ರಾಜ್ಯ ವಿಧಾನಸಭಾ ಉಪಚುನಾವಣೆ ಮೂರು ಕ್ಷೇತ್ರಗಳಲ್ಲಿ ಜಯಗಳಿಸಿದ ಕಾಂಗ್ರೆಸ್ ಬಿಜೆಪಿಗೆ ಮುಖಭಂಗ

56

ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಈಗ ಪ್ರಕಟವಾಗಿದೆ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯಶಾಲಿಯಾಗಿದೆ.

ಮೊದಲಿಂದಲೂ ಕಾರ್ಯಕರ್ತರ ಪಕ್ಷ ಅಂತ ಹೇಳಿಕೊಂಡು ಬರುತ್ತಿದ್ದ ಬಿಜೆಪಿ ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ಕೆಲವು ನಾಯಕರು ತಮ್ಮ ಮಕ್ಕಳನ್ನು ಬೆಳೆಸುವ ಉದ್ದೇಶದಿಂದ

ಪಕ್ಷದಲ್ಲಿ ಬಣ ರಾಜಕೀಯ ಮಾಡಿಕೊಂಡು ಕಾರ್ಯಕರ್ತರನ್ನು ಮೂಲೆಗುಂಪು ಮಾಡಿರುವುದು ಮತ್ತು ವಿರೋಧ ಪಕ್ಷವಾಗಿ ಸರಕಾರದ ತಪ್ಪು ನಡೆ ಮತ್ತು ಅಕ್ರಮಗಳ ವಿರುದ್ಧವಾಗಿ ಹೋರಾಡುವುದರಲ್ಲಿ ವಿಫಲವಾಗಿರುವುದು,

ಈ ಚುನಾವಣೆಯಲ್ಲಿ ಸೋಲಿಗೆ ಕಾರಣವಾಗಿದೆ ಎಂದು ಕಾರ್ಯಕರ್ತರ ವಾದವಾಗಿದೆ

ಬಿಜೆಪಿಗೆ ಬಾರಿ ಮುಖಭಂಗವಾಗಿದೆ ಇಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಮಾಜಿ ಮುಖ್ಯಮಂತ್ರಿಗಳ ಪುತ್ರರಿಗೆ ಸೋಲಾಗಿದೆ.

ಸಿದ್ಧಾಂತದ ಬಗ್ಗೆ ಮಾತನಾಡುವ ಬಿಜೆಪಿ ಹಾಗೂ ಜೆಡಿಎಸ್ ನ ವಂಶಪಾರಂಪರ್ಯ ರಾಜಕೀಯಕ್ಕೆ ಸರಿಯಾದ ಉತ್ತರ ಮತದಾರರು ಕೊಟ್ಟಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಯವರನ್ನು ಸೋಲಿಸಿ ಸಿಪಿ ಯೋಗೇಶ್ವರ್ ವಿಜಯಶಾಲಿಯಾಗಿದ್ದಾರೆ

.ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ ಅನ್ನಪೂರ್ಣ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಜಯಗಳಿಸಿದ್ದಾರೆ
ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ‌ ಅಹಮದ್ ಖಾನ್ ಪಠಾಣ್ ಅವರು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ವಿರುದ್ಧ ಗೆಲುವು ಸಾಧಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...

ರಾಜ್ಯಪಾಲರಿಗೆ ಅಪಮಾನ; ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ‘ಅವಮಾನಿಸಿದ ಮತ್ತು...

ಮುಂಬೈ ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕಾಗಿ ಚುನಾವಣೆ ಗರಿಗೆದರಿದ ರಾಜಕೀಯ ಪಕ್ಷಗಳ ಮೈತ್ರಿ

“: ಬೃಹನ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಚ್ಚರಿ ರೀತಿಯಲ್ಲಿ ಬದ್ಧ ವೈರಿಗಳಾದ ಬಿಜೆಪಿ ಹಾಗೂ ಶಿವಸೇನಾ...