರೋಧಿಸಿ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ನ. 22 ರಂದು ಶುಕ್ರವಾರ ನಡೆದಿದೆ.

ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಶುಕ್ರವಾರ ಬೆಳಗ್ಗೆ ಹೆಬ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಆತನನ್ನು ವಶಪಡಿಸಿಕೊಂಡು ಹೆಬ್ರಿ ಠಾಣೆಗೆ ಕರೆ ತಂದಿದ್ದಾರೆ.

ಈ ಬಗ್ಗೆ ಆತ ಅಮಾಯಕ ಆತನಿಗೆ ಏನು ತಿಳಿದಿಲ್ಲ ಅಂತವನನ್ನು ಯಾಕೆ ಠಾಣೆಗೆ ಕರೆದುಕೊಂಡು ಬಂದಿದ್ದೀರಿ ಅಲ್ಲಿಯ ವಿಚಾರಿಸಬಹುದಿತ್ತಲ್ಲ ಎಂದು ಮಲೆಕುಡಿಯ ಸಮಾಜದ ಮುಖಂಡರು ಹಾಗೂ ಗ್ರಾಮಸ್ಥರು ಠಾಣಾಧಿಕಾರಿ ಅವರಲ್ಲಿ ಮನವಿ ಮಾಡಿ ಆತನನ್ನು ಕೂಡಲೇ ಬಿಡುವಂತೆ ಒತ್ತಾಯಿಸಿದರು.

ಪ್ರತಿಭಟನಾಕಾರರ ಹೋರಾಟಕ್ಕೆ ಮಣಿದ ಪೊಲೀಸ್ ಇಲಾಖೆ ಮಧ್ಯಾಹ್ನ 3 ಗಂಟೆ ಗೆ ಜಯಂತ್ ಗೌಡರನ್ನು ಬಿಡುಗಡೆಗೊಳಿಸಿತು  ಈ ಸಂದರ್ಭದಲ್ಲಿ ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ ಬಂಗೇರ, ಬಿಜೆಪಿ ಮುಖಂಡ ಸುಧಾಕರ ಹೆಗ್ಡೆ, ಶೇಖರ್ ತಾಣ  ಮತ್ತಿತರು ಉಪಸ್ಥಿತರಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ...

ಪೂರ್ಣಿಮಾ ಶೆಟ್ಟಿಗೆ ‘ಮಾನವ ಹಕ್ಕುಗಳ ಸಬಲೀಕರಣ ಮಾನವೀಯ ಶ್ರೇಷ್ಠತೆ’ ಪ್ರಶಸ್ತಿ ಗೌರವ

ಸಾಮಾಜಿಕ ಸೇವಾ ಕಾರ್ಯಕರ್ತೆ ಹಾಗೂ ‘ವಸುದೈವ ಕುಟುಂಬಕಂ’ ಎನ್‌ಜಿಒ ಸಂಸ್ಥೆಯ ಸಂಸ್ಥಾಪಕಿ ಪೂರ್ಣಿಮಾ ಶೆಟ್ಟಿ ಅವರಿಗೆ...