ಪೊಲೀಸ್ ಇಲಾಖೆ,ಅರಣ್ಯ ಇಲಾಖೆ ಅಧಿಕಾರಿಗಳ ಕಿರುಕುಳ ಒಳಗಾಗಿ ಕಾಡಿನ ಬದಿಯಲ್ಲಿ ಜೀವನ ನೆಡೆಸುತ್ತಿದ್ದ ಅಮಾಯಕ ಜನರ ಕಷ್ಟ ಇನ್ನೂ ಮುಗಿದ್ದಂತೆ ಇಲ್ಲ ಎನ್ನುವಂತೆ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್ ಕೌಂಟರ್ ಪ್ರಕರಣದಲ್ಲಿ
ತನಿಖೆಯ ಕುರಿತಾಗಿ ಘಟನೆ ನಡೆದ ಸ್ಥಳದ ನಿವಾಸಿ ಜಯಂತ್ ಗೌಡ ಅವರನ್ನು ಹೆಬ್ರಿ ಪೊಲೀಸರು ವಿಚಾರಣೆಗೆ ವಶಕ್ಕೆ ಪಡೆದುಕೊಂಡಿದ್ದು, ಈ ಕುರಿತು ಗ್ರಾಮಸ್ಥರು ವಿರೋಧಿಸಿ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ನ. 22 ರಂದು ಶುಕ್ರವಾರ ನಡೆದಿದೆ.
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಶುಕ್ರವಾರ ಬೆಳಗ್ಗೆ ಹೆಬ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಆತನನ್ನು ವಶಪಡಿಸಿಕೊಂಡು ಹೆಬ್ರಿ ಠಾಣೆಗೆ ಕರೆ ತಂದಿದ್ದಾರೆ.
ಈ ಬಗ್ಗೆ ಆತ ಅಮಾಯಕ ಆತನಿಗೆ ಏನು ತಿಳಿದಿಲ್ಲ ಅಂತವನನ್ನು ಯಾಕೆ ಠಾಣೆಗೆ ಕರೆದುಕೊಂಡು ಬಂದಿದ್ದೀರಿ ಅಲ್ಲಿಯ ವಿಚಾರಿಸಬಹುದಿತ್ತಲ್ಲ ಎಂದು ಮಲೆಕುಡಿಯ ಸಮಾಜದ ಮುಖಂಡರು ಹಾಗೂ ಗ್ರಾಮಸ್ಥರು ಠಾಣಾಧಿಕಾರಿ ಅವರಲ್ಲಿ ಮನವಿ ಮಾಡಿ ಆತನನ್ನು ಕೂಡಲೇ ಬಿಡುವಂತೆ ಒತ್ತಾಯಿಸಿದರು.
ಪ್ರತಿಭಟನಾಕಾರರ ಹೋರಾಟಕ್ಕೆ ಮಣಿದ ಪೊಲೀಸ್ ಇಲಾಖೆ ಮಧ್ಯಾಹ್ನ 3 ಗಂಟೆ ಗೆ ಜಯಂತ್ ಗೌಡರನ್ನು ಬಿಡುಗಡೆಗೊಳಿಸಿತು ಈ ಸಂದರ್ಭದಲ್ಲಿ ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ ಬಂಗೇರ, ಬಿಜೆಪಿ ಮುಖಂಡ ಸುಧಾಕರ ಹೆಗ್ಡೆ, ಶೇಖರ್ ತಾಣ ಮತ್ತಿತರು ಉಪಸ್ಥಿತರಿದ್ದರು.