ಜಾರ್ಖಂಡ್ ನೂತನ ಮುಖ್ಯಮಂತ್ರಿ ಯಾಗಿ ಹೇಮಂತ್ ಸೊರೆನ್ ನ್ ನವೆಂಬರ್ 28ಕ್ಕೆ ಪ್ರಮಾಣವಚನ ಸ್ವೀಕಾರ

71

“ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಅವರು ನವೆಂಬರ್ 28 ರಂದು ಜಾರ್ಖಂಡ್ ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಅದ್ದೂರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿದಂತೆ ವಿರೋಧ ಪಕ್ಷದ ಪ್ರಮುಖ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.

ಇಂದು ಸಂಜೆ ರಾಜಭವನದಲ್ಲಿ ರಾಜ್ಯಪಾಲ ಸಂತೋಷ್ ಗಂಗ್ವಾರ್ ಅವರನ್ನು ಭೇಟಿ ಮಾಡಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹೇಮಂತ್ ಸೊರೆನ್, ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆ ಪ್ರಕ್ರಿಯೆ ಆರಂಭವಾಗಿದ್ದು, ನವೆಂಬರ್ 28 ರಂದು ಪದ ಗ್ರಹಣ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು

ಇದಕ್ಕೂ ಮುನ್ನಾ ಪಕ್ಷದ ಕಚೇರಿಯಲ್ಲಿ ನಡೆದ ಜೆ ಎಮ್ ಎಮ್  ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಹೇಮಂತ್ ಸೊರೆನ್ ಅವರನ್ನು ನೂತನ ಶಾಸಕರ ಸರ್ವಾನುಮತದಿಂದ ಆಯ್ಕೆ ಮಾಡಿದರು.

ಇತ್ತೀಚಿಗೆ ನಡೆದ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಹೇಮಂತ್ ಸೊರೆನ್ ಅವರ ಪಕ್ಷ 34, ಕಾಂಗ್ರೆಸ್ 16, ಆರ್ ಜೆಡಿ 4 ಮತ್ತು ಸಿಪಿಐ- ಎಂಎಲ್ 2 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಎರಡನೇ ಅವಧಿಯಲ್ಲೂ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಸರ್ಕಾರ ರಚಿಸುವಲ್ಲಿ ಹಾದಿ ಸುಗಮವಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಚೀನಾ ಪಾಕಿಸ್ತಾನ ಬಾಂಗ್ಲಾ ದೇಶದ ಗಡಿ ಪ್ರದೇಶದ ರಾಜ್ಯಗಳ ರೈಲ್ವೆ ಮೂಲಭೂತ ಸೌಲಭ್ಯ ಹೆಚ್ಚಳಕ್ಕೆ ಆದ್ಯತೆ ನೀಡಿದ ಕೇಂದ್ರ ಸರಕಾರ

“ನವದೆಹಲಿ: ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ತನ್ನ ಗಡಿಗಳಲ್ಲಿ ರೈಲ್ವೆ ಮೂಲಸೌಕರ್ಯವನ್ನು ನವೀಕರಿಸಲು ಭಾರತ 45,000...

ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ವಿಪಕ್ಷೀಯರ ಮೇಲೆ ಅಶ್ಲೀಲ ಪದ ಬಳಕೆ ನಿಲ್ಲಿಸಲಿ; ರಾಜ್ ಠಾಕ್ರೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಸದಸ್ಯರಿಗೆ ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ...

ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಕೇಂದ್ರ ಜಲಶಕ್ತಿ ಸಚಿವಾಲಯ

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ...

ಕಾಕ್ರೋಚ್ ಜನತಾ ಪಕ್ಷಕ್ಕೆ 1 ಕೋಟಿ ದೇಣಿಗೆ ನೀಡಿ ಕಾನೂನು ನೆರವು ಉಚಿತ ಎಂದ ಕಪಿಲ್ ಸಿಬಲ್

“ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು...