ಮಹಾರಾಷ್ಟ್ರ: ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ ಡಿಜಿಪಿಯಾಗಿ ಮರು ನೇಮಕ

45
ವಿವಾದಿತ ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ ಡಿಜಿಪಿಯಾಗಿ ಮರು ನೇಮಕ ಚುನಾವಣೆಗೆ ಮುನ್ನ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಶುಕ್ಲಾ ಅವರನ್ನು ಡಿಜಿಪಿ ಹುದ್ದೆಯಿಂದ ವಜಾಗೊಳಿಸಿದ ನಂತರ ಸಂಜಯ್ ಕುಮಾರ್ ವರ್ಮಾ ಅವರು ಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ


ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಮುಗಿದ ನಂತರ ವಿವಾದಿತ ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ ಅವರನ್ನು ಪೊಲೀಸ್ ಮಹಾನಿರ್ದೇಶಕರಾಗಿ  ಮರುನೇಮಕಗೊಳಿಸಿ ರಾಜ್ಯ ಗೃಹ ಇಲಾಖೆ ಸೋಮವಾರ ಸಂಜೆ ಆದೇಶ ಹೊರಡಿಸಿದೆ.

ಚುನಾವಣೆಗೆ ಮುನ್ನ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಶುಕ್ಲಾ ಅವರನ್ನು ಡಿಜಿಪಿ ಹುದ್ದೆಯಿಂದ ವಜಾಗೊಳಿಸಿದ ನಂತರ ಸಂಜಯ್ ಕುಮಾರ್ ವರ್ಮಾ ಅವರು ಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಶುಕ್ಲಾ ಅವರನ್ನು ಚುನಾವಣೆಯಿಂದ ದೂರವಿಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತ್ತು.  ಭಾರತೀಯ ಪೊಲೀಸ್ ಸೇವೆಯ ಹಿರಿಯ ಅಧಿಕಾರಿಯಾಗಿರುವ ವರ್ಮಾ ಅವರು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಡಿಜಿಪಿಯಾಗಿ ಇರಬೇಕಿತ್ತು. ಆದರೆ ಚುನಾವಣೆ ವೇಳೆ ಶುಕ್ಲಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು.

ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡು ಚುನಾವಣಾ ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಸೋಮವಾರದಿಂದ ಸ್ಥಗಿತಗೊಂಡಿದೆ ಎಂದು ಗೃಹ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ. ನೀತಿ ಸಂಹಿತೆ ಸ್ಥಗಿತ ಹಿನ್ನೆಲೆಯಲ್ಲಿ ಸರ್ಕಾರ ಶುಕ್ಲಾ ಅವರ ಕಡ್ಡಾಯ ರಜೆ ಅವಧಿಯನ್ನು ಕೊನೆಗೊಳಿಸಿದ್ದು, ಡಿಜಿಪಿಯಾಗಿ ಮುಂದುವರೆಯಲು ಅವರಿಗೆ ಸೂಚಿಸಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟವು ಭರ್ಜರಿ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಂಡಿದೆ.

Leave a comment

Leave a Reply

Your email address will not be published. Required fields are marked *

Related Articles

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಸಂದರ್ಭದಲ್ಲಿ ಮೋದಿ ಸರಕಾರದ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದಂತಹ ಪರಿಸ್ಥಿತಿಯ ನಡುವೆ, ಹಿರಿಯ ಕಾಂಗ್ರೆಸ್ ನಾಯಕ...

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ ಟಿಎಂಸಿಯಲ್ಲಿ ಭುಗಿಲೆದ್ದ ಅಸಮಾಧಾನ

ಕೋಲ್ಕತ್ತಾ: ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ...

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ  ಸೇರಿದಂತೆ 40ಪ್ರಮುಖರು ಬಿಜೆಪಿಗೆ ಸೇರ್ಪಡೆ

“ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿಯಿರುವಂತೆಯೇ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಿದೆ....

ಮಹಿಳೆಯರ ಬಗ್ಗೆ ಅಶ್ಲೀಲ ಹಾಡು ಹಾಡಿದ ರ‍್ಯಾಪರ್ ಬಾದ್‌ಶಾ ಹಣೆಗೆ ನೇರವಾಗಿ ‘ಗುಂಡು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬೆದರಿಕೆ

“ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈಗ ಗಾಯಕ-ರ‍್ಯಾಪರ್ ಬಾದ್‌ಶಾ ಅವರ ಹರಿಯಾಣ ಭಾಷೆಯ ಹಾಡು ‘ಟಟೀರಿ’ ಸುತ್ತಲಿನ...